ಕೃಷಿ ಹೊಂಡ ನಿರ್ಮಾಣಕ್ಕೆ ಸಹಾಯಧನಕ್ಕೆ ಅರ್ಜಿ ಆಹ್ವಾನ

ಚಾಮರಾಜನಗರ: ತೋಟಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಕೃಷಿಹೊಂಡ ನಿರ್ಮಾಣಕ್ಕೆ ಎಲ್ಲಾ ವರ್ಗದ ರೈತರಿಗೂ ಶೇ.50ರ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. 

ಕೃಷಿಹೊಂಡ ನಿರ್ಮಾಣಕ್ಕೆ ಉತ್ತೇಜನ ನೀಡಲಾಗುತ್ತಿದ್ದು, ಮಳೆಗಾಲದಲ್ಲಿ ಅಥವಾ ಆಯಾ ಭಾಗದಲ್ಲಿ ನೀರಿನ ಸೌಕರ್ಯ ಲಭ್ಯವಿದ್ದಲ್ಲಿ ಹೆಚ್ಚುವರಿ ನೀರನ್ನು ಸಂಗ್ರಹಣೆ ಮಾಡಿ ನಂತರ ಬೇಸಿಗೆ ಕಾಲದಲ್ಲಿ ಅಥವಾ ನೀರಿನ ಅಭಾವವಿರುವ ಸಂಧರ್ಭದಲ್ಲಿ ತೋಟಗಾರಿಕೆ ಬೆಳೆಗಳಿಗೆ ನೀರಿನ ಸೌಕರ್ಯ ಕಲ್ಪಿಸುವುದು ಇಲಾಖೆಯ ಮುಖ್ಯ ಉದ್ದೇಶವಾಗಿದೆ. ಎಲ್ಲಾ ವರ್ಗದ ರೈತರಿಗೂ ಶೇ.50ರಂತೆ 75,000 ರೂ. ಸಹಾಯಧನ ನೀಡಲಾಗುವುದು.

ರೈತರು ಕನಿಷ್ಠ 1 ಹೆಕ್ಟೇರ್ ಜಮೀನು ಹೊಂದಿರಬೇಕು. 20 x 20 x 3 ಮೀ ಅಳತೆಯ 1:1 ಇಳಿಜಾರುರಂತೆ ಕೃಷಿ ಹೊಂಡವನ್ನು ಕಡ್ಡಾಯವಾಗಿ ನಿರ್ಮಿಸಬೇಕು. (ಕೃಷಿ ಹೊಂಡದ ನೀರು ಶೇಖರಣಾ ಸಾಮಥ್ರ್ಯ 1200 ಘ.ಮೀ. ಇರಬೇಕು). ತಳಭಾಗದಲ್ಲಿ ನೀರು ಇಂಗದಂತೆ ಕೃಷಿಹೊಂಡಕ್ಕೆ 300 ಮೈಕ್ರೋನ್ ಐಎಸ್‍ಐ ಗುಣಮಟ್ಟದ ಪಾಲಿಥೀನ್ ಹೊದಿಕೆಯನ್ನು ಇಲಾಖೆಯಿಂದ ಎಂಪೆನಲ್ ಆಗಿರುವ ಏಜೆನ್ಸಿ ರವರಿಂದಲೇ ರೈತರು ಖರೀದಿಸಿ ಅಳವಡಿಸುವುದು ಕಡ್ಡಾಯವಾಗಿದೆ. ನೀರು ಸಂಗ್ರಹಣೆ ಒಳಹರಿವಿಗಾಗಿ ಹಾಗೂ ಹೆಚ್ಚುವರಿ ನೀರನ್ನು ಹೊರಹಾಕಲು ಔಟ್ ಲೆಟ್ (ouಣಟeಣ) ನಿರ್ಮಾಣ ಮಾಡಬೇಕು. ರೈತರು ಕನಿಷ್ಠ 1 ಎಕರೆ ಪ್ರದೇಶದಲ್ಲಿ ತೋಟಗಾರಿಕೆ ಬೆಳೆಗಳನ್ನು ಬೆಳೆದಿರಬೇಕು.

ಆಸಕ್ತ ರೈತರು ನಿಗದಿತ ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲೆಗಳಾದ ಭಾವಚಿತ್ರ, ಪ್ರಸಕ್ತ ಸಾಲಿನ ಪಹಣಿ, ತಾಕಿನ ಪೆÇೀಟೋ, ಚೆಕ್ ಬಂಧಿ, ಕಂದಾಯ ಇಲಾಖೆಯಿಂದ ಗಣಕೀಕೃತ ಬೆಳೆ ದೃಢೀಕರಣ, ಪರಿಶಿಷ್ಟಜಾತಿ, ಪರಿಶಿಷ್ಟ ಪಂಗಡದ ರೈತರಾದಲ್ಲಿ ಆರ್.ಡಿ ಸಂಖ್ಯೆಯುಳ್ಳ ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್, ಕೃಷಿ ಇಲಾಖೆಯಿಂದ ಎನ್.ಒ.ಸಿ ಗಳನ್ನು ಆಯಾ ತಾಲ್ಲೂಕಿನ ತೋಟಗಾರಿಕೆ ಇಲಾಖೆಗೆ ಸಲ್ಲಿಸಬೇಕು ಎಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *