ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಚಾಮರಾಜನಗರ: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ೨೦೨೩-೨೪ನೇ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-ಜಿರಲ್ಲಿ ಪಡೆದಿರಬೇಕು. ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು. ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ. ೩೩ರಷ್ಟು, ವಿಕಲಚೇತನರು ಹಾಗೂ ತೃತೀಯ ಲಿಂಗಿಗಳಿಗೆ ಶೇ. ೫ರಷ್ಟು ಮೀಸಲಾತಿ ಇರಿಸಿದೆ. ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. (ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಮಾತ್ರ ಇಬ್ಬರಿಗೆ ಅವಕಾಶವಿರುತ್ತದೆ.
ಸ್ವಯಂ ಉದ್ಯೋಗ ನೇರ ಸಾಲ ಯೋಜನೆಗೆ ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಾಗಿದ್ದಲ್ಲಿ ೩ ಲಕ್ಷ ರೂ.ಗಳ ಮಿತಿಯೊಳಗಿರಬೇಕು. ೧೮ ವ? ಮೇಲ್ಪಟ್ಟು ೪೫ ವ?ದ ಒಳಗಿನವರಾಗಿರಬೇಕು. ಯೋಜನೆಯಲ್ಲಿ ಕನಿ? ೫೦ ಸಾವಿರ ರೂ.ಗಳಿಂದ ಗರಿ? ೧ ಲಕ್ಷ ರೂ. ಸಾಲ ಒದಗಿಸಲಾಗುವುದು. ಈ ಮೊತ್ತದಲ್ಲಿ ಶೇ. ೨೦ರ? ಸಹಾಯಧನ ಹಾಗೂ ಶೇ. ೮೦ರ? ಸಾಲವನ್ನು ವಾರ್ಷಿಕ ಶೇ.೪ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು. ೨ ತಿಂಗಳ ವಿರಾಮ ಅವಧಿ ನಂತರ ಸಾಲವನ್ನು ೩೪ ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು.
ಆರ್ಯ ವೈಶ್ಯ ಆಹಾರ ವಾಹಿನಿ ಯೋಜನೆಯ ಸಾಲ ಸೌಲಭ್ಯ ಪಡೆಯಲು ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಾಗಿದ್ದಲ್ಲಿ ೬ ಲಕ್ಷ ರೂ. ಗಳ ಮಿತಿಯೊಳಗಿರಬೇಕು. ೨೧ ವ? ಮೇಲ್ಪಟ್ಟು ೫೫ ವ?ದ ಒಳಗಿನವರಾಗಿರಬೇಕು. ಯೋಜನೆಯಡಿ ಆಹಾರ ವಾಹಿನಿ ಪ್ರಾರಂಭಿಸಲು ಬ್ಯಾಂಕ್, ಸಹಕಾರಿ ಸಂಘಗಳಿಂದ ಸಾಲ ಪಡೆಯಬೇಕು ಹಾಗೂ ನಿಗಮದಿಂದ ಗರಿ? ೨ ಲಕ್ಷ ರೂ.ಗಳ ಸಹಾಯಧನ ನೀಡಲಾಗುವುದು.
ವಾಸವಿ ಜಲಶಕ್ತಿ ಯೋಜನೆಯಡಿ ೨ ರಿಂದ ೫ ಎಕರೆ ಕೃಷಿ ಭೂಮಿ ಹೊಂದಿರುವವರಿಗೆ ನೀರಾವರಿ ಸೌಲಭ್ಯವನ್ನು ಒದಗಿಸಲು ಸಾಲ-ಸಹಾಯಧನ ನೀಡಲಾಗುವುದು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಾಗಿದ್ದಲ್ಲಿ ೬ ಲಕ್ಷ ರೂ.ಗಳ ಮಿತಿಯೊಳಗಿರಬೇಕು. ೨೧ ವ? ಮೇಲ್ಪಟ್ಟು ೫೦ ವ?ದ ಒಳಗಿನವರಾಗಿರಬೇಕು. ಯೋಜನೆಯಡಿ ಗರಿ? ೨ ಲಕ್ಷ ರೂ.ಗಳ ಸಾಲವನ್ನು ವಾರ್ಷಿಕ ಶೇ.೪ರ ಬಡ್ಡಿದರದಲ್ಲಿ ಒದಗಿಸಲಾಗುವುದು ಹಾಗೂ ವಿದ್ಯುದೀಕರಣಕ್ಕಾಗಿ ೫೦ ಸಾವಿರ ರೂ. ಗಳ ಸಹಾಯಧನ ನೀಡಲಾಗುವುದು. ೬ ತಿಂಗಳ ವಿರಾಮಾವಧಿ ನಂತರ ಸಾಲವನ್ನು ೩೪ ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು.
ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಿ.ಇ.ಟಿ/ಎನ್.ಇ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿ ಯಲ್ಲಿ ವ್ಯಾಸಂಗ ಮಾಡುವ ಆರ್ಯ ವೈಶ್ಯ ವಿದ್ಯಾರ್ಥಿಗಳಿಗೆ ವಾರ್ಷಿಕ ೧ ಲಕ್ಷ ರೂ.ಗಳ ಸಾಲವನ್ನು ಶೇ.೨ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುವುದು. ವ್ಯಾಸಂಗ ಪೂರ್ಣಗೊಂಡ ನಂತರ ೪ ತಿಂಗಳ ವಿರಾಮಾವಧಿ ಬಳಿಕ ಸಾಲವನ್ನು ೩೬ ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು. ಅರ್ಜಿದಾರರು ೧೮ ವ? ಮೇಲ್ಪಟ್ಟು ೩೫ ವ?ದ ಒಳಗಿನವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಾಗಿದ್ದಲ್ಲಿ ೬ ಲಕ್ಷ ರೂ. ಗಳ ಮಿತಿಯೊಳಗಿರಬೇಕು. ಯೋಜನೆಗಾಗಿ ಕೌನ್ಸೆಲಿಂಗ್ ಮುಗಿದ ನಂತರ ಅರ್ಜಿ ಆಹ್ವಾನಿಸಲಾಗುವುದು.
ಅರ್ಜಿಯನ್ನು ವೆಬ್‌ಸೈಟ್ ಮೂಲಕ ಸೆಪ್ಟೆಂಬರ್ ೧೮ ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ ೯೪೪೮೪೫೧೧೧೧ ಅಥವಾ ನಗರದ ಜಿಲ್ಲಾಡಳಿತ ಭವನದ ೩ನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ ೩೦೫ರ ಜಿಲ್ಲಾ ಕಚೇರಿ ದೂ.ಸಂ ೦೮೨೨೬-೨೨೩೫೮೭ ಸಂಪರ್ಕಿಸುವಂತೆ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಯೋಜನೆಗಳ ಮಾರ್ಗಸೂಚಿ ಹಾಗೂ ವಿವರಗಳನ್ನು ಈ ಕ್ಯೂ.ಆರ್ ಕೋಡ್ ಅನ್ನು ಗೂಗಲ್ ನಲ್ಲಿ ಸ್ಕ್ಯಾನ್ ಮಾಡಿ ಪಡೆಯಬಹುದಾಗಿದೆ.

Leave a Reply

Your email address will not be published. Required fields are marked *