ಸೆ. 13ರಂದು ಜಿಲ್ಲೆಯಲ್ಲಿ ರಾಷ್ರೀಯ ಲೋಕ್ ಅದಾಲತ್ : ಜಿಲ್ಲಾ ನ್ಯಾಯಾಧೀಶರಾದ ಜಿ. ಪ್ರಭಾವತಿ

ಚಾಮರಾಜನಗರ: ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದÀ ನಿರ್ದೇಶನದಂತೆ ರಾಷ್ಟ್ರೀಯ ಲೋಕ್ ಅದಾಲತ್ ಅನ್ನು ಚಾಮರಾಜನಗರ ಜಿಲ್ಲಾದ್ಯಂತ ಸೆಪ್ಟೆಂಬರ್ 13ರಂದು ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಜಿ. ಪ್ರಭಾವತಿ ಅವರು ತಿಳಿಸಿದರು.

ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ವ್ಯಾಜ್ಯ ಪೂರ್ವ ಪರಿಹಾರ ಕೇಂದ್ರದಲ್ಲಿಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು.

ಲೋಕ್ ಅದಾಲತ್ ನಲ್ಲಿ ಸಾರ್ವಜನಿಕರು ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಚಿಸಿದಲ್ಲಿ ಮುಂಚಿತವಾಗಿ ಚಾಮರಾಜನಗರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಯಳಂದೂರು, ಕೊಳ್ಳೇಗಾಲ ಹಾಗೂ ಗುಂಡ್ಲುಪೇಟೆ ತಾಲೂಕು ಕಾನೂನು ಸೇವಾ ಸಮಿತಿಗಳಲ್ಲಿ ಆನ್‍ಲೈನ್, ವಿಡಿಯೋ ಕಾನ್ಫೆರೆನ್ಸ್, ಇ ಮೇಲ್, ಎಸ್.ಎಂ.ಎಸ್., ವಾಟ್ಸ್ ಆಪ್ ಅಥವಾ ಖುದ್ದಾಗಿ ಹಾಜರಾಗುವ ಮೂಲಕ ಸಂಬಂಧಪಟ್ಟ ಪ್ರಾಧಿಕಾರ ಮತ್ತು ಸಮಿತಿಗಳನ್ನು ಸಂಪರ್ಕಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ನ್ಯಾಯಾಧೀಶರು ಹೇಳಿದರು.   

ಲೋಕ್ ಅದಾಲತ್‍ನಲ್ಲಿ ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ಕೈಗಾರಿಕಾ ಕಾರ್ಮಿಕ ವೇತನ, ಗ್ರಾಹಕರ ವೇದಿಕೆ, ರಿಯಲ್ ಎಸ್ಟೇಟ್, ಸಾಲ ವಸೂಲಾತಿ, ಚೆಕ್ ಅಮಾನ್ಯ ಪ್ರಕರಣಗಳು, ಮೋಟಾರ್ ಅಪಘಾತ ಪರಿಹಾರ, ವಿದ್ಯುತ್ ಮತ್ತು ನೀರಿನ ಶುಲ್ಕ, ಕಾರ್ಮಿಕ ವಿವಾದಗಳು, ಭೂ ಸ್ವಾಧೀನ, ವೇತನ ಭತ್ಯೆ ಹಾಗೂ ಪಿಂಚಣಿ, ಸಾರ್ವಜನಿಕ ಉಪಯುಕ್ತತೆ ಸೇವೆಗಳು, ರಾಜಿ ಯೋಗ್ಯ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳು ಹಾಗೂ ಇತರೆ ಪ್ರಕರಣಗಳು, ಕುಟುಂಬ ನ್ಯಾಯಾಲಯದ ಪ್ರಕರಣಗಳನ್ನು (ವಿವಾಹ ವಿಚ್ಛೇದನವನ್ನು ಹೊರತುಪಡಿಸಿ) ಜನತಾ ನ್ಯಾಯಾಲಯಗಳಲ್ಲಿ ಇತ್ಯರ್ಥಪಡಿಸಲಾಗುವುದು ಎಂದರು. 

ನ್ಯಾಯಾಲಯಗಳಲ್ಲಿ ಉಭಯ ಪಕ್ಷಕಾರರು ರಾಜಿಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ನೀಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಭಾಂದವ್ಯ ಉಳಿದು ವಿವಾದವು ಅಂತ್ಯಗೊಳ್ಳಲಿದೆ. ನ್ಯಾಯಾಲಯಗಳಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ವ್ಯಾಜ್ಯ ಪೂರ್ವ ಪ್ರಕರಣಗಳೆಂದು ಪರಿಗಣಿಸಿ, ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ನ್ಯಾಯಾಧೀಶರು ತಿಳಿಸಿದರು. 

ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಗಳಿಗೆ ಪಾವತಿಸಲಾದ ನ್ಯಾಯಾಲಯದ ಶುಲ್ಕವನ್ನು ಸಂಪೂರ್ಣವಾಗಿ ಮರು ಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜಿ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರವಾಗಿ ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ವಿಶೇಷ ಅವಕಾಶವಾಗಿದೆ ಎಂದರು. 

ಕರ್ನಾಟಕ ಉಚ್ಚ ನ್ಯಾಯಾಲಯದ ಮಾರ್ಗಸೂಚಿ (ಎಸ್.ಓ.ಪಿ) ಯಂತೆ ಚಾಮರಾಜನಗರ ಜಿಲ್ಲೆಯಲ್ಲಿರುವ ಎಲ್ಲಾ ನ್ಯಾಯಾಲಯಗಳಲ್ಲಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಯಳಂದೂರು, ಕೊಳ್ಳೇಗಾಲ ಹಾಗೂ ಗುಂಡ್ಲುಪೇಟೆ ತಾಲ್ಲೂಕು ಕಾನೂನು ಸೇವಾ ಸಮಿತಿಗಳಲ್ಲಿ ಲೋಕ್ ಅದಾಲತ್‍ಗೆ ಸಂಬಂಧಿಸಿದಂತೆ ಪ್ರತಿದಿನ ಪೂರ್ವಭಾವಿ ಬೈಠಕ್‍ಗಳು ಭೌತಿಕವಾಗಿ ವೀಡಿಯೋ ಕಾನ್ಫರೆನ್ಸ್ ಮೂಲಕ ನಡೆಯುತ್ತಿದ್ದು, ಇದರ ಮೂಲಕವೂ ಸಹ ಅರ್ಜಿ ಸಲ್ಲಿಸಿ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾ ನ್ಯಾಯಾಧೀಶರು ಹೇಳಿದರು. 

ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ ನಲ್ಲಿ ದಾಖಲಾದ ಪ್ರಕರಣಗಳಿಗೆ ಅನ್ವಯವಾಗುವಂತೆ ದಾಖಲಾಗಿರುವ ಬಾಕಿ ಪ್ರಕರಣದ ದಂಡದ ಮೊತ್ತದಲ್ಲಿ ಶೇ.50ರಷ್ಟು ರಿಯಾಯಿತಿಯನ್ನು ಸರ್ಕಾರ ಆಗಸ್ಟ್ 21ರಂದು ಆದೇಶಿಸಿರುತ್ತದೆ. ಸದರಿ ಅವಕಾಶವು ಆಗಸ್ಟ್ 23 ರಿಂದ ಸೆಪ್ಟೆಂಬರ್ 12ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ. ಇದರ ಸದುಪಯೋಗವನ್ನು ಸಹ ಸಾರ್ವಜನಿಕರು ಪಡೆದುಕೊಳ್ಳಬಹುದು ಎಂದು ತಿಳಿಸಿದರು.   

ಲೋಕ್ ಅದಾಲತ್ ನಿಮಿತ್ತ ನ್ಯಾಯಲಯಗಳಲ್ಲಿ ಬಾಕಿ ಇರುವ ರಾಜಿಯೋಗ್ಯ ಪ್ರಕರಣಗಳನ್ನು ಶೀಘ್ರ ಹಾಗೂ ಪರಿಣಾಮಕಾರಿಯಾಗಿ ಇತ್ಯರ್ಥಗೊಳಿಸಲು ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಪೂರ್ವಭಾವಿ ಸಮಾಲೋಚನಾ ಕೇಂದ್ರವನ್ನು ತೆರೆಯಲಾಗಿದೆ. ಸಾರ್ವಜನಿಕರು ಲೋಕ್ ಅದಾಲತ್ ನಲ್ಲಿ ವ್ಯಾಜ್ಯ ಪೂರ್ವ ಪ್ರಕರಣ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ತಕ್ಷಣ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ ಎಂದರು. 

ಹೆಚ್ಚಿನ ಮಾಹಿತಿಗಾಗಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಸಹಾಯವಾಣಿ ಸಂಖ್ಯೆ 15100, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸಹಾಯವಾಣಿ ಸಂಖ್ಯೆ 1800-425-90900, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಚಾಮರಾಜನಗರ ಸಹಾಯವಾಣಿ ಸಂಖ್ಯೆ 08226-226022, ತಾಲ್ಲೂಕು ಕಾನೂನು ಸೇವಾ ಸಮಿತಿ ಯಳಂದೂರು ಸಹಾಯವಾಣಿ ಸಂಖ್ಯೆ 08226-240229, ಕೊಳ್ಳೇಗಾಲ ಸಹಾಯವಾಣಿ ಸಂಖ್ಯೆ 08224-256788, ಗುಂಡ್ಲುಪೇಟೆ ಸಹಾಯವಾಣಿ ಸಂಖ್ಯೆ 08229-223279 ಸಂಪರ್ಕಿಸಬಹುದು ಎಂದು ಹೇಳಿದರು.  

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇ-ಮೇಲ್ ಜಟsಚಿಛಿhಟಿಚಿgಚಿಡಿ2021@gmಚಿiಟ.ಛಿom, ತಾಲ್ಲೂಕು ಕಾನೂನು ಸೇವಾ ಸಮಿತಿ ಯಳಂದೂರು ಣಟsಛಿಥಿeಟಚಿಟಿಜuಡಿ2018@gmಚಿiಟ.ಛಿom, ಕೊಳ್ಳೇಗಾಲ ಣಟsಛಿಞoಟಟegಚಿಟ2018@gmಚಿiಟ.ಛಿom       ಗುಂಡ್ಲುಪೇಟೆ ಛಿರಿರಿmಜಿಛಿgಠಿeಣ@gmಚಿiಟ.ಛಿom ಇ-ಮೇಲ್‍ಗಳನ್ನೂ ಸಹ ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಜಿ. ಪ್ರಭಾವತಿ ಅವರು ತಿಳಿಸಿದರು. 

ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರಾದ ಈಶ್ವರ್, ಮುಖ್ಯ ನ್ಯಾಯಿಕ ದಂಡಾಧಿಕಾರಿ ಸಿ.ಡಿ. ಪ್ರಕಾಶ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ನಂಜಯ್ಯ, ಪ್ರಧಾನ ಕಾರ್ಯದರ್ಶಿ ರಂಗಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *