- ಸರ್ಕಾರಿ ಪಾಲಿಟೆಕ್ನಿಕ್ಕಾಲೇಜಿನಲ್ಲಿಸಾಂಸ್ಕೃತಿಕ ಹಾಗೂ ಕ್ರೀಡಾಚಟುವಟಿಕೆ
- ಎನ್ಎಸ್ಎಸ್ಚಟುವಟಿಕೆ ಸಮಾರೋಪ ಸಮಾರಂಭ ಉದ್ಘಾಟಿಸಿದ ಶಾಸಕ ಸಿ.ಪುಟ್ಟರಂಗಶೆಟ್ಟಿ ಅಭಿಮತ
ಚಾಮರಾಜನಗರ: ವಿದ್ಯಾರ್ಥಿಗಳು ಸರ್ಕಾರಿ ಉದ್ಯೋಗಕ್ಕಾಗಿ ಕಾಯದೇ, ಕೌಶಲ್ಯ ಆಧಾರಿತ ತರಬೇತಿ ಪಡೆದು, ಉದ್ಯೋಗಗಳಿಸಬೇಕು ಎಂದು ಎಂಎಸ್ಐಎಲ್ ಅಧ್ಯಕ್ಷರು, ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಹೇಳಿದರು.
ನಗರದ ನಂಜನಗೂಡು ರಸ್ತೆಯಲ್ಲಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಂಗಳವಾರ ನಡೆದ ೨೦೨೪-೨೫ ನೇ ಸಾಲಿನ ವಿದ್ಯಾರ್ಥಿ ಸಂಘ, ಸಾಂಸ್ಕೃತಿಕ ಹಾಗೂ ಕ್ರೀಡಾಚಟುವಟಿಕೆ, ಎನ್ಎಸ್ಎಸ್ ಚಟುವಟಿಕೆ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಪೂರ್ವ ಪ್ರಾಥಮಿಕ ಶಾಲೆಯಿಂದ ಆರಂಭವಾಗಿ ಎಂಜಿನಿಯರಿಂಗ್, ವೈದ್ಯಕೀಯ, ಸ್ನಾತಕೋತ್ತರ ಕಾಲೇಜುಗಳಿದ್ದು. ಉನ್ನತ ಶಿಕ್ಷಣ ಪಡೆಯಲು ಸಾಕಷ್ಟು ಅವಕಾಶಗಳಿವೆ, ಕೇವಲ ಪದವಿ ಪಡೆದರೆ ಸಾಲದು, ಉದ್ಯೋಗಗಳಿಸುವ ನಿಟ್ಟಿನಲ್ಲಿ ಕೌಶಲ್ಯಾಧಾರಿತ ತರಬೇತಿ ಪಡೆಯುವುದು ಅಗತ್ಯವಿದೆ. ಚಾಮರಾಜನಗರ ಹೊರವಲಯದ ಬದನಗುಪ್ಪೆ, ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಸಾಕಷ್ಟು ಕಾರ್ಖಾನೆಗಳು ಸ್ಥಾಪನೆಯಾಗಿದ್ದು, ಸ್ಥಳೀಯರಿಗೆ ಉದ್ಯೋಗ ನೀಡುವಂತೆ ಕಾರ್ಖಾನೆ ಮಾಲೀಕರಿಗೆ ಆದೇಶ ನೀಡಲಾಗಿದೆಎಂದರು.
ಕಾಲೇಜಿಗೆ ಕುಡಿಯುವ ನೀರು, ಸುತ್ತುಗೋಡೆ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಬದ್ದರಾಗಿದ್ದು, ಏನೇ ಸಮಸ್ಯೆ ತಲೆದೋರಿದರೂ, ತಮ್ಮನ್ನು ಸಂಪರ್ಕಿಸಿ, ಬಗೆಹರಿಸಿಕೊಳ್ಳಬೇಕು ಎಂದು ತಿಳಿಸಿದರು.
ಎಂಎಸ್ಐಎಲ್ ನಿಗಮದಿಂದ ಈಗಾಗಲೇ ಮೂರು ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ಕುಡಿಯುವ ನೀರು, ಸುತ್ತುಗೋಡೆ ಸೇರಿದಂತೆ ವಿವಿಧ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗಿದೆ.
ವಿದ್ಯಾರ್ಥಿಗಳು ಸರ್ಕಾರನೀಡುವ ಸೌಲಭ್ಯಗಳನ್ನು ಸದ್ಭಳಕೆ ಮಾಡಿಕೊಂಡು, ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕೃತಿಕಾ ಹಾಗೂ ಕ್ರೀಡೆ ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಗಣ್ಯರು ಬಹುಮಾನ ವಿತರಿಸಿದರು.
ಕಾಲೇಜಿಗೆ ಶಾಸಕರ ಪ್ರದೇಶಾಭಿವೃದ್ದಿ ನಿಧಿ ೫ಲಕ್ಷ ರೂ.ವೆಚ್ಚದಲ್ಲಿ ೨ಯುಪಿಎಸ್, ೨೦ ಬ್ಯಾಟರಿಗಳನ್ನು ವಿತರಣೆ ಮಾಡಲಾಯಿತು.
ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಎಚ್.ಜಿ. ಲೋಕೇಶ್ ಮಾತನಾಡಿ, ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಬೇಕಾದ ಮೂಲಸೌಕರ್ಯವನ್ನು ಶಾಸಕರು ಒದಗಿಸುತ್ತಿದ್ದು, ಇದರಿಂದ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚುತ್ತಿದೆ, ಶೇಕಡವಾರು ಫಲಿತಾಂಶದಲ್ಲೂ ಹೆಚ್ಚಳ ಕಂಡುಬಂದಿದೆ ಎಂದರು.
ಕಂಪ್ಯೂಟರ್ ತರಬೇತುದಾರರಾದ ಪುಟ್ಟಸ್ವಾಮಿ, ಸುರೇಶ್, ನಟರಾಜು,ಡಾ,ಬಸವರಾಜು, ಮಂಗಳಾ, ಗೀತಾ, ವಿದ್ಯಾರ್ಥಿ ಕ್ಷೇಮಾಭಿವೃದ್ದಿ ಅಧಿಕಾರಿ ವಿ.ಎಂ.ಚೇತನ್ಕುಮಾರ್, ಕ್ರೀಡಾಧಿಕಾರಿ ಎಂ.ಕೆ.ನಂದೀಶ್, ಎನ್ಎಸ್ಎಸ್ ಅಧಿಕಾರಿ ಎಚ್.ಜಿ.ಚೇತನ್ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಜರಿದ್ದರು.