
ಚಾಮರಾಜನಗರ : ಮುಕ್ತ ವಿಶ್ವವಿದ್ಯಾನಿಲಯದ ಮೈಸೂರಿನ ಅರ್ಥಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಟಿ.ಪಿ.ಶಶಿಕುಮಾರ್ ಅವರ ಮಾರ್ಗದರ್ಶನದಲ್ಲಿ ಕೊಳ್ಳೇಗಾಲದ ಶ್ರೀ ಮಹದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗ ಸಹ ಪ್ರಾಧ್ಯಾಪಕರಾದ ಎಲ್.ಪ್ರೇಮಕುಮಾರಿ ಅವರು ಸಂಶೋಧನೆ ನಡೆಸಿ ಸಾದರಪಡಿಸಿದ ‘ಗ್ರಾಮೀಣ ಕುಟುಂಬಗಳ ಸಾಮಾಜಿಕ-ಆರ್ಥಿಕ ಅಭಿವೃದ್ಧಿಯ ಮೇಲೆ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯ ಪರಿಣಾಮಗಳು: ಕರ್ನಾಟಕದ ಚಾಮರಾಜನಗರ ಜಿಲ್ಲೆಯ ಒಂದು ಅಧ್ಯಯನ’ ಎಂಬ ಮಹಾ ಪ್ರಬಂಧವನ್ನು ಅರ್ಥಶಾಸ್ತ್ರ ವಿಷಯ ಕ್ಷೇತ್ರದಲ್ಲಿ ಪಿಹೆಚ್ಡಿ ಪದವಿಗಾಗಿ ಅಂಗೀಕರಿಸಲಾಗಿದೆ ಎಂದು ವಿವಿಯ ಕುಲ ಸಚಿವರು ತಿಳಿಸಿದ್ದಾರೆ.