ಅಮೃತ ವಿಶ್ವವಿದ್ಯಾಪೀಠಂನಲ್ಲಿ 12ನೇ ಐಇಇಇ ಅಂತರಾಷ್ಟ್ರೀಯ ವಿಚಾರ ಸಂಕಿರಣದ ಸಮಾರೋಪ ಸಮಾರಂಭ

ಮೈಸೂರು: ಅಮೃತ ವಿಶ್ವವಿದ್ಯಾಪೀಠಂ ಮೈಸೂರು ಕ್ಯಾಂಪಸ್ ಹಾಗೂ ಐಇಇಇ ಸಹಯೋಗದಲ್ಲಿ ಆಯೋಜನೆಗೊಂಡ ಕ್ಲೌಡ್‍ಕಂಪ್ಯೂಟಿಂಗ್ ಇನ್ ಎಮಜಿರ್ಂಗ್ ಮಾರ್ಕೆಟ್‍ನ ಕುರಿತ 12 ನೇ…

ಪತ್ರಿಕಾ ಹಾಗೂ ವನ್ಯಜೀವಿ ಛಾಯಾಗ್ರಾಹಕ ಎಸ್ ಆರ್ ಮಧುಸೂದನ್ ರವರಿಗೆ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಪ್ರಶಸ್ತಿ

ಪತ್ರಿಕಾ ಛಾಯಾಗ್ರಾಹಕ ಹಾಗೂ ವನ್ಯಜೀವಿ ಛಾಯಾಗ್ರಾಹಕ ಎಸ್ ಆರ್ ಮಧುಸೂದನ್ ರವರಿಗೆ ಕರ್ನಾಟಕ ಅರಣ್ಯ ಇಲಾಖೆ ಬೆಂಗಳೂರು ವತಿಯಿಂದ ವನ್ಯಜೀವಿ ಸಪ್ತಾಹದ…

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಿಂದ ಪ್ರಗತಿ ಪರಿಶೀಲನೆ

ಅಂತರ್ಜಲ ಮಟ್ಟವನ್ನು ಅಭಿವೃದ್ಧಿ ಪಡಿಸಿ, ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮವಹಿಸಿ – ಪ್ರಿಯಾಂಕ ಖರ್ಗೆ ಮೈಸೂರು:ಮೈಸೂರು ಜಿಲ್ಲೆಯಲ್ಲಿ ಕಾವೇರಿ, ಕಪಿಲಾ ನದಿಗಳು ಹರಿಯುವ ಜಿಲ್ಲೆಯಾಗಿದ್ದು ಇಲ್ಲಿ ನೀರಿನ ಲಭ್ಯತೆ ಹೆಚ್ಚಿದೆ. ಸಿಗುವ ನೀರನ್ನು ಇಂಗಿಸುವ ಮೂಲಕ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟವನ್ನು ಅಭಿವೃದ್ಧಿ ಪಡಿಸಿ, ಇದರಿಂದ ಕುಡಿಯುವ ನೀರಿನ ಕೊರತೆ ಆಗುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ ಖರ್ಗೆ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಬರ ಇದೆ. ಕುಡಿಯುವ ನೀರಿಗೆ ಪ್ರಥಮ ಆಧ್ಯತೆ ನೀಡಬೇಕು. ಮುಂದಿನ 6 ತಿಂಗಳುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬರುವ ಸಮಸ್ಯೆ ಕಂಡು ಬರುವ ಗ್ರಾಮಗಳನ್ನು ಗುರುತಿಸಿ, ಕುಡಿಯುವ ನೀರು ಪೂರೈಸುವ ಕ್ರಮಗಳನ್ನು ಗುರುತಿಸಿಕೊಳ್ಳಿ. ಸಮಸ್ಯೆ ಇರುವ ಗ್ರಾಮಗಳನ್ನು ಗುರುತಿಸುವ ಮುನ್ನ ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. ನರೇಗಾ ಅಡಿ ಮಾನವ ದಿನಗಳ ಸೃಜನೆಯಲ್ಲಿ ಟಿ ನರಸೀಪುರ ನಂಜನಗೂಡು ಹಾಗೂ ಪಿರಿಯಾಪಟ್ಟಣ ತಾಲ್ಲೂಕುಗಳು 50% ಗಿಂತ ಕಡಿಮೆ ಇದೆ. ಈ ಬಾರಿ ಎಲ್ಲಾ ಕಡೆ ಬರ ಇದೆ. ಬರ ಇರುವುದರಿಂದ ನರೇಗಾ ಯೋಜನೆಯಡಿ ಹೆಚ್ಚು ಮಾನವ ದಿನಗಳ ಕೆಲಸ ಆಗಬೇಕಿತ್ತು. ರಾಜ್ಯದಲ್ಲಿ 13 ಕೋಟಿ ಮಾನವ ದಿನಗಳ ಗುರಿ ಇತ್ತು ಇದರಲ್ಲಿ 10 ಕೋಟಿ ಮಾನವ ದಿನಗಳ ಗುರಿ ಸಾಧಿಸಿದ್ದೇವೆ. ಆದರೆ ಜಿಲ್ಲೆಯಲ್ಲಿ ಪ್ರಗತಿ ಉತ್ತಮವಾಗಿಲ್ಲ ಎಂದು ಅಸಮಾಧಾನ ವ್ಯಕ್ತ ಪಡಿಸಿದರು. ಮೈಸೂರು ಜಿಲ್ಲೆಯಲ್ಲಿ 34 ಲಕ್ಷ ಮಾನವ ದಿನಗಳ ಗುರಿ ನಿಗದಿಪಡಿಸಲಾಗಿದೆ. ಆರ್ಥಿಕ ವರ್ಷದ ಅಂತ್ಯದೊಳಗೆ ಈ ಗುರಿ ಸಾಧಿಸಬೇಕು. ನಂಜನಗೂಡು, ಚಾಮುಂಡಿ ಬೆಟ್ಟದ ವ್ಯಾಪ್ತಿ ಹಾಗೂ ಜಿಲ್ಲೆಯ ಇತರೆ ಕಡೆ ಸೈಕಲ್ ಅಗರಬತ್ತಿ ಅವರೊಂದಿಗೆ ಎನ್.ಆರ್.ಎಲ್.ಎಂ ಯೋಜನೆಯಡಿ ಟೈ-ಅಪ್ ಆಗಿ ಗುಡಿ ಕೈಗಾರಿಕೆಗಳನ್ನು ಉತ್ತೇಜಿಸುವ ಯೋಜನೆಗಳನ್ನು ರೂಪಿಸಲಾಗುವುದು. ಮೈಸೂರು ಜಿಲ್ಲೆ ಪ್ರವಾಸಿ ತಾಣಗಳನ್ನು ಹೆಚ್ಚು ಹೊಂದಿದ್ದು, ಇಲ್ಲಿ ಇರುವ ಪುರಾತನ ಕಲ್ಯಾಣಿ ಗಳನ್ನು ನರೇಗಾ ಯೋಜನೆಯಡಿ ಸ್ವಚ್ಛಗೊಳಿಸಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದರು. ಗ್ರಾಮ ಪಂಚಾಯಿತಿಗಳಲ್ಲಿ ಕಾಮಗಾರಿಗಳಲ್ಲಿ ಅಕ್ರಮಗಳು ಆಗಿರುವ ಕುರಿತು ಸೋಷಿಯಲ್ ಆಡಿಟ್ ನಲ್ಲಿ ರಿಕವರಿಗೆ ಬರೆದಿರುವ ಮೊತ್ತವನ್ನು ಸಂಬ0ದಿಸಿದ ಅಧಿಕಾರಿಗಳಿಂದ ವಸೂಲಿ ಮಾಡಬೇಕು. ಬ್ಯಾಂಬೋ ಕಲ್ಟಿವೇಶನ್ ಅನ್ನು ಮೈಸೂರು ಜಿಲ್ಲೆಯ ಹೆಚ್ ಡಿ ಕೋಟೆ, ಹುಣಸೂರು, ಪಿರಿಯಾಪಟ್ಟಣ ತಾಲ್ಲೂಕಿನ ಅರಣ್ಯ ಪ್ರದೇಶಗಳಲ್ಲಿ ಮಾಡಲು ಅವಕಾಶವಿದೆ. ನರೇಗಾ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳಲ್ಲಿ ಶೇಕಡಾ 20 ರಷ್ಟು ಕಾಮಗಾರಿಗಳು ಬಾಕಿ ಇಳಿದಿವೆ. ಇವುಗಳನ್ನು ಪೂರ್ಣಗೊಳಿಸಲು ಸಂಬAದಿಸಿದ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು. ಜಲಜೀವನ್ ಮಿಷನ್ ಯೋಜನೆಯಡಿ ಏಕ ಗ್ರಾಮ ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಹಂತ 1 ರಿಂದ 4 ಹಂತಗಳ ಕಾಮಗಾರಿಗಳು ಬಾಕಿ ಉಳಿದಿವೆ. ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಗುಣಮಟ್ಟದಲ್ಲಿ ಕಾಮಗಾರಿಗಳನ್ನು ಮುಗಿಸದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ ಎಂದು ತಿಳಿಸಿದರು. ಗ್ರಾಮ ಪಂಚಾಯಿತಿಗಳಲ್ಲಿ ತೆರಿಗೆ ವಸೂಲಾತಿಯು ಸಮರ್ಪಕವಾಗಿ ಆಗಿಲ್ಲ. ತೆರಿಗೆ ವಸೂಲಾತಿಯಲ್ಲಿ ನಿಗದಿತ ಗುರಿ ಮುಟ್ಟಿಲ್ಲ. ಇದರಿಂದ ಗ್ರಾಮ ಪಂಚಾಯಿತಿಗಳಲ್ಲಿ ಸಿಬ್ಬಂದಿಗಳ ಸಂಬಳ ನೀಡಲು ಕೊರತೆ ಉಂಟಾಗುತ್ತಿದೆ. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಈ ಬಗ್ಗೆ ಕ್ರಮ ವಹಿಸಿ ತೆರಿಗೆ ವಸೂಲಾತಿ ಹೆಚ್ಚಿಸಬೇಕು ಎಂದು ಸೂಚನೆ ನೀಡಿದರು. ಸಾರ್ವಜನಿಕರಿಂದ ಅಧಿಕಾರಿಗಳು ಹಾಗೂ ಸಿಬ್ಬಂದಿ ಗಳ ವಿರುದ್ಧ ದೂರು ಬಂದಾಗ ಪರಿಶೀಲನೆ ನಡೆಸಬೇಕು. ನವೆಂಬರ್ 20 ರೊಳಗೆ ಇಲಾಖಾ ವಿಚಾರಣೆ ಪ್ರಕರಣಗಳನ್ನು ಪೂರ್ಣಗೊಳಿಸಬೇಕು ಎಂದು ನಿರ್ದೇಶನ ನೀಡಲಾಗಿದೆ. 15 ನೆ ಹಣಕಾಸು ಯೋಜನೆಯಡಿ ಜಿಲ್ಲೆಯಲ್ಲಿ 78 ಕೋಟಿ ಬಳಕೆಯಾಗದ ಅನುದಾನ ಬಾಕಿ ಉಳಿದಿದೆ. ಶಾಸಕರ ಗಮನಕ್ಕೆ ತಂದು ಈ ಹಣವನ್ನು ಅಗತ್ಯವಾದ ಕಾಮಗಾರಿಗಳಿಗೆ ಬಳಕೆ ಮಾಡುವಂತೆ ಸೂಚನೆ ನೀಡಿದರು. ಗ್ರಾಮ ಪಂಚಾಯತ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಇ-ಅಟೆಂಡೆನ್ಸ್ ಹಾಕಬೇಕು ಎಂದು ಸೂಚನೆ ನೀಡಿದರು. ಹೆಚ್.ಡಿ ಕೋಟೆ ತಾಲ್ಲೂಕಿನ ಶಾಸಕರಾದ ಅನಿಲ್ ಕುಮಾರ್ ಅವರು ಮಾತನಾಡಿ ತಾಲ್ಲೂಕಿನಲ್ಲಿ ಹೆಚ್ಚಿನ ಅರಣ್ಯ ಪ್ರದೇಶ ಇದ್ದು ಇಲ್ಲಿ ಹಾಡಿ ಜನರು ಹೆಚ್ಚಾಗಿ ವಾಸಿಸುತ್ತಾರೆ. ಇಲ್ಲಿ ಜೇನು ಉತ್ಪಾದನೆ ಹೆಚ್ಚು ಇದ್ದು ಇವರು ಉತ್ಪಾದಿಸುವ ಜೇನು ಮಾರಾಟ ಮಾಡಲು ಸೂಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಬೇಕು. ವಿವಿಧ ಸಮುದಾಯಗಳ ಭವನಗಳು ಹೆಚ್ಚು ಉಪಯೋಗವಾಗುತ್ತಿಲ್ಲ. ಇವುಗಳನ್ನು ಪಂಚಾಯತ್‌ಗಳಿಗೆ ತೆಗೆದುಕೊಂಡು ಇಲ್ಲಿ ಗ್ರಂಥಾಲಯಗಳನ್ನು ತೆರೆಯಬಹುದಾಗಿದೆ ಎಂದು ಮನವಿ ಮಾಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ ಎಂ ಗಾಯತ್ರಿ ಅವರು ಮಾತನಾಡಿ ನರೇಗಾ ಯೋಜನೆಯಲ್ಲಿ ರಾಯಲ್ಟಿ ಮೊತ್ತವನ್ನು ಕಾಮಗಾರಿ ಮುಗಿದ ಮೇಲೆ ಗುತ್ತಿಗೆದಾರರು ಪಾವತಿ ಮಾಡಬೇಕು. ಆದರೆ ಕೆಲವರು ಪಾವತಿ ಮಾಡದೇ ಬಾಕಿ ಉಳಿದಿದೆ ಎಂದು ಮಾಹಿತಿ ನೀಡಿದರು. ಸಭೆಯಲ್ಲಿ ಶಾಸಕರಾದ ಜಿ.ಡಿ ಹರೀಶ್ ಗೌಡ, ರವಿಶಂಕರ್, ದರ್ಶನ್ ಧ್ರುವನಾರಾಯಣ್, ಹರೀಶ್ ಗೌಡ ವಿಧಾನ ಪರಿಷತ್ ಸದಸ್ಯರಾದ ಡಿ ತಿಮ್ಮಯ್ಯ, ಮಂಜೇಗೌಡ ಅವರು ಉಪಸ್ಥಿತರಿದ್ದರು

ಭಾರತೀಯ ಯುವವಿಜ್ಞಾನಿಗಳು ಹಾಗೂ ಸಂಶೋಧಕರಿಗೆ ಹೆಚ್ಚಿನ ಅವಕಾಶ: ಎಮ್.ಡಿ.ರಂಗನಾಥ್

ಮೈಸೂರು: :“ಕ್ಲೌಡ್ ಕಂಪ್ಯೂಟಿಂಗ್ ಅತಿ ವೇಗದಲ್ಲಿ ಬೆಳೆಯುತ್ತಿರುವ ತಂತ್ರಜ್ಞಾನವಾಗಿದ್ದು, ಇಂದಿನ ಯುವ ಪೀಳಿಗೆಯ ವಿಜ್ಞಾನಿಗಳು ಹಾಗೂ ಸಂಶೋಧಕರಿಗೆ ವಿಪುಲ ಅವಕಾಶಗಳು ಲಭ್ಯವಾಗಲಿವೆ.…

ಸುವರ್ಣಬೆಳಕು ಫೌಂಡೇಷನ್ ವತಿಯಿಂದ ಸಾಹಿತ್ಯ ಹಾಗೂ ಪರಿಸರ ಪೇಮಿ ಅಕ್ಬರ್ ಗೆ ಸುವರ್ಣ ಬೆಳಕು ಪ್ರಶಸ್ತಿ

