ಚಾಮರಾಜನಗರ: ಪಟ್ಟಣದ ಸಿಎಸ್ ಐ, ಮಸಗಾಪುರದ ಬಿಷಪ್ ನಾರ್ಚೆಂಟ್ ಸ್ಮಾರಕ ದೇವಲಯ , ದೊಡ್ಡರಾಯ ಪೇಟೆಯ ಸಂತ ತೆರೆಸಾ ಚರ್ಚ್ ಸೇರಿದಂತೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿರುವ ಚರ್ಚ್ ಗಳಿಗೆ ಶಾಸಕಸಿ.ಪುಟ್ಟರಂಗಶೆಟ್ಟಿ ತೆರಳಿ ಕ್ರಿಸ್ ಮಸ್ ಹಬ್ಬದ ಶುಭಾಶಯ ತಿಳಿಸಿದರು.

ವಿವಿಧ ಚರ್ಚ್ ಗಳಿಗೆ ತೆರಳಿದ ಶಾಸಕರು ಅಲ್ಲಿನ ಧರ್ಮಗುರು ಗಳನ್ನು ಸನ್ಮಾನಿಸಿ ಕ್ರಿಸ್ ಮಸ್ ಹಬ್ಬದ ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಶಾಂತಿ, ಅಹಿಂಸೆ, ಕರುಣೆಯಂತಹ ಮಾನವೀಯತೆ ಗುಣಗಳನ್ನು ಜಗತ್ತಿಗೆ ಸಾರಿದ ಮಹಾನ್ ಮಾನವತಾವಾದಿ ಏಸುಕ್ರಿಸ್ತನು ಇಂದು ಹುಟ್ಟಿದ ದಿನವಾಗಿದ್ದು ನಾಡಿನ ಎಲ್ಲಾ ಕ್ರೈಸ್ತ ಸಮುದಾಯದ ಬಂಧುಗಳಿಗೆ ಹಬ್ಬದ ಶುಭಾಶಯ ಕೋರುವುದಾಗಿ ತಿಳಿಸಿದರು.
ಡಿಸೆಂಬರ್ ತಿಂಗಳಲ್ಲಿ ಕ್ರಿಸ್ ಮಸ್ ನಂತರ 2024 ನೇ ನೂತನ ವರ್ಷವು ಬರಲಿದ್ದು ನಾಡಿನ ಜನತೆಗೆ ಬರುವ ಹೊಸ ವರ್ಷ ಒಳಿತನ್ನುಂಟು ಮಾಡಿ ಉತ್ತಮ ಮಳೆ-ಬೆಳೆಯಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಚರ್ಚ್ ಗಳಿಗೆ ಭೇಟಿ ನೀಡಿದ ಶಾಸಕ,ಸಿ.ಪುಟ್ಟರಂಗಶೆಟ್ಟಿ ಅವರನ್ನು ಅಲ್ಲಿನ ಧರ್ಮಗುರುಗಳು ಸನ್ಮಾನಿಸಿ ಆಶೀರ್ವಚನ ನೀಡಿದರು.