ಚಾಮರಾಜನಗರ: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಜಗಜ್ಯೋತಿ ಬಸವೇಶ್ವರರ ಪ್ರತಿಮೆಯನ್ನು ಇಂದು ಅನಾವರಣಗೊಳಿಸಿದರು ಮತ್ತು ಮಹರ್ಷಿ ಭಗೀರಥ, ಮಹರ್ಷಿ ವಾಲ್ಮೀಕಿ ಹಾಗೂ ಸಂತ ಕನಕದಾಸರ ಪುತ್ಥಳಿ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.
ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಅದ್ದೂರಿ ಕಾರ್ಯಕ್ರಮದಲ್ಲಿ ಮೊದಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.
ಸುತ್ತೂರು ವೀರಸಂಸ್ಥಾನ ಮಠಾಧೀಶರಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿ, ದಾವಣಗೆರೆಯ ರಾಜನಹಳ್ಳಿ ಶ್ರೀ ವಾಲ್ಮೀಕಿ ಗುರುಪೀಠದ ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮಿ, ಕೆ.ಆರ್. ನಗರ ಕನಕಗುರು ಪೀಠದ ಡಾ. ಶ್ರೀ ಶಿವಾನಂದಪುರಿ ಮಹಾಸ್ವಾಮಿಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಸಮಾಜದ ನಿರ್ಮಾತೃ, ಮಹಾನ್ ಸಮಾಜ ಸುಧಾರಕ, ಬಸವಣ್ಣನವರ ಕಂಚಿನ ಪ್ರತಿಮೆ ಅನಾವರಣಗೊಳಿಸಿ, ಪುಷ್ಪಾರ್ಚನೆಗೈದ ಬಳಿಕ ಜಿಲ್ಲಾಡಳಿತ ಭವನದ ಆವರಣದಲ್ಲಿಯೇ ಮಹರ್ಷಿ ಭಗೀರಥ, ಮಹರ್ಷಿ ವಾಲ್ಮೀಕಿ ಹಾಗೂ ಸಂತ ಕನಕದಾಸರ ಪುತ್ಥಳಿಗಳ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ನಾಮಫಲಕಗಳನ್ನು ಅನಾವರಣ ಮಾಡಿದರು.
ಪಶು ಸಂಗೋಪನೆ, ರೇಷ್ಮೆ ಸಚಿವರು ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್, ಸಮಾಜ ಕಲ್ಯಾಣ ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ ಹಾಗೂ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಲೋಕಸಭಾ ಸದಸ್ಯರಾದ ಸುನಿಲ್ ಬೋಸ್, ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಎ.ಆರ್. ಕೃಷ್ಣಮೂರ್ತಿ, ಎಂ.ಆರ್. ಮಂಜುನಾಥ್, ಎಚ್.ಎಂ. ಗಣೇಶ್ ಪ್ರಸಾದ್, ಕಾಡಾ ಅಧ್ಯಕ್ಷರಾದ ಪಿ. ಮರಿಸ್ವಾಮಿ, ಚೂಡಾ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ಮುನ್ನಾ, ಪಂಚ ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷರಾದ ಎಚ್.ವಿ. ಚಂದ್ರು, ನಗರಸಭೆ ಅಧ್ಯಕ್ಷರಾದ ಎಸ್. ಸುರೇಶ್, ಉಪಾಧ್ಯಕ್ಷರಾದ ಮಮತಾ, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ, ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.