77ನೇ ಸ್ವಾತಂತ್ರೋತ್ಸವ : ಕಾಂಗ್ರೆಸ್ ಕಚೇರಿಯಲ್ಲಿ ಧ್ವಜಾರೋಹಣ

ಚಾಮರಾಜನಗರ: ೭೭ನೇ ವರ್ಷದ ಸ್ವಾತಂತ್ರೋತ್ಸವ ಕಾರ್ಯಕ್ರಮವನ್ನು ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ. ಮರಿಸ್ವಾಮಿ ರಾಷ್ಟ್ರ ಧ್ವಜಾರೋಹಣ ಮಾಡುವ ಮೂಲಕ ಆಚರಣೆ ಮಾಡಿದರು.

ಬಳಿಕ ಮಾತನಾಡಿದ ಅವರು, ಮಹಾನ್ ನಾಯಕರ ತ್ಯಾಗ ಬಲಿದಾನಗಳಿಂದಾಗಿ ಸ್ವಾತಂತ್ರ್ಯ ಲಭಿಸಿದೆ. ಇದನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ದೇಶವನ್ನು ಅಭಿವೃದ್ದಿ ಪಥದತ್ತ ಕೊಂಡೊಯ್ಯಲು ನಾವೆಲ್ಲರು ಶ್ರಮಿಸೋಣ. ದೇಶಭಕ್ತಿ ಹಾಗೂ ರಾಷ್ಟ್ರ ಪ್ರೇಮವನ್ನು ಮೈಗೂಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಬ್ರಿಟಿಷರ ದಾಸ್ಯದಿಂದ ಬಿಡುಗಡೆಗೊಂಡ ಶುಭ ದಿನವಾಗಿದೆ. ಸುಮಾರು ವರ್ಷಗಳ ಹೋರಾಟದ ಫಲದಿಂದಾಗಿ ಆಹಿಂಸಾ ಮಾರ್ಗವಾಗಿ ಪಡೆದುಕೊಂಡ ಸ್ವಾತಂತ್ರ್ಯವಾಗಿದೆ. ಪ್ರತಿಯೊಬ್ಬ ಭಾರತೀಯರು ಸಹ ಹೆಮ್ಮೆಯಿಂದ ಸಂಭ್ರಮ ಪಡುವ ದಿನವಾಗಿದ್ದು, ಸ್ವಾತಂತ್ರಕ್ಕಾಗಿ ರಚನೆಗೊಂಡ ಪಕ್ಷ ಕಾಂಗ್ರೆಸ್, ಸ್ವಾತಂತ್ರ್ಯಕ್ಕಾಗಿ ಮುಂಚೂಣಿಯಲ್ಲಿತ್ತು. ಇಂದಿನ ಯುವ ಪೀಳಿಗೆ ದೇಶಕ್ಕಾಗಿ ಸಮರ್ಪಣೆ ಮಾಡಿಕೊಂಡ ಕಾಂಗ್ರೆಸ್ ಪಕ್ಷ ಹಾಗೂ ಆ ಪಕ್ಷದ ಕೊಡುಗೆಯನ್ನು ಗಮನಿಸಿ, ದೇಶ ಕಟ್ಟುವ ಕೆಲಸದಲ್ಲಿ ಭಾಗಿಯಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷ ಬಿ.ಕೆ. ರವಿಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಚಿಕ್ಕಮಹದೇವ್, ಆರ್. ಮಹದೇವ್, ಬ್ಲಾಕ್ ಅಧ್ಯಕ್ಷರಾದ ಎ.ಎಸ್. ಗುರುಸ್ವಾಮಿ, ಮಹಮದ್ ಅಸ್ಗರ್, ಸೋಮನಾಯಕ, ಸಿ.ಎ.ಮಹದೇವಶೆಟ್ಟಿ, ಅರುಣ್, ಚುಡಾ ಮಾಜಿ ಅಧ್ಯಕ್ಷ ಸುಹೇಲ್ ಆಲಿಖಾನ್, ಎ.ಎಚ್.ಎನ್. ಖಾನ್, ಅಪ್ಜಲ್ ಷರೀಪ್, ಶಿವಮರ್ತಿ, ನಗರಸಭಾ ಸದಸ್ಯರಾದ ಚಿನ್ನಮ್ಮ, ಕಲಾವತಿ, ಸ್ವಾಮಿ, ಗುರುಸ್ವಾಮಿ. ಪುಟ್ಟಸ್ವಾಮಿ, ಜಾವೀದ್, ಇತರರು ಇದ್ದರು.

Leave a Reply

Your email address will not be published. Required fields are marked *