ಕನ್ನಡ ಕಲಿಕಾ ಕೇಂದ್ರ ಸ್ಥಾಪನೆಗೆ ಶೀಘ್ರ ಕ್ರಮ

ಮೈಸೂರು: ಹೊರ ರಾಜ್ಯದವರ ಕನ್ನಡ ಭಾಷಾ ಕಲಿಕೆಗಾಗಿ ಕನ್ನಡ ಕಲಿಕಾ ಕೇಂದ್ರ ಸ್ಥಾಪನೆ ಮಾಡುವ ಸಂಬoಧ ಅಧಿಕಾರಿಗಳ ಜತೆ ಚರ್ಚೆ ನಡೆಸಿ ಶೀಘ್ರ ಕ್ರಮಕೈಗೊಳ್ಳಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಹೇಳಿದ್ದಾರೆ. ಕರ್ನಾಟಕ ಸುವರ್ಣ ಮಹೋತ್ಸವದ ಸಂಭ್ರಮದ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ಮೈಸೂರಿನ ಕಿರುಕಲಾ ರಂಗ ಮಂದಿರದಲ್ಲಿ ಸೋಮವಾರ ಕರೆದಿದ್ದ ಸಾಹಿತಿ, ರಂಗಕರ್ಮಿ ಹಾಗೂ ಕಲಾವಿದರೊಂದಿಗೆ ಸಭೆ ನಡೆಸಿದ ಬಳಿಕ ಸಚಿವರು ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದರು. ಹೊರ ರಾಜ್ಯದಿಂದ ಬಂದು ಕರ್ನಾಟಕದಲ್ಲಿ ನೆಲೆಸುವ ಹೊರ ರಾಜ್ಯದವರಿಗೆ ಕನ್ನಡ ಭಾಷೆ ಕಲಿಸಬೇಕು ಎಂಬ ಬಗ್ಗೆ ಅಧಿಕಾರಿಗಳ ಜತೆ ಒಂದೆರೆಡು ಸುತ್ತಿನ ಸಭೆ ನಡೆಸಲಾಗಿದೆ. ಕನ್ನಡ ಕಲಿಕೆಗೆ ತಂತ್ರಾAಶ ಪರಿಚಯಿಸುವ ಸಂಬ0ಧ ಕೂಡ ಸಭೆಯಲ್ಲಿ ಚರ್ಚೆ ನಡೆದಿದೆ ಎಂದು ತಿಳಿಸಿದರು. ನ.1ಕ್ಕೆ ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಎಂಬ ಘೋಷವಾಕ್ಯದಡಿ ಕಾರ್ಯಕ್ರಮ ನಡೆಸುವ ಬಗ್ಗೆ ಆಯವ್ಯಯದಲ್ಲಿ ಈಗಾಗಲೇ ಘೋಷಣೆ ಮಾಡಲಾಗಿದೆ. ರಾಜ್ಯದ ನಾಲ್ಕು ಕಂದಾಯ ವಿಭಾಗವಾರು ಸಾಹಿತಿಗಳ ಸಭೆ ಆಯೋಜನೆ ಮಾಡಿ ಸಲಹೆ ಪಡೆದುಕೊಳ್ಳಲಾಗಿದೆ. ಮೈಸೂರಿನಲ್ಲಿ ನಡೆದ ಸಭೆಯಲ್ಲಿ ಕರ್ನಾಟಕದ ಪರಂಪರೆ, ಕನ್ನಡದ ಇತಿಹಾಸ ಹಾಗೂ ಸಂಸ್ಕೃತಿ ಬಿಂಬಿಸುವ ಹಿನ್ನೆಲೆಯಲ್ಲಿ ಕನ್ನಡರಥ ರಾಜ್ಯವಿಡೀ ಸಂಚಾರ ಮಾಡುವುದು, 31 ಜಿಲ್ಲೆಗಳಲ್ಲಿ ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಪ್ರತಿಮೆ ನಿರ್ಮಾಣ, ಕುವೆಂಪು ಅವರ ಸಾಹಿತ್ಯವನ್ನು ಕೇಂದ್ರವಾಗಿಟ್ಟುಕೊ0ಡು ಕಾರ್ಯಕ್ರಮ ಆಯೋಜನೆ, ಕರ್ನಾಟಕ ಏಕೀಕರಣ ಚಳುವಳಿಯಲ್ಲಿ ಭಾಗಿಯಾಗಿದ್ದ ಗಣ್ಯರ ಸನ್ಮಾನ, ಗಡಿನಾಡಿನಲ್ಲಿ ಕನ್ನಡ ಬಿತ್ತುವುದು ಸೇರಿದಂತೆ ಹೀಗೆ ಹಲವು ಸಲಹೆಗಳು ಬಂದಿವೆ. ಈ ಸಲಹೆಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಬಳಿ ಚರ್ಚೆ ನಡೆಸಿ ಕಾರ್ಯಕ್ರಮದ ರೂಪುರೇಷೆಯನ್ನು ಅಂತಿಮಗೊಳಿಸಲಾಗುವುದು ಎಂದು ಸಚಿವರು ತಿಳಿಸಿದರು. ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಅವರ ಅವಧಿಯಲ್ಲಿ ಕರ್ನಾಟಕ ಎಂದು ಹೆಸರು ನಾಮಕರಣ ಮಾಡಲಾಗಿತ್ತು. ಇದೀಗ ಮೈಸೂರು ಭಾಗದವರೇ ಆದ ಸಿದ್ದರಾಮಯ್ಯ ಅವರ ಅವಧಿಯಲ್ಲಿ 50ರ ಸಂಭ್ರಮದಲ್ಲಿರುವುದು ಹೆಮ್ಮೆಯ ಸಂಗತಿ. ವರ್ಷವಿಡೀ ಕಾರ್ಯಕ್ರಮವನ್ನು ಅರ್ಥ ಪೂರ್ಣವಾಗಿ ಆಚರಣೆ ಮಾಡಲಾಗುವುದು ಎಂದರು. ಶೀಘ್ರ ನೇಮಕ: ಅಕಾಡೆಮಿ ಹಾಗೂ ಪ್ರಾಧಿಕಾರಗಳಿಗೆ ಶೀಘ್ರವೇ ಅಧ್ಯಕ್ಷರ ನೇಮಕ ಮಾಡಲಾಗುವುದು. ಈ ಸಂಬ0ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಪ್ರಸಕ್ತ ಸಾಲಿನಲ್ಲಿ ಮುಖ್ಯಮಂತ್ರಿಗಳು 247 ಕೋಟಿ ರೂ. ಅನುದಾನ ನೀಡಿದ್ದಾರೆ. ಅಗತ್ಯ ಬಿದ್ದರೆ ಹೆಚ್ಚುವರಿ ಅನುದಾನಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಇದೇ ವೇಳೆ ತಿಳಿಸಿದರು. ಸಭೆಯಲ್ಲಿ ಸಾಹಿತಿಗಳಾದ ಸಿ.ಪಿ.ಕೃಷ್ಣಕುಮಾರ್, ಹಿ.ಶಿ.ರಾಮಚಂದ್ರೇಗೌಡ, ಪ್ರಸನ್ನ, ಚನ್ನಿ ಜನಾರ್ಧನ್, ಮಂಡ್ಯ ರಮೇಶ್, ಪ್ರೊ. ಕೆ.ಎಸ್.ಭಗವಾನ್, ಬಿ.ಎಂ.ರಾಮಚ0ದ್ರ, ಲತಾ ರಾಜಶೇಖರ್, ತುಳಸಿ ರಾಮಚಂದ್ರ, ಕಾಳೇಗೌಡ ನಾಗವಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ವಿಶ್ವನಾಥ್ ಹಿರೇಮಠ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ್ ಹಾನಗಲ್, ಅಧಿಕಾರಿಗಳಾದ ಮಧುಸೂದನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷರಾಗಿ ಎಚ್.ಎಸ್. ನಂಜುಂಡಪ್ರಸಾದ್, ಉಪಾಧ್ಯಕ್ಷರಾಗಿ ರಾಯಪ್ಪನ್ ಅವಿರೋಧ ಆಯ್ಕೆ

ಒಕ್ಕೂಟಕ್ಕೆ ಸ್ವಂತ ಕಟ್ಟಡ ಹಾಗೂ ಸಹಕಾರಿ ಶಿಕ್ಷಣ ನೀಡಲು ಹೆಚ್ಚಿನ ಒತ್ತು: ನಂಜುಂಡಪ್ರಸಾದ್ಚಾಮರಾಜನಗರ: ಜಿಲ್ಲಾ ಸಹಕಾರ ಒಕ್ಕೂಟದ ನೂತನ ಅಧ್ಯಕ್ಷರಾಗಿ ಚಾಮುಲ್…

ವಿಕಲ ಚೇತನ ಮಕ್ಕಳು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ

ಅಪರ ಜಿಲ್ಲಾಧಿಕಾರಿ ಗೀತಾ ಹುಡೇದ್ ಸಲಹೆಚಾಮರಾಜನಗರ: ವಿಕಲಚೇತನ ಮಕ್ಕಳು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ಜೊತೆಗೆ ಸರ್ಕಾರದ ಸವಲತ್ತು ಸದ್ಬಳಕೆ ಮಾಡಿಕೊಂಡು…

ಶ್ರಾವಣ ಶನಿವಾರ: ನೃಪತುಂಗ ವೃತ್ತದಲ್ಲಿ ವಿಜೃಂಭಣೆಯಿಂದ ಶ್ರೀ ಶನೇಶ್ವರಸ್ವಾಮಿ ಪೂಜಾ, ಹರಿಕಥೆ, ಸಹಪಂಕ್ತಿ ಭೋಜನಾ

ಚಾಮರಾಜನಗರ: ನಗರದ ನೃಪತುಂಗ ವೃತ್ತದಲ್ಲಿರುವ ಶ್ರೀ ಶನೇಶ್ವರ ದೇವಸ್ಥಾನದ ಸನ್ನಿಧಿಯಲ್ಲಿ ಎರಡನೇ ಶ್ರಾವಣ ಶನಿವಾರ ಪ್ರಯುಕ್ತ ಸ್ವಾಮಿಗೆ ವಿಶೇಷ ಹೂವಿನ ಆಲಂಕಾರರೊಂದಿಗೆ…

ಮಣ್ಣಿನಿಂದ ಮಾಡಿದ ಪರಿಸರ ಸ್ನೇಹಿ ಗಣಪತಿ ಮೂರ್ತಿ ಬಳಸಿ:- ಡಾ. ಕೆ ವಿ ರಾಜೇಂದ್ರ

ಮೈಸೂರು: ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ನಗರದಲ್ಲಿ ಪಿ.ಓ.ಪಿ ( ಪ್ಲಾಸ್ಟರ್ ಆಫ್ ಪ್ಯಾರಿಸ್) ಗಣೇಶನ ಬಳಕೆ ನಿಷೇಧಿಸಿದ್ದು, ಮಣ್ಣಿನಿಂದ ಮಾಡಿದ…

ಬಾಲ ವಿಕಾಸ ಸಮಿತಿಗಳನ್ನು ಕ್ರಿಯಾಶೀಲಗೊಳಿಸಲು ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಸೂಚನೆ

ಚಾಮರಾಜನಗರ: ಜಿಲ್ಲೆಯಲ್ಲಿ ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿರುವ ಬಾಲ ವಿಕಾಸ ಸಮಿತಿಗಳನ್ನು ಕ್ರಿಯಾಶೀಲಗೊಳಿಸುವಂತೆ ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಅವರು ಸೂಚನೆ…

ಅರಕಲವಾಡಿ ಪಿಎಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಎಸ್. ಬಸವಣ್ಣ, ಉಪಾಧ್ಯಕ್ಷರಾಗಿ ಲಿಂಗನಾಯಕ ಅವಿರೋಧ ಆಯ್ಕೆ

ಚಾಮರಾಜನಗರ: ತಾಲೂಕಿನ ಅರಕಲವಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎಂ. ಬಸವಣ್ಣ ಉಪಾಧ್ಯಕ್ಷರಾಗಿ ಲಿಂಗನಾಯಕ ಅವಿರೋಧವಾಗಿ ಆಯ್ಕೆಯಾದರು.…

ತೆಂಗು ಬೆಳೆಗಾರರಿಂದ ಬೆಂಬಲ ಬೆಲೆ ನೀಡಿ ತೆಂಗು ಖರೀದಿಸಲು ಸರ್ಕಾರಕ್ಕೆ ಪ್ರಸ್ತಾವನೆ : ಗೀತಾ ಹುಡೇದ್

ಚಾಮರಾಜನಗರ: ತೆಂಗು ಬೆಳೆಗಾರರಿಗೆ ಪ್ರೋತ್ಸಾಹ ನೀಡಲು ಬೆಲೆ ಕುಸಿತದ ಹಿನ್ನೆಲೆಯಲ್ಲಿ ಖರೀದಿ ಕೇಂದ್ರ ತೆರೆದು ಬೆಂಬಲ ಬೆಲೆ ಯೋಜನೆಯಡಿಯಲ್ಲಿ ತೆಂಗು ಖರೀದಿ…

ರೈತ ಸಂಘದಿಂದ ಡಿವೈಎಸ್ಪಿ ಪ್ರಿಯಾದರ್ಶಿನಿ ಅವರಿಗೆ ಸನ್ಮಾನ

ಚಾಮರಾಜನಗರ: ಚಾಮರಾಜನಗರ ಉಪ ವಿಭಾಗದ ಉಪ ಅಧೀಕ್ಷಕರಾಗಿ ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿ, ಬೆಂಗಳೂರಿಗೆ ವರ್ಗಾವಣೆಗೊಂಡ ಪ್ರಿಯಾದರ್ಶಿನಿ ಈ ಸಾಣೆಗೊಪ್ಪ…

ಸೆ.4 ರಂದು ಕನ್ನೇರಿ ಕಾಲೋನಿಯಲ್ಲಿ ಗಿರಿಜನರ ಆರೋಗ್ಯ ತಪಾಸಣಾ ಶಿಬಿರ

ಚಾಮರಾಜನಗರ: ಜಿಲ್ಲೆಯ ೧೬೧ ಗಿರಿಜನ ಹಾಡಿಗಳಲ್ಲಿ ಅನಿಮೀಯಾ ಮುಕ್ತ ಭಾರತ ಕಾರ್ಯಕ್ರಮದ ಮಾರ್ಗಸೂಚಿಯನ್ವಯ ವಿಶೇಷವಾಗಿ ಮಹಿಳೆಯರಿಗೆ ರಕ್ತಹೀನತೆಯ ಬಗ್ಗೆ ಇಮೋಗ್ಲೋಬಿನ್ ಪರೀಕ್ಷೆ…