ಚಾಮರಾಜನಗರ: ಲೈಂಗಿಕ ಹಗರಣದಲ್ಲಿ ಸಿಲುಕಿ ವಿದೇಶಕ್ಕೆ ಪಾರಾರಿಯಾಗಿರುವ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣನನ್ನು ಕೂಡಲೇ ಬಂಧಿಸಿ, ತ್ವರಿತಗತಿಯಲ್ಲಿ ನೊಂದ ಮಹಿಳೆಯರಿಗೆ ನ್ಯಾಯ ಕೊಡಿಸಬೇಕೆಂದು ಆಗ್ರಹಿಸಿ ನಗರದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲತಾರಾಜಶೇಖರ್ ಜತ್ತಿ ನೇತೃತ್ವದಲ್ಲಿ ಸಮಾವೇಶಗೊಂಡು ಮಹಿಳೆಯರು ಸಂಸದ ಪ್ರಜ್ವಲ್ರೇವಣ್ಣ, ಮಾಜಿ ಸಚಿವ ಎಚ್.ಡಿ, ರೇವಣ್ಣ ವಿರುದ್ದ ಘೋಷಣೆ ಕೂಗಿತ್ತಾ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತದಲ್ಲಿ ಕೆಲ ಕಾಲ ರಸ್ತೆ ತಡೆ ನಡೆಸಿ, ಪ್ರತಿಭಟನೆ ನಡೆಸಿದರು. ಪ್ರಜ್ವಲ್, ರೇವಣ್ಣ ಭಾವಚಿತ್ರ ವಿರುದ್ದ ಭಿತ್ತ ಪತ್ರಗಳನ್ನು ಪ್ರದರ್ಶನ ಮಾಡಿ, ಬಳಿಕ ಹರಿದು ಹಾಕುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷೆ ಲತಾ ರಾಜಶೇಖರ್ ಜತ್ತಿ, ಮಹಿಳಾ ಕುಲಕ್ಕ ಅಪಮಾನ ಮಾಡಿರುವ ನೂರಾರು ಹೆಣ್ಣು ಮಕ್ಕಳ ಭವಿಷ್ಯದಲ್ಲಿ ಚೆಲ್ಲಾಟವಾಗಿರುವ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅನ್ನು ರಾಜ್ಯ ಸರ್ಕಾರ ಕೂಡಲೇ ಬಂಧಿಸಿ, ಉಗ್ರ ಶಿಕ್ಷೆ ನೀಡಬೇಕು. ಇದಕ್ಕೆ ಸಹಕಾರ ನೀಡಿ ಅಪ್ಪ ಎಚ್. ರೇವಣ್ಣಗೂ ಶಿಕ್ಷೆಯಾಗಬೇಕು. ಅನ್ಯಾಯಗೀಡಾಗಿರುವ ಮಹಿಳೆಯರಿಗೆ ನ್ಯಾಯ ನೀಡಲು ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.
ಹಾಸನ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲಸಕ್ಕೆ ಅರ್ಜಿ ಸಲ್ಲಿಸಿ ಹೆಣ್ಣು ಮಕ್ಕಳನ್ನು ಮನೆಗೆ ಕರೆಸಿಕೊಳ್ಳುವುದು, ಅವರಿಗೆ ಇಲ್ಲದ ಅಸೆ ಅಮಿಷ ತೋರಿಸಿ ಅವರಿ ಜೀವನ ವನ್ನು ಹಾಳು ಮಾಡಿರುವ ಪ್ರಜ್ವಲ್ ಹಾಗು ರೇವಣ್ಣ ವಿರುದ್ದ ಎಸ್ಐಟಿ ತ್ವರತಿ ಗತಿಯಲ್ಲಿ ತನಿಖೆ ನಡೆಸಿ, ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು. ಪ್ರಜ್ವಲ್ ರೇವಣ್ಣ ಓರ್ವ ಕಾಮುಕನಾಗಿದ್ದು, ಆತನ ಅಟ್ಟಹಾಸಕ್ಕೆ ನೂರಾರು ಹೆಣ್ಣು ಮಕ್ಕಳ ಭವಿಷ್ಯ ಹಾಳಾಗಿದೆ. ಅವರ ಕುಟುಂಬಗಳು ಬೀದಿ ಪಾಲಾಗಿವೆ. ಆ ಶಾಪ ಆತನಿಗೆ ಗ್ಯಾರಂಟಿ ತಟ್ಟಿಲಿದೆ. ರಾಜ್ಯ ಸರ್ಕಾರ ಕೂಡಲೇ ವಿದೇಶಲ್ಲಿರುವ ಈತನನ್ನು ಬಂಧಿಸಿ, ಕರೆದು ವಿಚಾರಣೆಗೊಳಪಡಿಸಿ, ಸತ್ಯಾಂಶವನ್ನು ಬಯಲಿಗೆ ತರಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ರಾಜ್ಯ ಕಾಂಗ್ರೆಸ್ ಕಾರ್ಯದರ್ಶಿ ಪದ್ಮ ಪುರುಷೋತ್ತಮ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರತ್ನ, ಚಾ.ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ನಾಗಶ್ರೀ, ಯಳಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಉಮ್ಮತ್ತೂರು ಭಾಗ್ಯ, ನಗರಸಭಾ ಸದಸ್ಯೆ ಕಲಾವತಿ, ಜಿ.ಪಂ. ಮಾಜಿ ಸದಸ್ಯೆ ಕಾವೇರಿ ಶಿವಕುಮಾರ್, ಕೊಳ್ಳೇಗಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಕೃಷ್ಣವೇಣಿ, ಜಿಲ್ಲಾ ಸಂಚಾಲಕಿ ಶಿವಮ್ಮ, ಗುಂಡ್ಲುಪೇಟೆ ರತ್ನಮ್ಮ, ಜನ್ನೂರು ಹೊಸೂರು ವೀಣಾ ಅನೇಕರು ಭಾಗವಹಿಸಿದ್ದರು.