ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಸಿ.ಇ.ಒ ಮೋನಾ ರೋತ್ ಅವರಿಂದ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ ವೀಕ್ಷಣೆ, ವಿಜೇತರಿಗೆ ಬಹುಮಾನ ವಿತರಣೆ

ಚಾಮರಾಜನಗರ: ಜಿಲ್ಲಾಧಿಕಾರಿಗಳಾದ ಶಿಲ್ಪಾ ನಾಗ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಗಮಿಸಿ ವಿವಿಧ ಕ್ರೀಡೆಗಳನ್ನು ವೀಕ್ಷಿಸಿ, ವಿಜೇತರಿಗೆ ಬಹುಮಾನ ವಿತರಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಚಾಮರಾಜನಗರ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟವನ್ನು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾರೋತ್ ಅವರು ಬಹಳ ಅಸಕ್ತಿಯಿಂದ ಕೆಲಕಾಲ ವೀಕ್ಷಿಸಿದರು. 

ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ತಾಲೂಕುಮಟ್ಟದ ದಸರಾ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿತ್ತು. ಅಲ್ಲಿನ ವಿಜೇತರಿಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ ನಡೆಯುತ್ತಿದೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅವರು ಭೇಟಿ ನೀಡಿ ಕ್ರೀಡಾಪಟುಗಳಲ್ಲಿ ಉತ್ಸಾಹ, ಹುರುಪು ತುಂಬಿದರು.

ಕ್ರೀಡಾಂಗಣಕ್ಕೆ ಆಗಮಿಸಿದ ಜಿಲ್ಲಾಧಿಕಾರಿಗಳಾದ ಶಿಲ್ಪಾ ನಾಗ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಜಿಲ್ಲೆಯ ಎಲ್ಲಾ ತಾಲೂಕುಗಳ ಕ್ರೀಡಾಪಟುಗಳ ತಂಡಗಳನ್ನು ಪರಿಚಯ ಮಾಡಿಕೊಂಡರು. ಪ್ರತಿಯೊಬ್ಬ ಕ್ರೀಡಾಪಟುಗಳು ಕ್ರೀಡಾ ಮನೋಭಾವ ಮೆರೆಯುವಂತೆ ಪ್ರೇರೇಪಿಸಿದರು. ಪಂದ್ಯಾವಳಿಗಳಲ್ಲಿ ಭಾಗವಹಿಸಿದ ವಿಜೇತರಿಗೆ ಪದಕ, ಪ್ರಮಾಣಪತ್ರ, ಬಹುಮಾನ ವಿತರಣೆ ಮಾಡಿ ಶುಭ ಹಾರೈಸಿದರು. 

ನಗರದಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಳ್ಳಲಾಗಿರುವ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟದಲ್ಲಿ ಇಂದು ಬೆಳಿಗ್ಗೆಯಿಂದ ಸಂಜೆವರೆಗೆ ಅಥ್ಲೆಟಿಕ್ಸ್, ಕಬಡ್ಡಿ, ಖೊಖೋ, ವಾಲಿಬಾಲ್, ಥ್ರೋಬಾಲ್ ಹಾಗೂ ಫುಟ್‍ಬಾಲ್ ಪಂದ್ಯಗಳು ಯಶಸ್ವಿಯಾಗಿ ನಡೆದವು. ಕ್ರೀಡಾಕೂಟದಲ್ಲಿ ತೀರ್ಪುಗಾರರು ಸಹ ಬಹಳ ಶ್ರದ್ಧೆಯಿಂದ ಎಲ್ಲಾ ಕ್ರೀಡೆಗಳನ್ನು ನಡೆಸಿಕೊಟ್ಟರು. 

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ. ಸುರೇಶ್, ಕ್ರೀಡಾ ತರಬೇತುದಾರರಾದ ಗಣೇಶ್, ಜಿಲ್ಲಾ ಯುವ ಪ್ರಶಸ್ತಿ ಪುರಸ್ಕøತರಾದ ಜಿ. ಬಂಗಾರು, ಕ್ರೀಡಾಪಟು ವಿ. ಶ್ರೀನಿವಾಸಪ್ರಸಾದ್, ಕ್ರೀಡಾ ಇಲಾಖೆಯ ಮಂಜುನಾಥ್, ಇತರರು ಇದೇ ಸಂದರ್ಭದಲ್ಲಿ ಇದ್ದರು.

Leave a Reply

Your email address will not be published. Required fields are marked *