ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಸವಿತಾ ಮಹರ್ಷಿ ಜಯಂತಿ ಆಚರಣೆ ಕಾರ್ಯಕ್ರಮ ಇಂದು ಅರ್ಥಪೂರ್ಣವಾಗಿ ನಗರದಲ್ಲಿ ನಡೆಯಿತು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದÀ ಅವರು ಸವಿತಾ ಮಹರ್ಷಿಗಳು ಸಂಗೀತ, ವೇದಗಳಲ್ಲಿ ಅಪಾರ ಜ್ಞಾನ ಹೊಂದಿದ್ದರು. ಸಂಗೀತಾ ಶಾಸ್ತ್ರಕ್ಕೆ ಸಂಬಂಧಿಸಿದ ಸಾಮವೇದವನ್ನು ಸವಿತಾ ಮಹರ್ಷಿಗಳು ರಚನೆ ಮಾಡಿದ್ದಾರೆ ಎಂದರು.
ಸವಿತಾ ಮಹರ್ಷಿಗಳು ಆರಂಭದಲ್ಲಿ ವೈದ್ಯ ವೃತ್ತಿ ಮಾಡುತ್ತಿದ್ದರು ಎಂಬುದಾಗಿ ತಿಳಿದು ಬರುತ್ತದೆ. ಪ್ರತಿಯೊಂದು ವೃತ್ತಿಗೂ ತನ್ನದೇ ಆದ ಗೌರವವಿದೆ. ವೃತ್ತಿ ಧರ್ಮವನ್ನು ಗೌರವಿಸುವುದು ಮುಖ್ಯವಾಗಿದೆ. ಯಾವುದೇ ವೃತ್ತಿ ಮೇಲು ಅಲ್ಲ ಕೀಳು ಅಲ್ಲ ಎಂಬುದನ್ನು ಅರಿಯಬೇಕು ಎಂದು ತಿಳಿಸಿದರು.
ಸಮಾಜದ ಅಭಿವೃದ್ದಿಗೆ ಡಾ. ಬಿ.ಆರ್. ಅಂಬೇಡ್ಕರ್ ಅವರು ಹೇಳಿರುವಂತೆ ಶಿಕ್ಷಣವೇ ಅಸ್ತ್ರವಾಗಿದೆ. ಶಿಕ್ಷಣದಿಂದ ಹಲವು ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಸಮಾಜದ ಸತ್ಪ್ರಜೆÉಗಳನ್ನಾಗಿ ಮಾಡಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದÀ ಅವರು ಸಲಹೆ ಮಾಡಿದರು.
ಡಿ.ವೈ.ಎಸ್.ಪಿ ಲಕ್ಷ್ಮಯ್ಯ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಉದಯ್ ಕುಮಾರ್, ಸಮಾಜದ ಮುಖಂಡರು, ವಿವಿಧ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಅಧಿಕಾರಿಗಳು, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.