ಚಾಮರಾಜನಗರ: ತೋಟಗಾರಿಕೆ ಇಲಾಖೆಯು 2023-24ನೇ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ (ಪಿ.ಎಂ.ಕೆ.ಎಸ್.ವೈ) ಸೂಕ್ಷ್ಮ ಹನಿ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದ್ದು, ಸದರಿ ಯೋಜನೆಯಡಿ ನೀಡಲಾಗುವ ಸಹಾಯಧನ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ.
ಪ್ರಸ್ತುತ ಹಲವು ರೈತರಿಗೆ ಹನಿ ನೀರಾವರಿ ಅಳವಡಿಸಲು ಕಾರ್ಯಾದೇಶವನ್ನು (ವರ್ಕ್ ಆರ್ಡರ್ಸ್) ವಿತರಿಸಲಾಗುತ್ತಿದೆ.
ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಿಗೆ ಶೇ. 90ರಷ್ಟು ಹಾಗೂ ಇತರೆ ವರ್ಗದ ರೈತರಿಗೆ ಶೇ. 75ರಷ್ಟು ಸಹಾಯಧನ ನಿಗದಿಪಡಿಸಿದ್ದು, ಪ್ರಸ್ತುತ ಅನುದಾನ ಲಭ್ಯವಿರುತ್ತದೆ. ನೀರಾವರಿ ಸೌಲಭ್ಯ ಹೊಂದಿರುವ ಆಸಕ್ತ ರೈತರು ಕೂಡಲೇ ಅಗತ್ಯ ದಾಖಲಾತಿಗಳೊಂದಿಗೆ ಆಯಾ ತಾಲೂಕಿನ ತೋಟಗಾರಿಕೆ ಇಲಾಖೆ ಕಚೇರಿಯಲ್ಲಿ ಫ್ರೂಟ್ಸ್ ತಂತ್ರಾಂಶದಲ್ಲಿ ಹೆಸರು ನೊಂದಾಯಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.