ಚಾಮರಾಜನಗರ: ಚಾಮರಾಜನಗರ ತಾಲ್ಲೂಕಿನ ಅರಳೀಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತವನ್ನು ಹಿಡಿಯುವಲ್ಲಿ ಬಿಜೆಪಿ ಯಶಸ್ವಿಯಾಗಿದ್ದು, ಸಂಘದ ನೂತನ ಅಧ್ಯಕ್ಷರಾಗಿ ಎ.ಎಸ್. ಕುಮಾರ್, ಉಪಾಧ್ಯಕ್ಷರಾಗಿ ಮಹದೇವಪ್ಪ ಅವಿರೋಧವಾಗಿ ಆಯ್ಕೆಯಾದರು.

ಸಂಘದ ಕಚೇರಿ ಸಭಾಂಗಣದಲ್ಲಿ ನಡೆದ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಎ.ಎಸ್. ಕುಮಾರ್ ಹಾಗೂ ಮಹದೇವಪ್ಪ ಇವರಿಬ್ಬರೇ ನಾಮಪತ್ರ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಯಾಗಿದ್ದ ಸಹಕಾರ ಅಭಿವೃದ್ದಿ ಅಧಿಕಾರಿ ವಿ. ಹೇಮಂತ್ಕುಮಾರ್ ಅವರು ಅವಿರೋಧ ಆಯ್ಕೆಯನ್ನು ಅಧಿಕೃತವಾಗಿ ಘೋಷಣೆ ಮಾಡಿದರು.
ಉತ್ಪಾದಕರಿಗೆ ಹೆಚ್ಚಿನ ಲಾಭ ತಂದುಕೊಟ್ಟಲು ಶ್ರಮ : ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಎ.ಎಸ್. ಕುಮಾರ್ ಅಧಿಕಾರ ವಹಿಸಿಕೊಂಡು ಮಾತನಾಡಿ, ಸಂಘದ ಎಲ್ಲಾ ನಿರ್ದೇಶಕರು ಒಮ್ಮತದಿಂದ ಅವಿರೋಧವಾಗಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಆಬಾರಿಯಾಗಿದ್ದೇನೆ. ನಿರ್ದೇಶಕರ ಸಹಕಾರ ಮತ್ತು ವಿಶ್ವಾಸದೊಂದಿಗೆ ಸಂಘವನ್ನು ಮುನ್ನಡೆಸಿಕೊಂಡು ಹೋಗುವ ಜೊತೆಗೆ ಉತ್ಪಾದಕರಿಗೆ ಹೆಚ್ಚಿನ ಲಾಭವನ್ನು ತಂದು ಕೊಡುವ ನಿಟ್ಟಿನಲ್ಲಿ ಒಕ್ಕೂಟ ಹಾಗೂ ಸರ್ಕಾರದಿಂದ ದೊರೆಯುವ ಎಲ್ಲಾ ರೀತಿಯ ಸವಲತ್ತುಗಳನ್ನು ಸಂಘದ ಪ್ರತಿಯೊಬ್ಬರ ಸದಸ್ಯರಿಗೂ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
ಸಭೆಯಲ್ಲಿ ನೂತನ ನಿರ್ದೇಶಕರಾದ ಬಸವಣ್ಣ, ರೇಚಣ್ಣ, ಪಿ. ಮಹದೇವಪ್ಪ, ಸಿದ್ದಲಿಂಗಪ್ಪ, ರಾಜಪ್ಪ( ಚಿಕ್ಕಪ್ಪ), ಗುರುಮಲ್ಲಪ್ಪ, ಜವರಯ್ಯ, ದೇವಿರಮ್ಮ, ಸುಂದರಮ್ಮ, ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಮದಹೇವಪ್ಪ, ಹಾಲು ಪರೀಕ್ಷಕ ರೇವಪ್ಪ, ಕಂಪ್ಯೂಟರ್ ಅಪರೇಟರ್ ಚಂದ್ರಪ್ಪ, ಮಹೇಶ್ ಇದ್ದರು.
ನೂತನ ಅಧ್ಯಕ್ಷ ಉಪಾಧ್ಯಕ್ಷರನ್ನು ಗ್ರಾ.ಪಂ. ಅಧ್ಯಕ್ಷ ಚೈತ್ರ ಸಿದ್ದರಾಜು, ಮಾಜಿ ಉಪಾಧ್ಯಕ್ಷ ಮಹೇಂದ್ರ, ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಅರಳೀಕಟ್ಟೆ ಗ್ರಾಮ ಘಟಕದ ಅಧ್ಯಕ್ಷ ಕುಮಾರ್, ಕಾರ್ಯದರ್ಶಿ ಮಹದೇವಸ್ವಾಮಿ(ಬೇಬಿ), ಮಲೆಯೂರು ಸಹಕಾರ ಸಂಘದ ಉಪಾಧ್ಯಕ್ಷ ರಾಜಪ್ಪ, ಕುಲಗಾಣ ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಕೂಸಪ್ಪ, ಮಹದೇವಪ್ಪ, ಬಸಪ್ಪ, ರಾಜಕೂಸು, ಭು ರೇವಣ್ಣ, ಬಸವಣ್ಣ, ರಾಜೇಶ್, ಸ್ವಾಮಿ ಎಸ್ಎಸ್ಎಸ್ ಪ್ರಪಟೀಸ್ ಸ್ವಾಮಿ,ಕನಕ, ಚೇತನ್, ಪ್ರಕಾಶ್, ಗುರು, ಸಂಗಪ್ಪ ಹಾಗೂ ಅರಳೀಕಟ್ಟೆ ಗ್ರಾಮಸ್ಥರು ಇದ್ದರು.