ಚಾಮರಾಜನಗರ: ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಭಾನುವಾರ ನಡೆದ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ ತ್ರಿವರ್ಣ ಧ್ವಜಾರೋಹಣ ನೆರವೇರಿಸಿದರು.
ಇದೇವೇಳೆ ಅವರು ಮಾತನಾಡಿ, ಮಹಾತ್ಮ ಗಾಂದಿ,ü ಅಂಬೇಡ್ಕರ್ ಅವರ ಅಶಯದಂತೆ ದೇಶದ ಸಮಗ್ರ ಅಭಿವೃದ್ದಿಗಾಗಿ ಕಾಂಗ್ರೆಸ್ ಪಕ್ಷ ದುಡಿಯುತ್ತಿದೆ. ರೈತರು, ಕೂಲಿ ಕಾರ್ಮಿಕರು ಮತ್ತು ದುಡಿಯುವ ವರ್ಗದವರಿಗೆ ವಿಶೇಷವಾದ ಕಾಯ್ದೆಗಳನ್ನು ನೀಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯಡಿಯಲ್ಲಿ ಎಲ್ಲರು ಸಮಾನವಾಗಿ ಬದುಕು ರೂಪಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ಅಂಬೇಡ್ಕರ್ ಅವರು ಅನೇಕ ರಾಷ್ಟ್ರಗಳ ಸಂವಿಧಾನವನ್ನು ಅಧ್ಯಯನ ಮಾಡಿ, ಭಾರತಕ್ಕೆ ಒಪ್ಪುವಂತಹ ಸಂವಿಧಾನವನ್ನು ನೀಡಿದ್ದಾರೆ ಎಂದು ಬಣ್ಣಿಸಿದರು.
ನಗರರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಹಮದ್ ಅಸ್ಗರ್,ಮುನ್ನಾ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ,ಕೆ ರವಿಕುಮಾರ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚಿಕ್ಕ ಮಹದೇವ್,ಆರ್,ಮಹದೇವ್, ಗ್ರಾಮಾಂತರಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಎಸ್,ಗುರುಸ್ವಾಮಿ, ಮಹಿಳಾ ಅಧ್ಯಕ್ಷೆ ಶಕುಂತಲಾ, ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷ ಸೋಮೇಶ್ವರ್, ನಗರಸಭಾ ಸದಸ್ಯರಾದ ಚಿನ್ನಮ್ಮ, ಸ್ವಾಮಿ ಕರಿನಂಜನಪುರ, ಶಾಂತಲಾ, ನಗರಾಭಿವೃದ್ಧಿಪ್ರಾಧಿಕಾರದ ಸದಸ್ಯ ರಾಜು, ದೂರಕಿ ಉಪ್ಪಾರ್, ಪುಟ್ಟಸ್ವಾಮಿ, ಎ,ಎಚ್, ನಸ್ರುಲ್ಖಾನ್, ಪೃಥ್ವಿ, ಮಾಜಿ ಜಿಪಂ ಉಪಾದ್ಯಕ್ಷ ಅಯ್ಯನಪುರ ಶಿವಕುಮಾರ್, ಕುಮಾರ್ ಮರಿಯಾಲದಹುಂಡಿ, ನಗರಸಭಾ ಮಾಜಿ ಸದಸ್ಯ ಮಹದೇವಯ್ಯ, ಮಹದೇವಸ್ವಾಮಿ, ಅಪ್ಸರ್ ಅಹಮದ್,ಮಹಮದ್ ರೆಹಮನ್, ಅಲ್ಪ ಸಂಖ್ಯಾಂತರ ಘಟಕದ ಅಧ್ಯಕ್ಷ ಇಂಬ್ರಾನ್ ಅಹಮದ್, ಕಾಮೀಕ ವಿಭಾಗದ ಜಿಲ್ಲಾ ಕಾರ್ಯದರ್ಶಿ, ನಾಗೇಂದ್ರಸ್ವಾಮಿ,ಗೀತಾ ಸಿದ್ದರಾಜು, ಶಿವಮೂರ್ತಿ ರಾಮಸಮುದ್ರ, ಸೇರಿದಂತೆ ಇತರರು ಇದ್ದದರು.