ಸೆ. 25ರಂದು ನಗರದಲ್ಲಿ ಶ್ರೀ ವಿಶ್ವಕರ್ಮ ಜಯಂತಿ

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಶ್ರೀ ವಿಶ್ವಕರ್ಮ ಜಯಂತಿಯನ್ನು ಸೆಪ್ಟೆಂಬರ್ 25ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.

ಅಂದು ಬೆಳಿಗ್ಗೆ 9 ಗಂಟೆಗೆ ನಗರದ ಪ್ರವಾಸಿ ಮಂದಿರದಿಂದ ಮೆರವಣಿಗೆ ಚಾಲನೆ ದೊರೆಯಲಿದೆ. ಬೆಳ್ಳಿಗೆ 11 ಗಂಟೆಗೆ ವರನಟ ಡಾ. ರಾಜ್‍ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ.

ಪಶುಸಂಗೋಪನೆ, ರೇμÉ್ಮ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಮೈಸೂರು ಸೇಲ್ಸ್ ಇಂಟರ್‍ನ್ಯಾಷನಲ್ ಲಿಮಿಟೆಡ್ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಸುನೀಲ್ ಬೋಸ್ ಅವರು ಘನ ಉಪಸ್ಥಿತಿ ವಹಿಸುವರು.

ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಎಚ್.ಎಂ. ಗಣೇಶ್ ಪ್ರಸಾದ್, ಎಂ.ಆರ್. ಮಂಜುನಾಥ್, ಡಾ. ಡಿ. ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಮಧು ಜಿ. ಮಾದೇಗೌಡ, ಕೆ. ವಿವೇಕಾನಂದ, ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾದ ಎಸ್. ಜಯಣ್ಣ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಡಾ. ಪುಷ್ಪ ಅಮರನಾಥ್, ಕಾವೇರಿ ಜಲಾನಯನ ಯೋಜನೆಯ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪಿ. ಮರಿಸ್ವಾಮಿ, ಚಾಮರಾಜನಗರ ಮತ್ತು ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ (ಮುನ್ನ), ನಗರಸಭೆ ಅಧ್ಯಕ್ಷರಾದ ಎಸ್. ಸುರೇಶ್, ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಹೆಚ್.ವಿ ಚಂದ್ರು, ನಗರಸಭಾ ಉಪಾಧ್ಯಕ್ಷರಾದ ಹೆಚ್.ಎಸ್. ಮಮತ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಕೊಡಗಿನ ಹವ್ಯಾಸಿ ಸಂಶೋಧಕರು ಮತ್ತು ಬರಹಗಾರರಾದ ಸತೀಶ್ ಮುಳ್ಳೂರು ಅವರು ಮುಖ್ಯ ಭಾಷಣಕಾರರಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *