ಚಾಮರಾಜನಗರ: ಚಾಮರಾಜನಗರ ವಿಶ್ವವಿದ್ಯಾಲಯದಲ್ಲಿಂದು ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ವಿಶ್ವ ಪರಿಸರ ದಿನವನ್ನು ಆಚರಿಸಿ "ಪ್ಲಾಸ್ಟಿಕ್ ಬೇಡ ಎಂದು ಹೇಳಿ-ಪ್ಲಾಸ್ಟಿಕ್ ಮಾಲಿನ್ಯಕ್ಕೆ ಅಂತ್ಯ ಹೇಳಬೇಕು" ಹಾಗೂ "ಕಾಡನ್ನು ಉಳಿಸಿ, ಮನುಕುಲವನ್ನು ಬೆಳೆಸಿ" ಎಂಬ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ನಂತರ ವಿಶ್ವವಿದ್ಯಾನಿಲಯದ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪೆÇ್ರ. ಎಂ.ಆರ್. ಗಂಗಾಧರ್ ಅವರು ಮಾತಾನಾಡಿ ಮನುಷ್ಯನು ಬಳಸಿ ಬಿಸಾಡಿದ, ತಿರಸ್ಕರಿಸಿದ ಅಥವಾ ಸುಟ್ಟುಹಾಕಿದ ಏಕ ಬಳಕೆಯ ಪ್ಲಾಸ್ಟಿಕ್ ಮಾನವನ ಆರೋಗ್ಯ ಮತ್ತು ಜೀವ ವೈವಿಧ್ಯತೆಗೆ ಹಾನಿ ಮಾಡುತ್ತದೆ ಎಂದರು.
ಪರಿಸರ ಮಾಲಿನ್ಯ ಸಮಸ್ಯೆಯನ್ನು ನಿಭಾಯಿಸಲು ಲಭ್ಯವಿರುವ ವಿಜ್ಞಾನ ಮತ್ತು ತಂತ್ರಜ್ಞಾನದ ಪರಿಹಾರಗಳನ್ನು ಕೂಡ ಕಂಡುಕೊಳ್ಳಲು ಮುಂದಾಗಬೇಕಿದೆ. ಪರಿಸರವನ್ನು ಹೇಗೆ ಸಂರಕ್ಷಿಸಬೇಕು, ಪೆÇೀಷಿಸಬೇಕು ಮತ್ತು ಪರಿಸರದ ನಾಶದಿಂದಾಗುವ ಪರಿಣಾಮಗಳು, ಪ್ಲಾಸ್ಟಿಕ್ ಮಾಲಿನ್ಯದ ಪರಿಣಾಮಗಳು, ಪರಿಹಾರಗಳು ಏನು ಎಂಬುದನ್ನು ತಿಳಿದು ಮುನ್ನಡೆಯಬೇಕಿದೆ ಎಂದು ಪೆÇ್ರ. ಎಂ.ಆರ್. ಗಂಗಾಧರ್ ಅವರು ತಿಳಿಸಿದರು.
ವಿಶ್ವವಿದ್ಯಾನಿಲಯದ ಕುಲಸಚಿವರಾದ ಆರ್. ಲೋಕನಾಥ್ ಅವರು ಮಾತನಾಡಿ ವಾಸ್ತವದಲ್ಲಿ ಮಾನವನು ತನ್ನ ಸ್ವಾರ್ಥ ಸಾಧನೆಗಾಗಿ ಪರಿಸರವನ್ನು ನಾಶಮಾಡುವಲ್ಲಿ ಹೆಚ್ಚು ತೊಡಗಿದ್ದಾನೆ ಇದು ನಿಲ್ಲಬೇಕು. ಭವಿಷ್ಯದ ಪೀಳಿಗೆಯ ಬದುಕಿನ ಬಗೆಗೆ ಗಮನಹರಿಸಿ ಪ್ರಕೃತಿಯನ್ನು ಸಂರಕ್ಷಿಸುವಲ್ಲಿ ಜಾಗೃತರಾಗಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿಶ್ವವಿದ್ಯಾನಿಲಯದ ಕುಲಸಚಿವರಾದ (ಪರೀಕ್ಷಾಂಗ) ಪ್ರೊ. ಜಿ.ವಿ. ವೆಂಕಟರಮಣ ಮಾತನಾಡಿ ವಿಶ್ವಾದ್ಯಂತ ಪ್ರತಿ ವರ್ಷ 400 ಮಿಲಿಯನ್ ಟನ್ಗಳಿಗಿಂತ ಹೆಚ್ಚು ಪ್ಲಾಸ್ಟಿಕ್ ಉತ್ಪಾದಿಸಲ್ಪಡುತ್ತದೆ. ಅದರಲ್ಲಿ ಅರ್ಧದಷ್ಟು ಒಮ್ಮೆ ಮಾತ್ರ ಬಳಸಲು ವಿನ್ಯಾಸಗೊಳಿಸಲಾಗಿದೆ. ಶೇ. 10ಕ್ಕಿಂತ ಕಡಿಮೆ ಮರುಬಳಕೆ ಮಾಡಲಾಗುತ್ತಿದೆ. ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ಮೇಲೆ ತೀವ್ರ ದುಷ್ಪರಿಣಾಮ ಉಂಟಾಗುತ್ತಿದೆ. ಪರಿಸರವನ್ನು ಕಾಪಾಡುವಲ್ಲಿ ಪ್ರತಿಯೊಬ್ಬರೂ ಮುಂದಾಗಬೇಕು ಎಂದು ತಿಳಿಸಿದರು.
ಎನ್.ಎಸ್.ಎಸ್ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ. ಆರ್. ಮಹೇಶ್ ಅವರು ಮಾತನಾಡಿ ಭವಿಷ್ಯದ ಮಕ್ಕಳಿಗೂ ಪರಿಸರ ಮತ್ತು ಆರೋಗ್ಯದ ಬಗೆಗೆ ಅರಿವು ಮೂಡಿಸಬೇಕಿದೆ. ಹಾಗಾಗಿ ಪ್ರತಿಯೊಬ್ಬರು ಪ್ರಸ್ತುತ ಪ್ಲಾಸ್ಟಿಕ್ ಬಳಕೆಯನ್ನು ನಿರಾಕರಿಸುವ ಸಂಕಲ್ಪವನ್ನು ಮಾಡಬೇಕು ಎಂದು ತಿಳಿಸಿದರು.
ವಿಶ್ವವಿದ್ಯಾನಿಲಯದ ಅಧಿಕಾರಿಗಳು, ಅಧ್ಯಾಪಕರು, ಇತರರು ಕಾರ್ಯಕ್ರಮದಲ್ಲಿ ಇದ್ದರು.
Like this:
Like Loading...
Related