ಸಮರ್ಥನಂ ಅಂಗವಿಕಲರ ಸಂಸ್ಥೆಯಿಂದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಮೈಸೂರು : ಮೈಸೂರಿನ ವಿಜಯನಗರ 2ನೇ ಹಂತದಲ್ಲಿರುವ ಸಮರ್ಥನ ಅಂಗವಿಕಲ ಸಂಸ್ಥೆಯ ವತಿಯಿಂದ ಇಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಆಚರಣೆ ಮಾಡಲಾಯಿತು.

ಸಂಸ್ಥೆಯ ಮೈಸೂರು ವಿಭಾಗೀಯ ಮುಖ್ಯಸ್ಥರಾದ ಎಂ. ಶಿವರಾಜು ಮಾತನಾಡಿ, ವಿಜ್ಞಾನ ಹಾಗೂ ತಂತ್ರಜ್ಞಾನದ ಕುರಿತಾದ ಪ್ರಚಲಿತ ವಿದ್ಯಮಾನಗಳ ಬಗ್ಗೆ ಅರಿವು ಮೂಡಿಸುವುದು. ಜನಸಾಮಾನ್ಯರಲ್ಲಿ ವಿಜ್ಞಾನವನ್ನು ಜನಪ್ರಿಯಗೊಳಿಸುವಲ್ಲಿ ಹಾಗೂ ವೈಜ್ಞಾನಿಕ ಅನ್ವೇಷಣೆಗಳತ್ತ ಯುವ ಮನಸ್ಸುಗಳನ್ನು ಪ್ರೇರೇಪಿಸುವ ಸಲುವಾಗಿ ರಾಷ್ಟ್ರೀಯ ವಿಜ್ಞಾನ ದಿನದ ಮಹತ್ವದ್ದಾಗಿದೆ. ದೇಶದ ಅಭಿವೃದ್ಧಿಗೆ ವಿಜ್ಞಾನಿಗಳು ನೀಡಿದ ಕೊಡುಗೆಗಳನ್ನು ಪ್ರಶಂಸಿಸಲು, ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿಯನ್ನು ಬೆಳೆಸುವುದು. ಹೊಸ ಹೊಸ ಅವಿಷ್ಕಾರಗಳನ್ನು ಮಾಡಲು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಬೇಕು ಎಂದರು.

ಇದಕ್ಕೂ ಮೊದಲು ಸಂಸ್ಥೆಯ ಉನ್ನತ ಶಿಕ್ಷಣ ಸಂಯೋಜಕರಾದ ಎಲ್.ಸಿ.ಚೈತ್ರಕುಮಾರಿ ಪ್ರತಿಜ್ಞಾವಿಧಿ ಬೋಧಿಸಿದರು.

ಸದರಿ ಕಾರ್ಯಕ್ರಮದಲ್ಲಿ ಬುದ್ಧಿ ವಿಕಲಚೇತನ ಶಾಲೆಯ ಮುಖ್ಯೋಪಾಧ್ಯಾಯಿನಿ ಬ್ರಮರಂಭ, ಸ್ಪರ್ಶ, ಮಾಂತೇಶ, ಭುವನ, ಮಹಾದೇವ, ವಿದ್ಯಾವತಿ, ಸೇರಿದಂತೆ ಜೀವನ ಕೌಶಲ್ಯ ತರಬೇತಿಯ ವಿದ್ಯಾರ್ಥಿಗಳು, ಬುದ್ಧಿ ವಿಕಲಚೇತನ ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದ

Leave a Reply

Your email address will not be published. Required fields are marked *