ಮೈಸೂರು: ಸುವರ್ಣ ಬೆಳಕು ಫೌಂಡೇಷನ್ ವತಿಯಿಂದ ಇಂದು ಕನ್ನಡ ರಾಜ್ಯೋತ್ಸವ ಅಚರಿಸಲಾಯಿತು. ಮೈಸೂರಿನ ಕಲ್ಯಾಣಗಿರಿ ನಗರದ ನಿವಾಸಿ ಅಕ್ಬರ್ ಸಾಧನೆ ಗುರುತಿಸಿ…

ಸಮರ್ಥನಂ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ

ಮೈಸೂರಿನ ವಿಜಯನಗರ 2ನೇ ಹಂತದಲ್ಲಿರುವ ಸಮರ್ಥನಂ ಬುದ್ಧಿ ವಿಶೇಷ ಶಾಲೆಯ ಆವರಣದಲ್ಲಿ ವಿಶೇಷ ಮಕ್ಕಳಿಂದ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಯಿತು. ಕಾರ್ಯಕ್ರಮವನ್ನು…

ಮತದಾರರ ಪಟ್ಟಿ ನೋಂದಣಿ ಹಾಗೂ ಪರಿಷ್ಕರಣೆಯಲ್ಲಿ ರಾಜಕೀಯ ಪಕ್ಷಗಳ ಸಹಕಾರ ಮುಖ್ಯ : ಸೆಲ್ವಕುಮಾರ್

ಮೈಸೂರು: ಮತದಾರರ ಪಟ್ಟಿ ನೋಂದಣಿ ಹಾಗೂ ಪರಿಷ್ಕರಣೆಯಲ್ಲಿ ರಾಜಕೀಯ ಪಕ್ಷಗಳ ಸಹಕಾರವೂ ಮುಖ್ಯ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಮತದಾರರ…

ಅಧಿಕಾರಿಗಳು ಕ್ಷೇತ್ರಗಳಿಗೆ ಭೇಟಿ ನೀಡಿ, ತಳಮಟ್ಟದಿಂದ ಕೆಲಸ ಮಾಡಬೇಕು:ಸೆಲ್ವಕುಮಾರ್

ಮೈಸೂರು: ಬರಗಾಲದ ಈ ಸಂದರ್ಭದಲ್ಲಿ ಅಧಿಕಾರಿಗಳು ಕ್ಷೇತ್ರಗಳಿಗೆ ಭೇಟಿ ನೀಡಿ ತಳಮಟ್ಟದಿಂದ ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಸೆಲ್ವಕುಮಾರ್…

ಪ್ರಧಾನ ಮಂತ್ರಿ ಸುರಕ್ಷಾ ಭೀಮ ಯೋಜನೆ ಅಡಿ 2 ಲಕ್ಷ ಅಪಘಾತ ಪರಿಹಾರ

ಮೈಸೂರು: ಕಾರ್ಮಿಕ ಇಲಾಖೆ ವತಿಯಿಂದ ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶ ಕ್ರೂಡೀಕರಿಸುವ ಉದ್ದೇಶದಿಂದ 379 ವರ್ಗಗಳ ಸಂಘಟಿತ ಕಾರ್ಮಿಕರನ್ನು ಇ-ಶ್ರಮ್…

 ಜಿಲ್ಲೆಗೊಂದು ಮೆಡಿಕಲ್ ಕಾಲೇಜು – ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್

ಮೈಸೂರು: ಪ್ರತಿ ಜಿಲ್ಲೆಗೊಂದರಂತೆ ಸರ್ಕಾರಿ ಮೆಡಿಕಲ್ ಕಾಲೇಜು ಆರಂಭಿಸಲಾಗುವುದೆಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣ ಪ್ರಕಾಶ್ ಪಾಟೀಲ್ ಹೇಳಿದರು. ಶುಕ್ರವಾರ ಮೈಸೂರು…