ಚಾಮರಾಜನಗರ: ನೂತನ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಮುತ್ತುರಾಜು ಅವರನ್ನು
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ವತಿಯಿಂದ ಸನ್ಮಾನಿಸಲಾಯಿತು.
ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಸಿ.ಎನ್.ರೇಣುಕಾದೇವಿ ಅವರ ನೇತೃತ್ವದಲ್ಲಿ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರನ್ನು ಭೇಟಿ ಮಾಡಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ, ಖಜಾಂಚಿ ಶಿವಕುಮಾರಯ್ಯ, ಕಾರ್ಯಾಧ್ಯಕ್ಷ ಮಹಾದೇವಸ್ವಾಮಿ, ಹಿರಿಯ ಉಪಾಧ್ಯಕ್ಷ ಎಂ.ಡಿ.ಮಹದೇವಯ್ಯ, ಸಂಘದ ಪದಾಧಿಕಾರಿಗಳಾದ ಮಹೇಶ್ ಹೆಚ್.ಡಿ, ಸಿ.ಕೆ.ವಾಸು ಇತರರು ಹಾಜರಿದ್ದರು.