ಚಾಮರಾಜನಗರ: ಜಿಲ್ಲೆಯಲ್ಲಿ ೨೦೨೩-೨೪ನೇ ಸಾಲಿಗೆ ಹಿಂದುಳಿದ ವರ್ಗಗಳಿಗೆ ಸೇರಿದ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿ ನೀಡಲು ಆಸಕ್ತ ಅರ್ಹ ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಂದ ಅರ್ಜಿ ಅಹ್ವಾನಿಸಲಾಗಿದೆ.
ಅಭ್ಯರ್ಥಿಯು ಹಿಂದುಳಿದ ವರ್ಗಗಳ ಪ್ರವರ್ಗ-೧, ೨(ಎ), ೩(ಎ) ಮತ್ತು ೩(ಬಿ) ಜನಾಂಗಕ್ಕೆ ಸೇರಿದವರಾಗಿರಬೇಕು. ಪ್ರವರ್ಗ-೧ಕ್ಕೆ ಸೇರಿರುವ ಅಭ್ಯರ್ಥಿಗಳು ೪೦ ವ? ಹಾಗೂ ಪ್ರವರ್ಗ-೨(ಎ), ೩(ಎ) ಮತ್ತು ೩(ಬಿ) ಗೆ ಸೇರಿದ ಅಭ್ಯರ್ಥಿಗಳು ೩೮ರ ವಯೋಮಿತಿಯಲ್ಲಿರಬೇಕು.
ಅಭ್ಯರ್ಥಿಗಳು ಕಾನೂನು ಪದವೀಧರರಾಗಿದ್ದು, ಬಾರ್ ಕೌನ್ಸಿಲ್ನಲ್ಲಿ ನೊಂದಾಯಿಸಿರಬೇಕು. ಕಾನೂನು ತರಬೇತಿಗೆ ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕ: ೩೦.೦೮.೨೦೨೩ಕ್ಕೆ ಹಿಂದೆ ೨ ವ?ಗಳೊಳಗಾಗಿ ಕಾನೂನು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಹಿಂದುಳಿದ ವರ್ಗಗಳ ಪ್ರವರ್ಗ-೧ರ ಅಭ್ಯರ್ಥಿಗಳ ಮತ್ತು ಕುಟುಂಬದ ವಾರ್ಷಿಕ ವರಮಾನ ೩.೫೦ ಲಕ್ಷ ರೂ. ಹಾಗೂ ಉಳಿದ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳ ಮತ್ತು ಕುಟುಂಬದ ವಾರ್ಷಿಕ ವರಮಾನ ೨.೫೦ ಲಕ್ಷ ರೂ.ಗಳ ಮಿತಿಯಲ್ಲಿರಬೇಕು. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗೆ ಮಾಹೆಯಾನ ೪ ಸಾವಿರ ರೂ. ರಂತೆ ನಾಲ್ಕು ವ?ಗಳವರೆಗೆ ತರಬೇತಿ ಭತ್ಯೆ ನೀಡಲಾಗುವುದು. ಜಾತಿ, ಆದಾಯ ದೃಢೀಕರಣ ಪ್ರಮಾಣ ಪತ್ರ, ಕಾನೂನು ಪದವಿ ಅಂಕಪಟ್ಟಿಗಳು, ಪದವಿ ಪತ್ರ, ಬಾರ್ ಕೌನ್ಸಿಲ್ ನೊಂದಣಿ ಪತ್ರದ ದೃಢೀಕೃತ ಪ್ರತಿಗಳು, ೨ ಪಾಸ್ಪೋರ್ಟ್ ಅಳತೆಯ ಭಾವಚಿತ್ರ ಸಲ್ಲಿಸಬೇಕು. ತರಬೇತಿ ಅವಧಿ ನಾಲ್ಕು ವ?ಗಳಾಗಿದ್ದು, ತರಬೇತಿಯನ್ನು ಸರ್ಕಾರಿ ಅಭಿಯೋಜಕರು, ಸರ್ಕಾರಿ ವಕೀಲರು ಅಥವಾ ೧೫ ವ?ಕ್ಕೆ ಕಡಿಮೆ ಇಲ್ಲದಂತೆ ವಕೀಲ ವೃತ್ತಿ ನಡೆಸುತ್ತಿರುವ ವಕೀಲರ ಬಳಿ ಪಡೆಯಬೇಕಾಗಿರುತ್ತದೆ.
ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಹಾಗೂ ಸಂಬಂಧಪಟ್ಟ ಎಲ್ಲಾ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ ೩೦ ರೊಳಗೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿಗೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.