ಗಣರಾಜ್ಯೋತ್ಸವದ ಅಂಗವಾಗಿ ನಗರದಲ್ಲಿ ಸ್ಕೇಟಿಂಗ್ ವಿದ್ಯಾರ್ಥಿಗಳಿಂದ ಮ್ಯಾರಥಾನ್

ಜಿಲ್ಲಾ ನೆಟ್ ಬಾಲ್ ಅಸೋಸಿಯೇಷನ್ ಗೌರವಾಧ್ಯಕ್ಷೆ ನರ್ಗಿಸ್ ಬಾನು ಚಾಲನೆ

ಚಾಮರಾಜನಗರ: 76ನೇ ಗಣರಾಜ್ಯೋತ್ಸವದ ಅಂಗವಾಗಿ ನಗರದಲ್ಲಿ ರೆಹ್ಬರ್ ಅಸೋಸಿಯೇಷನ್ ವತಿಯಿಂದ ಸ್ಕೇಟಿಂಗ್ ವಿದ್ಯಾರ್ಥಿಗಳಿಂದ ಮ್ಯಾರಥಾನ್ ನಡೆಯಿತು.

ನಗರದ ಸುಲ್ತಾನ್ ಷರೀಪ್ ವೃತ್ತದಲ್ಲಿ ಮ್ಯಾರಥಾನ್‍ಗೆ ಚಾಲನೆ ನೀಡಿದ ಜಿಲ್ಲಾ ನೆಟ್ ಬಾಲ್ ಅಸೋಸಿಯೇಷನ್ ಗೌರವಾಧ್ಯಕ್ಷೆ ನರ್ಗಿಸ್ ಬಾನು ಮಾತನಾಡಿ, ಮೊಬೈಲ್, ಸಾಮಾಜಿಕ ಜಾಲತಾಣಗಳ ಪ್ರಭಾವಕ್ಕೆ ಒಳಗಾಗಿರುವ ಮಕ್ಕಳ ನಡುವೆ ಸ್ಕೇಟಿಂಗ್ ನಂತಹ ಕ್ರೀಡಾಕೂಟದಲ್ಲಿ ಹಲವಾರು ವಿದ್ಯಾರ್ಥಿಗಳು ಸ್ಕೇಟಿಂಗ್ ಮ್ಯಾರಥಾನ್‍ನಲ್ಲಿ ಭಾಗವಹಿಸಿರುವುದು ಹೆಮ್ಮೆಯ ಸಂಗತಿ, ಇದು ಇತರೇ ಕ್ರೀಡೆಗಳನ್ನು ಆಡಲು ಸ್ಪೂರ್ತಿಯಾಗಿದೆ ಎಂದರು.

ಚುಡಾ ಅಧ್ಯಕ್ಷ ಮಹಮದ್ ಅಸ್ಗರ್ ಮಾತನಾಡಿ, ಗ್ರಾಮೀಣ ಕ್ರೀಡಾಕೂಟಗಳು ಚಾಮರಾಜನಗರದಲ್ಲಿ ಆಯೋಜನೆಗೊಳ್ಳುತ್ತಿರುವುದು ಸಂತಸದ ಸಂಗತಿ, ಸ್ಕೇಟಿಂಗ್, ಕರಾಟೆ ಕ್ರೀಡೆಗಳಿಗೆ ಹೆಚ್ಚಿನ ಒತ್ತು ನೀಡಬೇಕಿದೆ ಎಂದರು.

ಜಿಲ್ಲಾ ನೆಟ್ ಬಾಲ್ ಅಸೋಸಿಯೇಷನ್ ಅಧ್ಯಕ್ಷ ವಿ.ಶ್ರೀನಿವಾಸಪ್ರಸಾದ್ ಮಾತನಾಡಿ, ಚಾಮರಾಜನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಕ್ರೀಡಾಕೂಟಗಳ ಆಯೋಜನೆ ಆಗುತ್ತಿದೆ. ಚಾಮರಾಜನಗರ ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ಕೇಟಿಂಗ್, ಕರಾಟೆ ಕ್ರೀಡಾಂಗಣ ನಿರ್ಮಿಸಿಕೊಡಲು ಸರ್ಕಾರ, ಜಿಲ್ಲಾಡಳಿತ ಮುಂದಾಗಬೇಕು ಎಂದು ಆಗ್ರಹಿಸಿದರು.

ಚಾಮರಾಜನಗರ ಸುಲ್ತಾನ್ ಷರೀಪ್ ವೃತ್ತದಿಂದ ಆರಂಭವಾದ ಮ್ಯಾರಥಾನ್ ದೊಡ್ಡಂಗಡಿಬೀದಿ, ಅಗ್ರಹಾರಬೀದಿ, ಡಿವಿಯೇಷನ್ ರಸ್ತೆ ಮೂಲಕ ತೆರಳಿ, ಸುಲ್ತಾನ್ ಷರೀಪ್ ವೃತ್ತದಲ್ಲಿ ಮುಕ್ತಾಯಗೊಂಡಿತು.

ಇದೇಮೊದಲ ಬಾರಿಗೆ ನಗರದಲ್ಲಿ ಸ್ಕೇಟಿಂಗ್ ಮ್ಯಾರಥಾನ್ ಆಯೋಜನೆ ಮಾಡಿದ್ದು, ನಗರದ ಜನತೆ ಸ್ಕೇಟಿಂಗ್ ಮ್ಯಾರಥಾನ್ ವೀಕ್ಷಿಸಿ ಸಂತಸಪಟ್ಟರು.

ಇದೇ ಸಂದರ್ಭದಲ್ಲಿ ರೆಹ್ಬರ್ ಅಸೋಸಿಯೇಷನ್ ಅಧ್ಯಕ್ಷ ಪುರ್ಕಾನ್ ಪಾಷ ಅಜೀಂ ಸೇರಿದಂತೆ ಅಸೋಸಿಯೇಷನ್ ಸದಸ್ಯರು ಹಾಜರಿದ್ದರು.

Leave a Reply

Your email address will not be published. Required fields are marked *