ಹನೂರು ತಾಲ್ಲೂಕಿನ ಎಲ್ಲೆಮಾಳ ಗ್ರಾಮದಲ್ಲಿ ಇರುವ ಹೊಳೆಮತ್ತಿ ಪ್ರಕೃತಿ ಮಾಹಿತಿ ಕೇಂದ್ರವು ಕಳೆದ ಐದು ವ?ಗಳಿಂದ ಇಲ್ಲಿನ ಸ್ಥಳೀಯ ವಿದ್ಯಾರ್ಥಿಗಳಿಗೆ, ಗ್ರಾಮಸ್ಥರಿಗೆ, ವನ್ಯಜೀವಿ ಆಸಕ್ತರಿಗೆ ಹಾಗೂ ಪ್ರವಾಸಿಗರಿಗೆ ಕಾವೇರಿ ಮತ್ತು ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಕಾಣಸಿಗುವ ಗಿಡ-ಮರ, ಪ್ರಾಣಿ-ಪಕ್ಷಿ, ಕಿಟಗಳು ಹಾಗೂ ವನ್ಯಜೀವಿ ಸಂರಕ್ಷಣೆಯ ಕುರಿತು ಮಾಹಿತಿ ನೀಡಲಾಗುತ್ತಿದೆ.
ವಿಶ್ವದಾದ್ಯಂತ ಜುಲೈ ೨೯ ರಂದು ಅಂತಾರಾಷ್ಟ್ರೀಯ ಹುಲಿ ದಿನವೆಂದು ಆಚರಿಸಲಾಗುತ್ತದೆ. ಹೊಳೆಮತ್ತಿ ಪ್ರಕೃತಿ ಮಾಹಿತಿ ಕೇಂದ್ರದ ವತಿಯಿಂದ ಪ್ರತಿ ವ?ವು ಅಂತಾರಾಷ್ಟ್ರೀಯ ಹುಲಿ ದಿನವನ್ನು ಬಹಳ ವಿಶೇ?ವಾಗಿ ಆಚರಣೆ ಮಾಡಲಾಗುತ್ತಿದೆ. ಅದರಂತೆ ಈ ವ?ವು ಹುಲಿಗಳ ಮಾತು ಎಂಬ ಶೀರ್ಷಿಕೆಯಡಿ ಕೊಳ್ಳೇಗಾಲ ತಾಲ್ಲೂಕಿನ ವಿವಿಧ ಶಾಲೆಗಳಲ್ಲಿ ಕ್ರಾಯಕ್ರಮವನ್ನು ನಡೆಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ದಿನಾಂಕ ೩೧ ನೇ ಜುಲೈ ಸೋಮವಾರದಂದು ಸೆವೆಂತ್ ಡೇ ಅಡ್ವೆಂಟಿಸ್ಟ್ ಶಾಲೆ, ಕೊಳ್ಳೇಗಾಲ ಹಾಗೂ ೧ ಆಗಸ್ಟ್ ಮಂಗಳವಾರದಂದು ಸರ್ಕಾರಿ ಪ್ರೌಢ ಶಾಲೆ, ಮಧುವನಹಳ್ಳಿ ವಿದ್ಯಾರ್ಥಿಗಳೊಂದಿಗೆ ಹುಲಿಗಳಿಗೆ ಸಂಬಂಧಿಸಿದ ಆಸಕ್ತಿದಾಯಕ ವಿಚಾರಗಳನ್ನು ಹಂಚಿಕೊಳ್ಳುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಹುಲಿಗಳ ನಾಡು ಎಂದು ಪ್ರಸಿದ್ಧಿ ಪಡೆದಿರುವ ಚಾಮರಾಜನಗರ ಜಿಲ್ಲೆಯಲ್ಲಿನ ಕಾಡುಗಳ ವೈಶಿ?ತೆ ಹಾಗೂ ಮನುಕುಲದ ಉಳಿವಿಗೆ ಹುಲಿಗಳು ಕೊಡುಗೆ, ಹುಲಿಗಳ ಬಗೆಗಿನ ವೈಜ್ಞಾನಿಕ ವಿಚಾರಗಳು ಮತ್ತು ಹುಲಿಗಳು ಎದುರಿಸುತ್ತಿರುವ ಸವಾಲುಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವುದರೊಂದಿಗೆ, ಹುಲಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮತ್ತು ಅವರ ತೊಡಗಿಸುವಿಕೆಯನ್ನು ಉತ್ತೀಜಿಸುವ ದೃಷ್ಟಿಯಿಂದ ಮಕ್ಕಳೊಂದಿಗೆ ಸಂವಹನ ನಡೆಸಲಾಗುವುದು.
ಡಾ.ಸಂಜಯ್ ಗುಬ್ಬಿ ಹಾಗೂ ಇವರ ಸಂಶೋಧನಾ ತಂಡ ಕಾವೇರಿ ಮತ್ತು ಮಲೆ ಮಹದೇಶ್ವರ ವನ್ಯಜೀವಿಧಾಮಗಳಲ್ಲಿ ಅಳವಡಿಸಿದ ಕ್ಯಾಮೆರಾ ಟ್ರ್ಯಾಪ್ಗಳಲ್ಲಿ ಸೆರೆಹಿಡಿಯಲ್ಪಟ್ಟ ಹುಲಿಗಳ ಚಿತ್ರಗಳನ್ನು ಬಳಸಿಕೊಂಡು ಬೇರೆ ಬೇರೆ ಹುಲಿಗಳನ್ನು ಗುರಿತಿಸುವುದು ಹೇಗೆ ಎಂದು ಪ್ರಾಯೋಗಿಕವಾಗಿ ತಿಳಿಸುವುದರೊಂದಿಗೆ ಒಂದು ಪ್ರದೇಶದಲ್ಲಿನ ಹುಲಿಗಳ ಸಂಖ್ಯೆಯನ್ನು ಅಂದಾಜಿಸುವುದು ಹೇಗೆ ಎಂಬುದನ್ನು ವಿದ್ಯಾರ್ಥಿಗಳಿಗೆ ಸಂಕ್ಷಿಪ್ತವಾಗಿ ವಿವರಿಸಲಾಗುವುದು.
ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿಗಳಿಗೆ ಹುಲಿಗಳ ಕುರಿತು ಮತ್ತಷ್ಟು ಕುತೂಹಲ ಮೂಡಿಸುವ ಸಲುವಾಗಿ, ಆಸಕ್ತಿದಾಯಕ ಪ್ರಶ್ನೆಗಳನೊಳಗೊಂಡ ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.