ಹನೂರು ತಾಲೂಕಿನ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಶೈಕ್ಷಣಿಕ ಅಧ್ಯಯನ ಪ್ರವಾಸ ಕಾರ್ಯಕ್ರಮ

ಚಾಮರಾಜನಗರ: ಹನೂರು ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಅಧ್ಯಕ್ಷರು ಮತ್ತು ಉಪಾಧ್ಯಕ್ಷರು, ಸದಸ್ಯರುಗಳು, ಹಾಗೂ ನೀರುಗಂಟಿಗಳಿಗೆ ಕೊಳ್ಳೇಗಾಲ ತಾಲೂಕಿನ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಹುಗ್ರಾಮ ಕುಡಿಯುವ ನೀರಿನ ಶುದ್ಧೀಕರಣ ಯೋಜನಾ ಘಟಕಕ್ಕೆ ಒಂದು ದಿನದ ಶೈಕ್ಷಣಿಕ ಅಧ್ಯಯನ ಪ್ರವಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಜಲಜೀವನ್ ಮಿಷನ್ ಯೋಜನೆಯಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಕೈಂಡ್‍ಹಾಟ್ರ್ಸ್ ಸಂಸ್ಥೆಯ ಸಹಯೋಗದಲ್ಲಿ ಶೈಕ್ಷಣಿಕ ಅಧ್ಯಯನ ಪ್ರವಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಮಾತನಾಡಿದ ಕೊಳ್ಳೇಗಾಲ ತಾಲ್ಲೂಕಿನ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಆನಂದಮೂರ್ತಿ ಅವರು ಏಪ್ರಿಲ್ 2024ರೊಳಗೆ ಹನೂರು ತಾಲೂಕಿನಲ್ಲಿ ಜಲಜೀವನ್ ಮಿಷನ್ ಕಾಮಗಾರಿ ಪೂರ್ಣಗೊಳ್ಳಲಿದೆ. ಒಟ್ಟು 291 ಹಳ್ಳಿಗಳಿಗೆ ಸುಸ್ಥಿರ ನದಿಮೂಲದಿಂದ ಪಂಪ್ ಮಾಡಿ ನಂತರ ಪಾಳ್ಯ ಬಹುಗ್ರಾಮ ಕುಡಿಯುವ ನೀರಿನ ಶುದ್ಧೀಕರಣ ಘಟಕದಲ್ಲಿ ಶುದ್ದೀಕರಿಸಿ ಈಗಾಗಲೇ 91 ಹಳ್ಳಿಗಳಿಗೆ ಶುದ್ಧ ಮತ್ತು ಸುರಕ್ಷಿತವಾದ ನೀರನ್ನು ಒದಗಿಸಲಾಗುತ್ತಿದೆ. ಎರಡನೇ ಹಂತದ ಕಾಮಗಾರಿಯಲ್ಲಿ 450 ಕಿ.ಮೀ ಪೈಪ್‍ಲೈನ್‍ನಲ್ಲಿ ಈಗಾಗಲೇ 150 ಕಿ.ಮೀ ಗುರಿ ಸಾಧಿಸಲಾಗಿದೆ. ಬಾಕಿ ಉಳಿದಿರುವ ಕಾಮಗಾರಿಯನ್ನು 2024ರ ಅಂತ್ಯದ ವೇಳೆಗೆ ಪೂರ್ಣಗೊಳಿಸಲಾಗುವುದು ಎಂದರು.

ಜಲಜೀವನ್ ಮಿಷನ್ ಯೋಜನೆಯ ಜಿಲ್ಲಾ ಯೋಜನಾ ವ್ಯವಸ್ಥಾಪಕರಾದ ಆಶಾ ರಮೇಶ್ ಅವರು ಮಾತನಾಡಿ ಜಲಜೀವನ್ ಮಿಷನ್ ಕಾಮಗಾರಿ ಗುಣಮಟ್ಟದಿಂದ ಕೂಡಿದ್ದು, ಹೆಚ್.ಡಿ.ಪಿ.ಇ ಪೈಪ್‍ಗಳನ್ನು ಬಳಸಲಾಗುತ್ತಿದೆ ಇದರ ಗುಣಮಟ್ಟವೂ ಸಹ 30ರಿಂದ 40ವರ್ಷಗಳ ಕಾಲ ಸುದೀರ್ಘ ಬಾಳಿಕೆ ಬರಲಿದೆ. ಯೋಜನೆಯಿಂದ ಗ್ರಾಮಗಳಲ್ಲಿ ಅಕ್ರಮ ನಳ ಸಂಪರ್ಕಗಳಿಗೆ ಕಡಿವಾಣ ಬಿಳಲಿದೆ. ಗ್ರಾಮದ ಎಲ್ಲಾ ಮನೆಗಳಿಗೂ ಮೀಟರ್ ಅಳವಡಿಸಿ ಸಮರ್ಪಕವಾಗಿ ನೀರು ಸರಬರಾಜು ಮಾಡಲಾಗುತ್ತಿದೆಯೋ ಅಥವಾ ಇಲ್ಲವೋ ಎಂದು ಖಾತರಿಪಡಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.

