ಚಾಮರಾಜನಗರ : ಅನಧಿಕೃತವಾಗಿ ಅಳವಡಿಸಿರುವ ಪ್ಲೆಕ್ಸ್, ಬ್ಯಾನರ್ಗಳನ್ನು ನಗರಸಭೆ ವತಿಯಿಂದ ತೆರವುಗೊಳಿಸಲಾಯಿತು.
ನಗರಸಭಾ ಪೌರಾಯುಕ್ತ ಪರಶುರಾಮ ಛಲವಾದಿ ಅವರ ನೇತೃತ್ವದಲ್ಲಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ನಗರ ಭುವನೇಶ್ವರಿ ವೃತ್ತ, ಜೋಡಿರಸ್ತೆ, ಇತರ ಕಡೆಗಳಲ್ಲಿ ಅನಧಿಕೃತವಾಗಿ ಅಳವಡಿಸಲಾಗಿದ್ದ ಪೈಕ್ಸ್, ಬ್ಯಾನರ್ಗಳನ್ನು ತೆರವುಗೊಳಿಸಲಾಯಿತು.
ಈ ಸಂದರ್ಭದಲ್ಲಿ ಕಂದಾಯ ಅಧಿಕಾರಿ ಸಂತೋಷಕುಮಾರ್, ದ್ವಿತೀಯ ದರ್ಜೆ ಸಹಾಯಕ ಮಹದೇವಸ್ವಾಮಿ, ಸಿ.ಡಿ.ವೆಂಕಟೇಶ್, ಚೇತನ್, ಮಣಿಕಂಠನಾಯಕ, ಪ್ರಸಾದ್ ಕುಮಾರ್, ನಿತಿನ್ ಕುಮಾರ್, ಪೊಲೀಸ್ ಪೇದಗಳು ಇತರರು ಭಾಗವಹಿಸಿದ್ದರು.