ಚಾಮರಾಜನಗರ: ತೋಟಗಾರಿಕೆ ಇಲಾಖೆಯ ವತಿಯಿಂದ ೨೦೨೩-೨೪ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ (ಅಊಆ) ಸೋಲಾರ್ ಪಂಪ್ಸೆಟ್ ಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ತೋಟಗಾರಿಕೆಯಲ್ಲಿ ವಿನೂತನ ತಂತ್ರಜ್ಞಾನ ಮತ್ತು ಯಂತ್ರೋಪಕರಣಗಳಿಗೆ ಸಹಾಯಧನ ಕಾರ್ಯಕ್ರಮದಡಿ ತೋಟಗಾರಿಕೆ ಬೆಳೆಗಳ ಗುಣಮಟ್ಟದ ಉತ್ಪಾದನೆಗೆ ವಿಶೇಷ ಉತ್ತೇಜನ ಕಾರ್ಯಕ್ರಮದಲ್ಲಿ ರೈತರಿಗೆ ಸೌರಶಕ್ತಿ ಆಧಾರಿತ ಕೃಷಿ ಪಂಪ್ಸೆಟ್ಗಳನ್ನು ಅಳವಡಿಸಿಕೊಳ್ಳಲು ಎಲ್ಲಾ ವರ್ಗದ ರೈತರಿಗೂ ಶೇ ೫೦ರಷ್ಟು ಸಹಾಯಧನ ನಿಗದಿಪಡಿಸಲಾಗಿದೆ. ಕನಿಷ್ಠ ೩ ಹೆಚ್.ಪಿ ಸೋಲಾರ್ ಪಂಪ್ಸೆಟ್ ಸಾರ್ಮರ್ಥ್ಯದ ಘಟಕದ ವೆಚ್ಚ ೨ ಲಕ್ಷ ರೂ.ಗಳಿಗೆ ಶೇ. ೫೦ರಂತೆ ೧ ಲಕ್ಷ ರೂ. ನೀಡಲಾಗುವುದು, ೫ ಹೆಚ್.ಪಿ ಹಾಗೂ ಮೇಲ್ಪಟ್ಟ ಸೋಲಾರ್ ಪಂಪ್ಸೆಟ್ಗಳಿಗೆ ಘಟಕದ ವೆಚ್ಚ ೩ ಲಕ್ಷ ರೂ.ಗಳಿಗೆ ಶೇ. ೫೦ರಂತೆ ೧.೫೦ ಲಕ್ಷ ರೂ. ಗರಿಷ್ಠ ಸಹಾಯಧನ ನೀಡಲಾಗುವುದು.
ಸೌರಶಕ್ತಿ ಆಧಾರಿತ ಕೃಷಿ ಪಂಪ್ಸೆಟ್ಗಳನ್ನು ತೋಟದಲ್ಲಿ ನಿರ್ಮಿಸಿರುವ ನೀರು ಸಂಗ್ರಹಣಾ ಘಟಕ ಅಥವಾ ಕೊಳವೆ ಬಾವಿಗಳಿಗೆ ಅಳವಡಿಸಬಹುದಾಗಿದೆ. ನೀರು ಸಂಗ್ರಹಣಾ ಘಟಕಕ್ಕೆ ಅಳವಡಿಸಿದ ರೈತರಿಗೆ ಆದ್ಯತೆ ನೀಡಲಾಗುವುದು. ರೈತರಿಗೆ ಸಹಾಯಧನ ಪಾವತಿಸುವ ಮುನ್ನ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ (ಏಖಇಆಐ) ಇಲಾಖೆಯಿಂದ, ಇತರೆ ಇಲಾಖೆ, ಸಂಸ್ಥೆಗಳಿಂದ ಸೌರಶಕ್ತಿ ಆಧಾರಿತ ಪಂಪ್ಸೆಟ್ಗಳಿಗೆ ಸಹಾಯಧನ ಪಡೆದಿರುವುದಿಲ್ಲ ಎಂಬ ದೃಢೀಕರಣ ಸಲ್ಲಿಸಬೇಕು. ಸೌರಶಕ್ತಿ ಆಧಾರಿತ ಕೃಷಿ ಪಂಪ್ಸೆಟ್ಗಳನ್ನು ಕೆ.ಆರ್.ಇ.ಡಿ.ಎಲ್ ಇಂಧನ ಇಲಾಖೆ, ಸರ್ಕಾರ ಅಧಿಕೃತವಾಗಿ ನೋಂದಾಯಿಸಿದ (ಇmಠಿಚಿಟಿeಟಟeಜ) ಕಂಪನಿಗಳಿಂದ ರೈತರೇ ನೇರವಾಗಿ ಖರೀದಿಸಬೇಕು. ಘಟಕ ಅನುಷ್ಠಾನ ಪೂರ್ವ ಕಾರ್ಯಾದೇಶ ಪಡೆಯುವುದು ಕಡ್ಡಾಯವಾಗಿರುತ್ತದೆ.
ಆಸಕ್ತ ರೈತರು ಆಯಾ ತಾಲೂಕಿನ ತೋಟಗಾರಿಕಾ ಇಲಾಖೆಗೆ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಿ, ಹೆಚ್ಚಿನ ಮಾಹಿತಿ ಪಡೆದು ಯೋಜನೆಯ ಸದುಪಯೋಗಪಡಿಸಿಕೊಳ್ಳುವಂತೆ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.