ಚಾಮರಾಜನಗರ: ಮಂಡ್ಯದಲ್ಲಿ ಇತ್ತಿಚೆಗೆ ನಡೆದ ಪ್ರತಿಭಟನೆ ಮೆರವಣಿಗೆ ನೆಪದಲ್ಲಿ ಕೆಲವು ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಮಂಡ್ಯದಲ್ಲಿರುವ ಕುರುಬರ ಸಂಘ ಹಾಸ್ಟೆಲ್ ಕಟ್ಟಡ ಹಾಗೂ ಇತರೇ ಆಸ್ತಿಪಾಸ್ತಿಗಳಿಗೆ ಹಾನಿ ಮಾಡಿದ್ದು, ಹಾಗೂ ದಾರ್ಶನಿಕರಾದ ಕನಕದಾಸರು, ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಅವರ ಫ್ಲೆಕ್ಸ್ಗಳಲ್ಲಿ ಹರಿದು ಹಾಕಿ ಅಪಮಾನ ಮಾಡಿದ್ದು, ಈ ಕೂಡೇಲ ಈ ಕಿಡಿಗೇಡಿಗಳನ್ನು ಬಂಧಿಸಿ, ಗೂಂಡಾ ಕಾಯ್ಡೆಯಡಿಯಲ್ಲಿ ಪ್ರಕರಣ ದಾಖಲು ಮಾಡಿ ಗಡಿಪಾರು ಮಾಡಬೇಕೆಂದು ತಾಲೂಕು ಕುರುಬರ ಸಂಘದ ಮಾಜಿ ಉಪಾಧ್ಯಕ್ಷ ಮಾದಾಪುರ ರವಿಕುಮಾರ್ ಒತ್ತಾಯಿಸಿದ್ದಾರೆ.
ಮಂಡ್ಯದಲ್ಲಿ ನಡೆದ ಪ್ರತಿಭಟನೆಗೂ ಹಾಗೂ ಕುರುಬರ ಸಂಘಕ್ಕು ಯಾವುದೇ ಸಂಬಂಧವಿಲ್ಲ. ಆಗಿದ್ದರು ಕೂಡ ಕೆಲವು ಪಟ್ಟಭದ್ರ ಶಕ್ತಿಗಳು ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡಿ, ಸಮಾಜಗಳ ನಡುಗೆ ಕಂದಕ ನಿರ್ಮಾಣ ಮಾಡಿ, ಜಾತಿ ಜಾತಿಗಳ ನಡುವೆ ವೈರ್ಷಮ್ಯವನ್ನು ಸೃಷ್ಟಿಗಳು ಇಂಥ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಇಂಥವರನ್ನು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಪತ್ತೆ ಹಚ್ಚಿ ಗೂಂಡಾ ಕಾಯ್ದೆಯಡಿಯಲ್ಲಿ ಬಂಧಿಸಬೇಕು. ಇಂಥ ಘಟನೆಗಳು ಮರುಗಳಿಸದಂತೆ ಸರ್ಕಾರ ಎಚ್ಚರವಹಿಸಬೇಕು ಎಂದು ಆಗ್ರಹಿಸಿದ್ದಾರೆ.
ಕುರುಬರ ಸಂಘದ ಕಟ್ಟಡ ಹಾಗೂ ಸಾರ್ವಜನಿಕರ ಆಸ್ತಿಗೆ ಆಗಿರುವ ನಷ್ಟವನ್ನು ಬಂಧಿತ ಕಿಡಿಗೇಡಿಗಳಿಂದ ಭರಿಸಬೇಕು. ಉತ್ತರ ಪ್ರದೇಶದ ಮಾದರಿಯಲ್ಲಿ ದುಷ್ಕರ್ಮಿಗಳ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡು ನಷ್ಟವನ್ನು ಭರಿಸಲು ಸರ್ಕಾರ ಕ್ರಮ ವಹಿಸಬೇಕು ಎಂದು ಮಾದಾಪುರ ರವಿಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.