ಚಾಮರಾಜನಗರ: ದೊಡ್ಡಮೋಳೆ ಗ್ರಾಮದ ಶನಿ ಮಹಾತ್ಮ ದೇವಸ್ಥಾನ ರಸ್ತೆ ಬದಿಯಿಂದ ಚಂದುಕಟ್ಟೆಮೋಳೆ ಗ್ರಾಮದವರೆಗೆ ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ದೊಡ್ಡಮೋಳೆ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷೆ ನಿರ್ಮಲ ರಂಗನಾಥ್ ಚಾಲನೆ ನೀಡಿದರು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ನಂತರ ಮಾತನಾಡಿದ ಗ್ರಾ.ಪಂ. ಅಧ್ಯಕ್ಷೆ ನಿರ್ಮಲಾ ರಂಗನಾಥ್, ಮಾನವನ ಉಸಿರಾಟಕ್ಕೆ ಆಮ್ಲಜನಕದ ಅವಶ್ಯಕತೆ ಇರುತ್ತದೆ. ಇದರ ಉತ್ಪತ್ತಿಗೆ ಗಿಡ ಮರಗಳು ತುಂಬಾ ಅವಶ್ಯಕವಾಗಿದೆ. ಇಂದಿನ ಯುವ ಪೀಳಿಗೆಗೆ ಪರಿಸರ ಜಾಗೃತಿಯ ಬಗ್ಗೆ ಹೆಚ್ಚಿನ ಅರಿವನ್ನು ಮೂಡಿಸುವುದರ ಜೊತೆಗೆ ಕೃಷಿಯ ಬಗ್ಗೆ ಹೆಚ್ಚು ಕಾಳಜಿ ವಹಿಸಲು ಅವರನ್ನು ಜಾಗೃತರನ್ನಾಗಿ ಮಾಡಬೇಕು ಎಂದರು.
ಗ್ರಾಮ ಪಂಚಾಯಿತಿ ಸದಸ್ಯರಾದ ಶಾಂತರಾಜು, ರಾಜೇಶ್, ವೆಂಕಟರಾಜು, ಸಾಹಿತಿಗಳು, ಚಾಮರಾಜನಗರ, ಹನುರಾಜು, ಯುವ ಮುಖಂಡರು, ಹಾಗೂ ಗ್ರಾಮದ ಯುವಕರು ಭಾಗವಹಿಸಿದ್ದರು.
