ಚಾಮರಾಜನಗರ-ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರದ ಆಯ-ವ್ಯಯ ಸಭೆ

ಚಾಮರಾಜನಗರ: ಚಾಮರಾಜನಗರ-ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರದ 2025-26ನೇ ಸಾಲಿನ ಆಯ-ವ್ಯಯ ಸಭೆಯನ್ನು ಪ್ರಾಧಿಕಾರದ ಅಧ್ಯಕ್ಷರಾದ ಮಹಮ್ಮದ್ ಅಸ್ಕರ್(ಮುನ್ನ) ರವರ ಅಧ್ಯಕ್ಷತೆಯಲ್ಲಿ ಗುರುವಾರ (ಫೆ.27) ನಡೆಯಿತು.

ಸಭೆಯಲ್ಲಿ ಚಾಮರಾಜನಗರ-ಮಸಗಾಪುರ ಗ್ರಾಮದ ವಿವಿಧ ಸ.ನಂ.ಗಳಲ್ಲಿ ಒಟ್ಟು 14ಎ-24ಗುಂ ವಿಸ್ತೀರ್ಣದ ಜಮೀನಿಗೆ ವಸತಿ ಯೋಜನೆ ಕೈಗೆತ್ತಿಕೊಂಡಿದ್ದು, ಈ ಸಂಬಂಧ 2021-22ನೇ ಸಾಲಿನ ಎಸ್.ಆರ್ ದರಪಟ್ಟಿಯಂತೆ ರೂ.12.54 ಕೋಟಿಗಳ ಅಂದಾಜುಪಟ್ಟಿ ತಯಾರಿಸಿದ್ದು, ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿರುವುದರಿಂದ 2023-24ನೇ ಸಾಲಿನ ಎಸ್.ಆರ್ ದರಪಟ್ಟಿಯಂತೆ ಮರು ಅಂದಾಜುಪಟ್ಟಿ ಸಿದ್ದಪಡಿಸಲು ಸಭೆಯಲ್ಲಿ ನಿರ್ಣಯಿಸಲಾಯಿತು. ವಸತಿ ಯೋಜನೆಯಡಿಯಲ್ಲಿ ನಿವೇಶನ ಹಂಚಿಕೆ ಸಂಬಂಧ ಈಗಾಗಲೆ ದಿನಾಂಕ:15-01-2025 ರಿಂದ 28-02-2025 ರವರೆಗೆ ಸಾರ್ವಜನಿಕರಿಂದ ಅರ್ಜಿಗಳನ್ನು ಅಹ್ವಾನಿಸಲಾಗಿತ್ತು. ಸಾರ್ವಜನಿಕರ ಕೋರಿಕೆ ಮೇರೆಗೆ ದಿನಾಂಕ:31-03-2025 ರವರೆಗೆ ಅರ್ಜಿಗಳನ್ನು ಆಹ್ವಾನಿಸಲು ಅವಧಿ ವಿಸ್ತರಿಸಲು ನಿರ್ಣಯಿಸಲಾಯಿತು.

ಚಾಮರಾಜನಗರ-ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬರುವ ಕೋಡಿಮೋಳೆ ಕೆರೆಯನ್ನು ಅಭಿವೃದ್ಧಿಪಡಿಸುವ ಸಂಬಂಧ ರೂ.4.25 ಕೋಟಿಗಳಿಗೆ ಡಿಪಿಆರ್ ಸಿದ್ದಪಡಿಸಲಾಗಿದ್ದು, ರೂ.2.00 ಕೋಟಿಗಳಿಗೆ ಸರ್ಕಾರದಿಂದ ಅನುಮೋದನೆ ಪಡೆದಿದ್ದು, ಉಳಿಕೆ ರೂ.2.25 ಕೋಟಿಗಳಿಗೆ ಸರ್ಕಾರದ ಅನುಮೋದನೆಗಾಗಿ ಸಲ್ಲಿಸಬೇಕಾಗಿರುವ ಹಿನ್ನೆಲೆಯಲ್ಲಿ ಆಯ-ವ್ಯಯ ಸಭೆಯಲ್ಲಿ ಮಂಡಿಸಿ ನಿರ್ಣಯಿಸಲಾಯಿತು.

ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಚಾಮರಾಜನಗರ, ನಗರಸಭೆ ವಾರ್ಡ್ ನಂ-04 ಬೀಡಿ ಕಾಲೋನಿಯಲ್ಲಿರುವ ಅಜೀಜ್ ಸೇಠ್ ಉದ್ಯಾನವನ ಅಭಿವೃದ್ಧಿಪಡಿಸಲು ಡಿ.ಪಿ.ಆರ್ ಅನ್ನು ರೂ.44.00 ಲಕ್ಷಗಳಿಗೆ ಅಂದಾಜುಪಟ್ಟಿಯನ್ನು ಸಿದ್ದಪಡಿಸಿದ್ದು, ಸರ್ಕಾರದ ಅನುಮೋದನೆಗೆ ಸಲ್ಲಿಸಲು ಸಭೆಯಲ್ಲಿ ನಿರ್ಣಯಿಸಲಾಯಿತು.

ಪ್ರಾಧಿಕಾರದ ನಾಮ ನಿರ್ದೇಶನ ಸದಸ್ಯರಾದ ಎಸ್.ರಾಜು, ರಾಜೇಂದ್ರ, ಪುಟ್ಟಸ್ವಾಮಿ, ಅಂಬಿಕಾ. ಹೆಚ್, ಜಿಲ್ಲಾ ಆರೋಗ್ಯಾಧಿಕಾರಿ ಚಿದಂಬರಂ, ಸೆಸ್ಕ್ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಮಹೇಶ್, ಲೋಕೋಪಯೋಗಿ ಇಲಾಖೆಯ ಕಿರಿಯ ಎಂಜಿನಿಯರ್ ಐಶ್ವರ್ಯ, ನಗರಸಭೆಯ ಸಹಾಐಕ ಕಾರ್ಯಪಾಲಕ ಎಂಜಿನಿಯರ್ ನಟರಾಜು, ಪ್ರಾಧಿಕಾರದ ಆಯುಕ್ತರಾದ ಹೆಚ್.ವಿ. ಸೀಮಾ, ನಗರ ಯೋಜಕ ಸದಸ್ಯರಾದ ರಿತೇಶ್ ಇತರರು ಸಭೆಯಲ್ಲಿ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *