ಬೆಂಗಳೂರು: ಸ್ಯಾಂಡಲ್ ವುಡ್ ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನರಾಗಿದ್ದಾರೆ.
ವಿದೇಶ ಪ್ರವಾಸಕ್ಕೆಂದು ಬ್ಯಾಂಕಾಕ್ಗೆ ತೆರಳಿದ್ದ ವೇಳೆ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ.

ನಿನ್ನೆ ಬ್ಯಾಂಕಾಕ್ನಲ್ಲಿ ಹೃದಯಾಘಾತವಾದಾಗ ಅವರನ್ನು ತಕ್ಷಣವೇ, ಆಸ್ಪತ್ರೆಗೆ ಸೇರಿಸಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸ್ಪಂದನಾ ಅವರು ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿ ಬಿ.ಕೆ ಶಿವರಾಂ ಅವರ ಪುತ್ರಿಯಾಗಿದ್ದಾರೆ. ಇನ್ನೂ ವಿಷಯ ತಿಳಿಯುತ್ತಿದ್ದಂತೆ ಸ್ಪಂದನಾ ತಂದೆ ಬಿ.ಕೆ.ಶಿವರಾಂ ಮತ್ತು ಅವರ ಕುಟುಂಬ ಬ್ಯಾಂಕಾಕ್ಗೆ ತೆರಳಿದ್ದಾರೆ.
ವಿಜಯ ರಾಘವೇಂದ್ರ ಪತ್ನಿ ನಿಧನದಿಂದ ಅವರ ಕುಟುಂಬ ಆಘಾತಕ್ಕೀಡಾಗಿದೆ. ಅವರ ಪಾರ್ಥಿವ ಶರೀರ ನಾಳೆ ಬೆಂಗಳೂರಿಗೆ ಬರುವ ಸಾಧ್ಯತೆ ಇದೆ.
ಸ್ಪಂದನಾ ಮತ್ತು ವಿಜಯ್ ಹಲವು ವರ್ಷಗಳಿಂದ ಪ್ರೀತಿಸಿ, ೨೦೦೭ರಲ್ಲಿ ಗುರುಹಿರಿಯರ ಸಮ್ಮುಖದಲ್ಲಿ ಮದುವೆಯಾದರು. ಇವರಿಗೆ ಶೌರ್ಯ ಎಂಬ ಒಬ್ಬ ಮಗನಿದ್ದಾನೆ.