ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜಿ. ಪಲ್ಲವಿ ಅವರಿಂದ ಬಿ. ಮಲ್ಲಯ್ಯನಪುರದಲ್ಲಿ ಹಂದಿಜೋಗಿ ಸಮುದಾಯದ ಕುಂದುಕೊರತೆ ಆಲಿಕೆ

ಚಾಮರಾಜನಗರ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜಿ. ಪಲ್ಲವಿ ಅವರು ಬಿ. ಮಲ್ಲಯ್ಯನಪುರದಲ್ಲಿ ಹಂದಿಜೋಗಿ ಸಮುದಾಯ ಜನರಿಂದ ಕುಂದುಕೊರತೆ, ಸಮಸ್ಯೆಗಳನ್ನು ಆಲಿಸಿದರು.

ಚಾಮರಾಜನಗರ ತಾಲೂಕಿನ ಬಿ. ಮಲ್ಲಯ್ಯನಪುರ ಗ್ರಾಮದ ಬಳಿ ಇಂದು ಹಂದಿಜೋಗಿ ಸಮುದಾಯದ ಕುಟುಂಬಗಳು ವಾಸಿಸುವ ಸ್ಥಳ ವೀಕ್ಷಣೆ ಮಾಡಿದ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜಿ. ಪಲ್ಲವಿ ಅವರು ಬಳಿಕ ಸಮುದಾಯದ ಮುಖಂಡರೊಂದಿಗೆ ಕುಂದುಕೊರತೆ ಸಭೆ ನಡೆಸಿದರು. 

ಸಭೆಯಲ್ಲಿ ಹಂದಿಜೋಗಿ ಸಮುದಾಯದ ಮುಖಂಡರು ಮಾತನಾಡಿ, ಮಲ್ಲಯ್ಯನಪುರದ ಹೊರಭಾಗದಲ್ಲಿ 15 ಹಂದಿಜೋಗಿ ಸಮುದಾಯದ ಕುಟುಂಬಗಳು ವಾಸಿಸುತ್ತಿದ್ದು, ಮಲಯ್ಯನಪುರದಿಂದ ಇಲ್ಲಿಗೆ ಸಂಪರ್ಕಿಸುವ ರಸ್ತೆ ತಂಬಾ ದುಸ್ಥಿತಿಯಲ್ಲಿದೆ. ಸುತ್ತಲಿನ ಗ್ರಾಮಗಳಿಗೆ, ಪಟ್ಟಣಗಳಿಗೆ ಒಡಾಡಲು ಸಮುದಾಯದ ಜನರು ಸರಿಯಾದ ರಸ್ತೆ ವ್ಯವಸ್ಥೆ ಇಲ್ಲ. ಸಮುದಾಯ ಮುಕ್ಕಡಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿದ್ದು, ಪಂಚಾಯಿತಿಯಿಂದ ಸರ್ಕಾರದ ಸೌಲಭ್ಯಗಳು ಸಮರ್ಪಕವಾಗಿ ತಲುಪುತ್ತಿಲ್ಲ ಎಂದರು.

ಅಲ್ಲದೆ ಗ್ರಾಮಕ್ಕೆ ಸ್ಮಶಾನ ಭೂಮಿ ಒತ್ತುವರಿಯಾಗಿದೆ. ಜಿಲ್ಲಾಮಟ್ಟದ ಸಮುದಾಯ ಭವನದ ಅಗತ್ಯವಿದೆ. ಶೌಚಾಲಯಗಳ ಸಮಸ್ಯೆ ಇದೆ. ಮನೆಗಳ ಹಕ್ಕು ಪತ್ರಗಳನ್ನು ಕೊಡಿಸಿಕೊಡಬೇಕು. ಕೆಲ ಬಡ ಕುಟುಂಬಗಳಿಗೆ ನಿವೇಶನ ಅವಶ್ಯವಿದೆ, ಗ್ರಾಮದ ಹೆಸರಿನ ನಾಮಫಲಕ ಹಾಕಬೇಕು ಎಂಬುದು ಸೇರಿದಂತೆ ಹಲವಾರು ಸಮಸ್ಯೆಗಳನ್ನು ನಿಗಮದ ಅಧ್ಯಕ್ಷರ ಗಮನಕ್ಕೆ ಗಮನಕ್ಕೆ ತಂದರು. 

ಸಮಸ್ಯೆಗಳನ್ನು ಆಲಿಸಿ ಮಾತನಾಡಿದ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜಿ. ಪಲ್ಲವಿ ಅವರು ಯಾವುದೇ ಸರ್ಕಾರಿ ಕಾರ್ಯಕ್ರಮಗಳನ್ನು ಪ್ರಾಮಣಿಕವಾಗಿ ಜಾರಿ ಮಾಡುವುದು, ಸೌಲಭ್ಯಗಳನ್ನು ನಿಗದಿತ ಕಾಲಮಿತಿಯಲ್ಲಿ ಸಮುದಾಯದ ಜನರಿಗೆ ತಲುಪಿಸುವುದು ಸಂಬಂಧಪಟ್ಟ ಗ್ರಾಮ ಪಂಚಾಯಿತಿಗಳ ಅದ್ಯ ಕರ್ತವ್ಯವಾಗಿದೆ. ಆಯಾ ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಲೆಮಾರಿ ಸಮುದಾಯಗಳ ಸಮುದಾಯಗಳ ಅಭಿವೃದ್ಧಿಗೆ ಬದ್ದರಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಮುಕ್ಕಡಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯರಾದ ಶಿವಣ್ಣನಾಯ್ಕ, ಚಾಮರಾಜನಗರ ತಾಲೂಕು ತಹಶೀಲ್ದಾರ್ ಗಿರಿಜ, ನಗರಸಭೆ ಪೌರಾಯುಕ್ತರಾದ ಎಸ್.ವಿ. ರಾಮದಾಸ್,  ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಕಂಠೇರಾಜೇ ಅರಸ್, ತಾಲೂಕು ಸಮಾಜ ಕಲ್ಯಾಣಾಧಿಕಾರಿ ನಂಜುಂಡೇಗೌಡ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶೃತಿ, ಕಾರ್ಯದರ್ಶಿ ಪ್ರಕಾಶ್, ಮುಖಂಡರಾದ ರಾಜೇಂದ್ರಕುಮಾರ್, ಶಿವಕುಮಾರ್, ಇತರರು ಇದೇ ವೇಳೆ ಇದ್ದರು.

Leave a Reply

Your email address will not be published. Required fields are marked *