ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದ ಪೌರಕಾರ್ಮಿಕರು

ಚಾಮರಾಜನಗರ: ಸ್ಥಳೀಯ ಸಂಸ್ಥೆಗಳಲ್ಲಿ ನೇರ ಪಾವತಿಯಡಿ ಕೆಲಸ ನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಹಂತ ಹಂತವಾಗಿ ಖಾಯಂಗೊಳಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿರುವ ಮಹತ್ವದ ನಿರ್ಧಾರಕ್ಕೆ ಚಾಮರಾಜನಗರದ ಪೌರಕಾರ್ಮಿಕರು ನಗರಸಭೆಯ ಮುಂಭಾಗ ಪಟಾಕಿ ಸಿಡಿಸಿ, ಸಿಹಿ ಹಂಚುವ ಸಂಭ್ರಮಿಸಿದರು.
ಕರ್ನಾಟಕ ರಾಜ್ಯ ಮಹಾನಗರಪಾಲಿಕೆ ನಗರಸಭೆ, ಪುರಸಭೆ, ಪೌರಕಾರ್ಮಿಕರ ಮಹಾಸಂಘ ಜಿಲ್ಲಾಧ್ಯಕ್ಷ ಸಿ. ಶಂಕರ್ ಅಂಕನಶೆಟ್ಟಿಪುರ ಪಟಾಕಿ ಸಿಡಿಸಿ, ಸಿಹಿ ವಿತರಿಸಿ ನಂತರ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ 15ನೇ ಬಜೆಟ್ನಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ನೇರ ಪಾವತಿಯಡಿ ಕೆಲಸ ನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಹಂತ ಹಂತವಾಗಿ ಖಾಯಂಗೊಳಿಸಲು ಕೈಗೊಂಡಿರುವ ನಿರ್ಧಾರ ಸಂತೋಷದ ವಿಚಾರ ಎಂದರು.

24005 ಮಂದಿ ಪೌರಕಾರ್ಮಿಕರನ್ನು ಖಾಯಂಗೊಳಿಸಬೇಕೆಂಬ ಅನುಮೋದನೆಗೆ ಅಂಕಿತ ನೀಡಿದ್ದು, ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಪೌರಕಾರ್ಮಿಕರಿಗೆ ಸಂತಸ ತಂದಿದೆ. ಎಲ್ಲಾ ಪೌರಕಾರ್ಮಿಕರ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಸರ್ಕಾರಕ್ಕೆ ತುಂಬು ಹೃದಯದ ಧನ್ಯವಾದಗಳನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಹಾನಗರಪಾಲಿಕೆ ನಗರಸಭೆ, ಪುರಸಭೆ, ಪೌರಕಾರ್ಮಿಕರ ಮಹಾಸಂಘದ ಸದಸ್ಯರಾದ ರಾಜೇಂದ್ರ .ಎಂ., ವಿಜಯಮ್ಮ, ಜಯಮ್ಮ, ರಾಕೇಶ್, ವಿಜಯ್ ಎಸ್., ಮುರುಗೇಶ್, ರಾಜು, ಪ್ರಶಾಂತ್.ಎಂ., ಎಸ್.ರಾಜೇಂದ್ರ, ಮಹೇಶ್, ಎಂ.ಮಂಜು, ಮಂಜು, ಎನ್.ನಾಗೇಶ್, ಈಶ್ವರ್, ಎನ್.ಮುರುಗೇಶ್, ಶಿವರಾಜ್, ರಾಕೇಶ್, ಕುಮಾರ್ ಸೋಮವಾರಪೇಟೆ, ಸಮತ ಸೈನಿಕ ದಳ(ಡಿಎಸ್ಎಸ್)ದ ಜಿಲ್ಲಾಧ್ಯಕ್ಷ ಸಂಘಸೇನಾ, ನೇರ ಪಾವತಿ ಪೌರಕಾರ್ಮಿಕರ ಅಧ್ಯಕ್ಷರಾದ ಮನೋಹರ್, ಸುಬ್ರಹ್ಮಣ್ಯ ಮತ್ತಿತರರಿದ್ದರು.