ಮೈಸೂರು: ಕುವೆಂಪು ನಗರದ ಉಮಾ ರಮೇಶ್ ನಿಧನ

ಮೈಸೂರು: ಕುವೆಂಪು ನಗರದ ಕೆ ಬ್ಲಾಕ್ ನ ನಿವಾಸಿ ಹವ್ಯಾಸಿ ಲೇಖಕಿ  ಶ್ರೀಮತಿ ಉಮಾ ರಮೇಶ್ (68) ರವರು ಆರೋಗ್ಯ ಸಮಸ್ಯೆಯ ಕಾರಣದಿಂದ ಮಂಗಳವಾರ ಬೆಳಿಗ್ಗೆ ಮೃತಪಟ್ಟರು. 

ಪತಿ ಹಾಗೂ ಆಕಾಶವಾಣಿಯ ನಿವೃತ್ತ ಕಾರ್ಯಕ್ರಮ ನಿರ್ವಾಹಕ ಅಧಿಕಾರಿ ಶ್ರೀ ಎನ್ ವಿ ರಮೇಶ್, ಸೊಸೆ ನಿಶಾ, ಹಾಗೂ ಅಪಾರ ಬಂಧು ಬಳಗವನ್ನು ಆಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಚಾಮುಂಡಿ ಬೆಟ್ಟದ ತಪ್ಪಲಿನ ಚಿತಾಗಾರದಲ್ಲಿ ಮಂಗಳವಾರ ಸಂಜೆ ನೆರವೇರಿತು.

ಉಮಾ ರವೇಶ್ ರವರ ನಿಧನಕ್ಕೆ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಡ್ಡಿಕೆರೆ ಗೋಪಾಲ್, ಮೈಸೂರು ಸಾಹಿತ್ಯ ದಾಸೋಹದ ಪದ್ಮ ಮತ್ತು ಆನಂದ್, ಸವಿಗನ್ನಡ ಪತ್ರಿಕೆಯ ರಂಗನಾಥ್ ಮೈಸೂರು, ನೋಟರಿ ಕೆ ವಿ ವಾಸು, ಆಕಾಶವಾಣಿಯ ಸಮುದ್ಯತಾ ಕೇಳುಗರ ಬಳಗದ ಅಧ್ಯಕ್ಷರಾದ ಕಣ್ಣೂರು ವಿ ಗೋವಿಂದಾಚಾರಿ, ಲೇಖಕ ಕಾಳಿಹುಂಡಿ ಶಿವಕುಮಾರ್ ಮುಂತಾದವರು ಸಂತಾಪ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *