ಗ್ರಾಮೀಣಾಭಿವೃದ್ಧಿ ಸಚಿವಾಲಯದ ನಿರ್ದೇಶಕರಿಂದ ಜಲಸಂರಕ್ಷಣೆ ಕಾಮಗಾರಿ ಪರಿಶೀಲನೆ

ಚಾಮರಾಜನಗರ: ಜಿಲ್ಲೆಯ ವಿವಿಧ ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ಕೈಗೊಳ್ಳಲಾದ ಜಲ ಸಂರಕ್ಷಣೆ ಕಾಮಗಾರಿಗಳ ಪರಿಶೀಲನೆಯನ್ನು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ನಿರ್ದೇಶಕರಾದ ಶಿವಶಂಕರ್ ರವರು ನಡೆಸಿದರು.

ಚಾಮರಾಜನಗರ ತಾಲೂಕಿನ ಹರದನಹಳ್ಳಿ, ಹೆಗ್ಗೋಠಾರ ಹನೂರು ತಾಲೂಕಿನ ಸೂಳೇರಿಪಾಳ್ಯ ಗುಂಡ್ಲುಪೇಟೆ ತಾಲೂಕಿನ ಶಿವಪುರ ನೇನೇಕಟ್ಟೆ ಬನ್ನಿತಾಳಪುರ ಹಾಗೂ ಯಳಂದೂರು ತಾಲೂಕಿನ ಗೌಡಳ್ಳಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದ ಅವರು ವಿವಿಧ ಕಾಮಗಾರಿಗಳನ್ನು ಪರಿಶೀಲನೆ ನಡೆಸಿ ಸಾರ್ವಜನಿಕರಿಂದ ಮಾಹಿತಿ ಪಡೆದರು.

ಜಲಜೀವನ್ ಮಿಷನ್ ಯೋಜನೆಯಡಿ ಕೈಗೊಳ್ಳಲಾಗಿರುವ ಕಾಮಗಾರಿಗಳು ಅಟಲ್ ಭೂಜಲ್ ಹಾಗೂ ನರೇಗಾ ಯೋಜನೆ ಅಡಿ ಕೈಗೊಳ್ಳಲಾದ ಅಂತರ್ಜಲ ಸಂರಕ್ಷಣೆ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದ ಅವರು ಕಾಮಗಾರಿಗಳು ಉತ್ತಮವಾಗಿ ಅನುಷ್ಠಾನಗೊಳಿಸಲಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿ ಅಂತರ್ಜಲ ಸಂರಕ್ಷಣೆಗೆ ಪೂರಕವಾದ ಕಾಮಗಾರಿಗಳ ಅನುಷ್ಠಾನ ಅಗತ್ಯವಿದೆ ಎಂದು ತಿಳಿಸಿದರು.
ವೈಜ್ಞಾನಿಕವಾಗಿ ಸ್ಥಳ ಗುರುತಿಸಿ ಅಗತ್ಯವಿರುವ ಕಾಮಗಾರಿಗಳನ್ನು ಕೈಗೊಳ್ಳಬೇಕು. ಚೆಕ್ ಡ್ಯಾಮ್ ನಿರ್ಮಾಣದಲ್ಲಿ ಸೂಕ್ತ ಸ್ಥಳ ಗುರುತಿಸಿ ಕಾಮಗಾರಿ ಅನುಷ್ಠಾನಗೊಳಿಸಬೇಕು ಹೆಚ್ಚು ನೀರಿನ ಸಂಗ್ರಹಣೆಯಾಗುವುದರೊಂದಿಗೆ ಅಂತರ್ಜಲ ವೃದ್ಧಿಯಾಗಬೇಕು. ಹನಿ ನೀರಾವರಿ ಪದ್ಧತಿ ಅಳವಡಿಸಬೇಕು. ನೀರು ಅನಗತ್ಯ ಪೋಲಾಗುವುದನ್ನು ತಡೆಗಟ್ಟಬೇಕು. ಕೊಳವೆ ಬಾವಿ ಮರುಪೂರಣ ಘಟಕಗಳನ್ನು ಕೈಗೊಳ್ಳಬೇಕು ಗುಂಡ್ಲುಪೇಟೆ ತಾಲ್ಲೂಕು ಈಗಾಗಲೇ ಅಂತರ್ಜಲ ಶೋಷಿತ ಪ್ರದೇಶ ಎಂದು ಗುರುತಿಸಿಕೊಂಡಿದೆ. ಪ್ರತಿಯೊಬ್ಬರೂ ಜಲಸಂರಕ್ಷಣೆಯ ಮಹತ್ವ ಅರಿತು ಜಲಮೂಲಗಳ ಸಂರಕ್ಷಣೆಗೆ ಆದ್ಯತೆ ನೀಡಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಕಾಧಿಕರಿ‌ಮೋನಾ ರೋತ್,ಸಹಾಯಕ ಕಾರ್ಯದರ್ಶಿ ಶ್ರೀಕಂಠರಾಜೇ ಅರಸ್ ಇತರರು ಈ ಸಂದರ್ಭದಲ್ಲಿದ್ದರು.

Leave a Reply

Your email address will not be published. Required fields are marked *