ಸ್ವಚ್ಛ ಭಾರತ್ ಮಿಷನ್ ಯೋಜನೆಯ ಮಾಹಿತಿ, ಶಿಕ್ಷಣ ಹಾಗೂ ಸಂವಹನ ವಿಭಾಗದ ಜಿಲ್ಲಾ ಸಮಾಲೋಚಕರಾದ ಪ್ರಭುಸ್ವಾಮಿ ಮಾತನಾಡಿ ಬಯಲು ಬರ್ಹಿದೆಸೆಯಿಂದ ಅನಾರೋಗ್ಯ ಉಂಟಾಗುತ್ತದೆ. 2005ರಿಂದ ಸ್ವಚ್ಛ ಭಾರತ್ ಮಿಷನ್ ಯೋಜನೆ ಜಾರಿಯಲ್ಲಿದ್ದು, ಜನರು ನೈರ್ಮಲ್ಯಕ್ಕೆ ಹೆಚ್ಚು ಒತ್ತು ನೀಡಬೇಕು. 2018ರಿಂದ ಶೌಚಾಲಯ ಬಳಕೆಗಳ ಬಗ್ಗೆ ಜನಸಾಮಾನ್ಯರಿಗೆ ಜಾಗೃತಿ ಮೂಡಿಸುವುದರ ಜೊತೆಗೆ ಶೌಚಾಲಯಗಳನ್ನು ಬಳಸುವಂತೆ ಪ್ರೇರೇಪಿಸುವುದರ ಮೂಲಕ ಇಂದು ಸರಿಸುಮಾರು ಶೇ. 99ರಷ್ಟು ಬಯಲು ಬಹಿರ್ದೆಸೆ ಮುಕ್ತ ಗ್ರಾಮಗಳ ಅಡಿಪಾಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದರು.
ಅಲ್ಲದೆ, ಗ್ರಾಮೀಣ ಭಾಗದ ಮನೆಗಳಲ್ಲಿ ಹಸಿಕಸ ಒಣಕಸ ಎಂದು ವಿಂಗಡಿಸಿ ಪಂಚಾಯಿತಿಗಳಿಗೆ ನೀಡಲಾಗಿರುವ ಸ್ವಚ್ಛವಾಹಿನಿ ವಾಹನಕ್ಕೆ ಗೃಹಬಳಕೆಯಲ್ಲಿ ಉತ್ಪಾದನೆಯಾದ ತ್ಯಾಜ್ಯವನ್ನು ನೀಡಿದರೆ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ವಿಲೇವಾರಿ ಮಾಡಿ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶ ಹಾಗೂ ಎಲ್ಲರ ಆರೋಗ್ಯಮಟ್ಟವು ಕೂಡ ಸುಧಾರಿಸಲಿದೆ ಎಂದು ಪ್ರಭುಸ್ವಾಮಿ ಅವರು ತಿಳಿಸಿದರು.

ಹಿರಿಯ ನೀರಿನ ಗುಣಮಟ್ಟದ ಪರೀಕ್ಷಾ ತಜ್ಞರಾದ ಉಮಾಪತಿ ಮಾತನಾಡಿ ನೀರನ್ನು ಆರು ವಿಧಾನದಲ್ಲಿ ಶುದ್ಧೀಕರಿಸಲಾಗುತ್ತಿದೆ. ಮೂಲತಃ ನದಿ ನೀರಿನಲ್ಲಿ ಕಲುಷಿತ ಪ್ರಮಾಣ ಹೆಚ್ಚಿರುತ್ತದೆ. ಹೀಗಾಗಿ ನೀರಿನ ಪರೀಕ್ಷೆಗಾಗಿ ಕ್ಲೋರಿನೇಷನ್ ವಿಧಾನದ ಮೂಲಕ ಶುದ್ಧಿಕರಿಸಲಾಗುತ್ತದೆ ಎಂದು ಶಿಬಿರಾರ್ಥಿಗಳಿಗೆ ಮಾಹಿತಿ ನೀಡಿದರು.

ಇದೇ ವೇಳೆ ಶೈಕ್ಷಣಿಕ ಅಧ್ಯಯನ ಪ್ರವಾಸ ಕೈಗೊಂಡಿದ್ದ ಎಲ್ಲಾ ಅಧಿಕಾರಿಗಳು ಹಾಗೂ ಶಿಬಿರಾರ್ಥಿಗಳು “ಸ್ವಚ್ಛತಾ ಹೀ ಸೇವಾ” ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ಕಿರಿಯ ಸಹಾಯಕ ಇಂಜಿನಿಯರ್ ಪೂರ್ಣಿಮಾ, ಪಾಳ್ಯ ಬಹುಗ್ರಾಮ ಕುಡಿಯುವ ನೀರಿನ ಘಟಕದ ವ್ಯವಸ್ಥಾಪಕರಾದ ಶಾಂತಕುಮಾರ್, ಅನುμÁ್ಠನ ಬೆಂಬಲ ಸಂಸ್ಥೆಯ ತಂಡದ ಸಿಬ್ಬಂದಿ, ಹನೂರು ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ನೀರುಗಂಟಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *