ಏಪ್ರಿಲ್ 5, 6ರಂದು ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ

ವ್ಯವಸ್ಥಿತವಾಗಿ ಸಂಘಟಿಸಲು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ

ಚಾಮರಾಜನಗರ: ಏಪ್ರಿಲ್ 5, 6ರಂದು ನಗರದಲ್ಲಿ ಏರ್ಪಡಿಸಲಾಗುವ ರಾಜ್ಯ ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳನ್ನು ಯಾವುದೇ ಲೋಪಗಳಿಗೆ ಅವಕಾಶವಾಗದಂತೆ ವ್ಯವಸ್ಥಿತವಾಗಿ ಸಂಘಟಿಸಲು ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಸೂಚಿಸಿದರು. 

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿದಲ್ಲಿಂದು ನಡೆದ 2024-25ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ 2 ದಿನಗಳ ಕಾಲ ರಾಜ್ಯ ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳು ನಡೆಯಲಿವೆ. ಅಲ್ಲದೆ ಮಹಿಳಾ ದಿನಾಚಚರಣೆ ಅಂಗವಾಗಿ ಮಾರ್ಚ್ 11ರಂದು ನಗರದ ಪೊಲೀಸ್ ಕವಾಯಿತು ಮೈದಾನದಲ್ಲಿ ಜಿಲ್ಲಾಮಟ್ಟದ ಮಹಿಳಾ ಕ್ರೀಡಾಕೂಟ ನಡೆಯಲಿದ್ದು, ಕ್ರೀಡಾಕೂಟಗಳ ನಿರ್ವಹಣೆಯಲ್ಲಿ ಯಾವುದೇ ಗೊಂದಲಗಳಿಗೆ ಅಸ್ಪದವಾಗದಂತೆ ಅವಶ್ಯ ಸಿದ್ದತಾ ಕಾರ್ಯಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಕ್ರೀಡಾಕೂಟದಲ್ಲಿ ಪುರುಷರಿಗೆ ಕ್ರಿಕೆಟ್, ವಾಲಿಬಾಲ್, ಖೊಖ್ಕೋ, ಬ್ಯಾಸ್ಕೆಟ್ ಬಾಲ್, ಅಥ್ಲೇಟಿಕ್ಸ್, ಸ್ವಿಮ್ಮಿಂಗ್, ಟೇವಲ್ ಟೆನ್ನಿಸ್, ಇತರೆ ಕ್ರೀಡೆಗಳು ಹಾಗೂ ಮಹಿಳೆಯರಿಗೆ ಪುಟ್ ಬಾಲ್ ಹಾಗೂ ಬ್ಯಾಸ್ಕೆಟ್ ಬಾಲ್ ಹೊರತುಪಡಿಸಿ ಪುರುಷರಿಗೆ ನಿಗದಿಪಡಿಸಿದ ಎಲ್ಲಾ ಕ್ರೀಡೆಗಳು ನಡೆಯಲಿವೆ. ಎಲ್ಲಾ ಕ್ರೀಡೆಗಳನ್ನು 40 ವರ್ಷದೊಳಗಿರುವವವರು ಹಾಗೂ ಮೇಲ್ಪಟ್ಟವರಿಗೆ ಪ್ರತ್ಯೇಕವಾಗಿ ವಯೋಮಿತಿ ಆಧಾರದಲ್ಲಿ ನಡೆಸಲಾಗುವುದು. ವಿಜೇತರಾದವರಿಗೆ ಪ್ರಶಸ್ತಿ ಪತ್ರ, ಸ್ಮರಣಿಕೆ ಮತ್ತು ಟ್ರೋಫಿ ನೀಡಲಾಗುವುದು. ಕ್ರೀಡಾಕೂಟಕ್ಕೆ ನುರಿತ ಹಾಗೂ ನಿಷ್ಪಕ್ಷಪಾತ ತೀರ್ಪುಗಾರರನ್ನು ಆಯ್ಕೆ ಮಾಡಬೇಕು ಎಂದರು.

ಕ್ರೀಡಾಕೂಟದ ವ್ಯವಸ್ಥಿತ ನಿರ್ವಹಣೆಗಾಗಿ ವಿವಿಧ ಇಲಾಖೆ ಅಧಿಕಾರಿಗಳನ್ನೊಳಗೊಂಡ ಸ್ವಾಗತ ಸಮಿತಿ, ಆಹಾರ, ಹಣಕಾಸು, ತೀರ್ಪುಗಾರರ ಸಮಿತಿ, ಸ್ವಚ್ಚತಾ ಸಮಿತಿಗಳನ್ನು ರಚಿಸಿ ಕಾರ್ಯ ಹಂಚಿಕೆ ಮಾಡಲಾಗಿದೆ. ಕ್ರೀಡಾಕೂಟದಲ್ಲಿ ಗಣ್ಯರಿಂದ ಧ್ವಜಾರೋಹಣ, ಕ್ರೀಡಾಜ್ಯೋತಿ ಸ್ವೀಕಾರ ಕಾರ್ಯಕ್ರಮಗಳು ಇರಲಿವೆ. ರಾಜ್ಯಮಟ್ಟದಲ್ಲಿ ಸಾಧನೆಗೈದಿರುವ ಪ್ರಸಿದ್ಧ ಕ್ರೀಡಾಪಟುವನ್ನು ಕರೆಸಿ ಕಾರ್ಯಕ್ರಮ ಉದ್ಘಾಟಿಸುವ ವ್ಯವಸ್ಥೆ ಮಾಡಬೇಕು. ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.  

ಕ್ರೀಡಾಕೂಟ ಸ್ಥಳದಲ್ಲಿ ಸ್ವಚ್ಚತೆ, ಕುಡಿಯುವ ನೀರಿನ ವ್ಯವಸ್ಥೆ ಸಮರ್ಪಕವಾಗಿರಬೇಕು. ವೈದ್ಯಕೀಯ ಸೌಲಭ್ಯವು ಇರಬೇಕು. ಕ್ರೀಡಾಪಟುಗಳಿಗೆ ಯಾವುದೇ ಅನಾನುಕೂಲಗಳು ಉಂಟಾಗದಂತೆ ಗಮನ ಹರಿಸಬೇಕು ಒಟ್ಟಿನಲ್ಲಿ ಕ್ರೀಡಾಕೂಟದ ಅಚ್ಚುಕಟ್ಟು ಆಯೋಜನೆಗೆ ಮುಂದಾಗುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.  

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಕೆ. ಸುರೇಶ್, ರಾಜ್ಯ ಸರ್ಕಾರಿ ನೌಕಕರ ಸಂಘದ ಜಿಲ್ಲಾಧ್ಯಕ್ಷರಾದ ರೇಣುಕಾದೇವಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಶಂಕರ್, ಜಿಲ್ಲಾಮಟ್ಟದ ಅಧಿಕಾರಿಗಳು, ರಾಜ್ಯ ಸರ್ಕಾರಿ ನೌಕಕರ ಸಂಘದ ಜಿಲ್ಲಾ ಶಾಖೆಯ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *