ಚಾಮರಾಜನಗರ: ಗಡಿ ಜಿಲ್ಲೆಗೆ ಪ್ರಥಮ ಬಾರಿಗೆ ಆಗಮಿಸಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೈಸೂರು ವಿಭಾಗದ ಜಂಟಿ ನಿರ್ದೇಶಕರಾದ ನಿರ್ಮಲ ಮಠಪತಿ ರವರಿಗೆ ಜೈ ಭುವನೇಶ್ವರಿ ಕನ್ನಡ ಯುವ ವೇದಿಕೆ. ಶ್ರೀ ವರಮಹಾಲಕ್ಷ್ಮಿ ಸಾಂಸ್ಕೃತಿಕ ಕ್ರೀಡಾ ಸೇವಾ ಸಂಸ್ಥೆ. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಜಿ ಬಂಗಾರು ಆತ್ಮೀಯವಾಗಿ ಸನ್ಮಾನಿಸಲಾಯಿತು.
ನಗರದ ಜಿಲ್ಲಾ ಆಡಳಿತ ಭವನದ ಡಾಕ್ಟರ್ ರಾಜಕುಮಾರ್ ರಂಗಮಂದಿರದಲ್ಲಿ ಇರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕಚೇರಿಯಲ್ಲಿ ಕಲಾವಿದರು ಸಂಘಟನೆಗಳು ಜನಪದ ಕಲೆಗಳ ತವರೂರು ಚಾಮರಾಜನಗರ ಜಿಲ್ಲೆ ಕಲಾವಿದರಿಗೆ ಹೆಚ್ಚಿನ ಸಾಂಸ್ಕೃತಿಕ ಕಾರ್ಯಕ್ರಮ ನೀಡಿ ಎಂದು ಮನವಿ ಮಾಡಿದರು.
ಅಂತರಾಷ್ಟ್ರೀಯ ಜನಪದ ಗಾಯಕ ಸಿಎಂ ನರಸಿಂಹಮೂರ್ತಿ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜು. ಇಲಾಖೆಯ ಕುಮಾರ್, ನಾಗೇಂದ್ರ. ಕಲಾವಿದರು ಹಾಜರಿದ್ದರು
