ಸೆ. 19ರಂದು ಗುಂಡ್ಲುಪೇಟೆಯಲ್ಲಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ : ಭಾಗವಹಿಸಲು ಆಹ್ವಾನ

ಚಾಮರಾಜನಗರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2023-24ನೇ ಸಾಲಿನ ಗುಂಡ್ಲುಪೇಟೆ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಸೆಪ್ಟೆಂಬರ್ 19ರಂದು ಬೆಳಿಗ್ಗೆ 9 ಗಂಟೆಗೆ ಗುಂಡ್ಲುಪೇಟೆಯ ಡಿ. ದೇವರಾಜ ಅರಸು ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿದೆ.
ಪುರುಷರಿಗೆ 100ಮೀ, 200ಮೀ, 400ಮೀ, 800ಮೀ, 1500ಮೀ, 5000ಮೀ, 10000 ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಟ್ರಿಪ್ಪಲ್ ಜಂಪ್, ಜಾವಲಿನ್ ಎಸೆತ, ಡಿಸ್ಕಸ್ ಎಸೆತ, 4100ಮೀ, ರಿಲೇ, 4400ಮೀ, ರಿಲೇ, 110ಮೀ ಹಡಲ್ರ್ಸ್, ವಾಲಿಬಾಲ್, ಕಬ್ಬಡಿ, ಖೋಖೋ, ಪುಟ್‍ಬಾಲ್, ಥ್ರೋಬಾಲ್, ಯೋಗ ಸ್ಪರ್ಧೆಗಳು ನಡೆಯಲಿದೆ.
ಮಹಿಳೆಯರಿಗೆ 100ಮೀ, 200ಮೀ, 400ಮೀ, 800ಮೀ, 1500ಮೀ, 3000ಮೀ ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಜಾವಲಿನ್ ಎಸೆತ, ಡಿಸ್ಕಸ್ ಎಸೆತ, ಟ್ರಿಪ್ಪಲ್ ಜಂಪ್, 4100ಮೀ ರಿಲೇ, 4400ಮೀ ರಿಲೇ, 100ಮೀ ಹಡಲ್ರ್ಸ್, ವಾಲಿಬಾಲ್, ಕಬ್ಬಡಿ, ಖೋಖೋ, ಥ್ರೋಬಾಲ್, ಯೋಗ ಸ್ಪರ್ಧೆಗಳು ನಡೆಯಲಿದೆ.
ತಾಲೂಕು ಮಟ್ಟದಲ್ಲಿ ಭಾಗವಹಿಸುವ ಸ್ಪರ್ಧಿಗಳಿಗೆ ಯಾವುದೇ ಪ್ರಯಾಣಭತ್ಯೆ ಹಾಗೂ ದಿನಭತ್ಯೆ ನೀಡಲಾಗುವುದಿಲ್ಲ. ತಾಲೂಕು ಮಟ್ಟದಲ್ಲಿ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದವರು ಮತ್ತು ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರು ಜಿಲ್ಲಾ ಮಟ್ಟದಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ. ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ನಡೆಯುವ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು.
ಕ್ರೀಡಾಕೂಟದಲ್ಲಿ ರಕ್ಷಣಾ ಪಡೆ, ಅರೆ ರಕ್ಷಣಾಪಡೆಗೆ ಸೇರಿದ ಕ್ರೀಡಾ ಪಟುಗಳು ಭಾಗವಹಿಸಲು ಅರ್ಹರಾಗಿರುವುದಿಲ್ಲ. ಒಬ್ಬರಿಗೆ ಎರಡು ವೈಯಕ್ತಿಕ ಹಾಗೂ ಒಂದು ಗುಂಪು ಸ್ಪರ್ಧೆಯಲ್ಲಿ ಮಾತ್ರ ಭಾಗವಹಿಸಲು ಅವಕಾಶವಿದೆ. ಆಯಾ ತಾಲೂಕಿನ ಕ್ರೀಡಾಪಟುಗಳು ಆಯಾ ತಾಲೂಕಿನಲ್ಲಿ ಮಾತ್ರ ಭಾಗವಹಿಸಲು ಅರ್ಹತೆ ಹೊಂದಿರುತ್ತಾರೆ. ಭಾಗವಹಿಸುವ ಸಮಯದಲ್ಲಿ ಆಧಾರ್ ಕಾರ್ಡ್ ತರುವುದು ಕಡ್ಡಾಯವಾಗಿರುತ್ತದೆ. ಸ್ಪರ್ಧೆಯನ್ನು ಏರ್ಪಡಿಸಲು ಕನಿಷ್ಟ 4 ತಂಡಗಳು ಇರಬೇಕು. ಇಲ್ಲದಿದ್ದಲ್ಲಿ ಆಯ್ಕೆ ನಡೆಸಿ ಮುಂದಿನ ಹಂತಕ್ಕೆ ಕಳುಹಿಸಲಾಗುವುದು.
ಕ್ರೀಡಾಕೂಟದ ಸ್ಪರ್ಧೆಗಳನ್ನು ಪ್ರತ್ಯೇಕವಾಗಿ ಪುರುಷ ಮತ್ತು ಮಹಿಳೆಯರಿಗೆ ಏರ್ಪಡಿಸಲಾಗುವುದು. ತಾಲೂಕು ಮಟ್ಟದಲ್ಲಿ ವಿಜೇತರಾದ ಕ್ರೀಡಾಪಟುಗಳು ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಪಡೆದು ಇತ್ತೀಚಿನ ಭಾವಚಿತ್ರವನ್ನು ಲಗತ್ತಿಸಿ ಆಧಾರ್ ಕಾರ್ಡ್, ಪಾಸ್‍ಬುಕ್ ಜೆರಾಕ್ಸ್ ಪ್ರತಿಯನ್ನು ಸಂಘಟನೆಕಾರರಿಗೆ ಸಲ್ಲಿಸಬೇಕು. ಗುಂಪು ಸ್ಪರ್ಧೆಯಲ್ಲಿ ಭಾಗವಹಿಸುವ ತಂಡಗಳು ಸ್ಪರ್ಧೆಯ ದಿನಾಂಕದಂದು ಬೆಳಿಗ್ಗೆ 10ಗಂಟೆಯೊಳಗಾಗಿ ನೋಂದಾಯಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದೂ.ಸಂ. 08226-224932, ಮೊ.ಸಂ. 9844160841, 9945615695, 9880211027, 9916466659 ಸಂಪರ್ಕಿಸುವಂತೆ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *