ಪೌರ ಕಾರ್ಮಿಕರ ಕಾಲೋನಿಗೆ ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು ಭೇಟಿ ಪರಿಶೀಲನೆ
ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಪೌರಕಾರ್ಮಿಕರ ಕಾಲೋನಿಗೆ ಶ್ರೀ ಮಲೆ ಮಹದೇಶ್ವರ ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು ಅವರು ಭೇಟಿ ನೀಡಿ ಪೌರ ಕಾರ್ಮಿಕರ ಕುಂದುಕೊರತೆಯನ್ನು ಆಲಿಸಿದರು.
ಮಲೆ ಮಹದೇಶ್ವರ ಬೆಟ್ಟದ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರ ಹಲವು ಕುಟುಂಬಗಳಿಗೆ ಸ್ವಂತ ಮನೆಗಳಿಲ್ಲ. ಈ ಬಗ್ಗೆ ಕಾರ್ಯದರ್ಶಿಗಳ ಗಮನಕ್ಕೆ ತರಲಾಗಿತ್ತು. ಈ ಹಿನ್ನೆಲೆಯಲ್ಲಿ ಕಾಲೋನಿಗೆ ಭೇಟಿ ನೀಡಿ, ಕುಂದುಕೊರತೆಗಳನ್ನು ಆಲಿಸಿದರು.
ನಂತರ ಮಾತನಾಡಿದ ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು ಅವರು, ಪ್ರಧಾನ ಮಂತ್ರಿ ಗೃಹ ಭಾಗ್ಯ ಯೋಜನೆಯಡಿ ಮನೆಗಳನ್ನು ನಿರ್ಮಾಣ ಮಾಡಿಕೊಳ್ಳಲು ನೆರವು ನೀಡಲಾಗುವುದು. ಯಾವುದೇ ಸಮಸ್ಯೆಗಳಿದ್ದರೂ ಶೀಘ್ರದಲ್ಲಿಯೇ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ್, ಕಿರಿಯ ಅಭಿಯಂತರ ಸೆಲ್ವ ಗಣಪತಿ, ಪೌರಕಾರ್ಮಿಕರ ಸಂಘದ ಅಧ್ಯಕ್ಷ ಗೋಪಾಲ್ ಮತ್ತಿತರರಿದ್ದರು.