ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಶ್ರೀ ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮವನ್ನು ನಗರದಲ್ಲಿಂದು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಮೊದಲಿಗೆ ನಗರದ ಚಾಮರಾಜೇಶ್ವರ ದೇವಾಲಯ ಮುಂಬಾಗದಲ್ಲಿ ಶ್ರೀ ಮಹಾವೀರರ ಭಾವಚಿತ್ರಕ್ಕೆ ಎಂ.ಎಸ್.ಐ.ಎಲ್. ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಪುಷ್ಪರ್ಚಾನೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು. ಬಳಿP ನಗರದ ಪ್ರಮುಖ ರಸ್ತೆಗಳಲ್ಲಿ ಮಂಗಳ ವಾದ್ಯ ಸಮೇತ ಮಹಾವೀರರ ಭಾವಚಿತ್ರದ ಮೆರವಣಿಗೆ ಸಾಗಿ ವರನಟ ಡಾ. ರಾಜ್ ಕುಮಾರ್ ರಂಗಮಂದಿರದ ಬಳಿ ಮುಕ್ತಾಯವಾಯಿತು.
ನಂತರ ಡಾ. ರಾಜ್ ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಶ್ರೀ ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಎಲ್ಲಾ ಧರ್ಮಗಳ ಸಾರವು ಅಹಿಂಸೆ, ಮಾನವತೆ ಹಾಗೂ ಪ್ರೀತಿಯನ್ನು ಪ್ರತಿಪಾದಿಸುವುದಾಗಿದೆ. ಮಹಾವೀರರು ಶಾಂತಿಯನ್ನು ಸಾರಿದರು ಜನರ ಒಳಿತಿಗಾಗಿ ಕಳಕಳಿ ವ್ಯಕ್ತಪಡಿಸಿದರು ಎಂದರು.
ಬುದ್ದ ಹಾಗೂ ಮಹಾವೀರರು ಮಾನವತೆಗೆ ಒಲವು ತೋರಿದರು. ಇಬ್ಬರ ವಿಚಾರಧಾರೆಗಳಲ್ಲು ಸಾಮ್ಯತೆ ಇದೆ ಮನುಕುಲದ ಒಳಿತಿಗಾಗಿ ಹಂಬಲಿಸಿ ಅದಕ್ಕಾಗಿ ತಮ್ಮ ಬದುಕನ್ನೆ ಮುಡುಪಾಗಿ ಇಟ್ಟರು. ಸಮಾಜದ ಜನತೆ ಇಂದಿಗೂ ಸೇವಾ ಮನೋಭಾವನೆ ಹೊಂದಿದ್ದಾರೆ ಎಂದು ಶಾಸಕರಾದ ಪುಟ್ಟರಂಗ ಶೆಟ್ಟಿ ಅವರು ತಿಳಿಸಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಾಡಾ ಅಧ್ಯಕ್ಷರಾದ ಪಿ. ಮರಿಸ್ವಾಮಿ ಅವರು ಭಗವಾನ್ ಮಹಾವೀರರ ಬದುಕು ಮತ್ತು ಅವರು ನಡೆದು ಬಂದ ದಾರಿಯಲ್ಲಿ ಸಾಗಬೇಕಿದೆ. ಮಹಾವೀರರು ಮೂಡನಂಬಿಕೆ ಕಂದಚಾರಗಳನ್ನು ವಿರೋದ ಮಾಡಿದವರು. ಶ್ರಿಮಂತಿಕೆ ಜೀವನವನ್ನು ತ್ಯಜಿಸಿ ಭಗವಾನ್ ಮಹಾವೀರರು ಬಡವರು ಮೇಲೆ ಅಪಾರ ಕಾಳಜಿ ತೋರಿದರು ಎಂದರು.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಹಾಗೂ ಉಪನ್ಯಾಸಕರಾದ ಸುರೇಶ್ ಎನ್ ಋಗ್ವೇದಿ ಅವರು ಮುಖ್ಯ ಭಾಷಣ ಮಾಡಿದರು
ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ನಂಜುಂಡಯ್ಯ ಸಮುದಾಯ ಮುಖಂಡರಾದ ನಿರ್ಮಲ ಕುಮಾರ್, ಸಿ. ಎನ್ ಚಂದ್ರ ಪ್ರಭ ಜೈನ್, ಶಾಂತಿ ಪ್ರಸಾದ್, ಪದ್ಮ ಕಲಾ, ಅನುರಾದ ಮಹೇಶ್, ವಿಜಯ ಬಾಬು, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.