
ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದ ಶ್ರೀಲಕ್ಷೀ
ಚಾಮರಾಜನಗರ: ಈ ಬಾರಿ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ನಗರದ ಸೇವಾಭಾರತಿ ಕನ್ನಡ ಮಾಧ್ಯಮ ಪ್ರೌಢಶಾಲೆ ಶೇ.86 ರಷ್ಟು ಫಲಿತಾಂಶವನ್ನು ಪಡೆದಿದೆ.
ಶಾಲೆಯಲ್ಲಿ ಒಟ್ಟು 43 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇದರಲ್ಲಿ 37 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಇವರ ಪೈಕಿ 3 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 24 ವಿದ್ಯಾರ್ಥಿಗಳು ಪ್ರಥಮ ದರ್ಜೆ, 8 ವಿದ್ಯಾರ್ಥಿಗಳು ದ್ವಿತೀಯ ದರ್ಜೆ ಹಾಗೂ ಇಬ್ಬರು ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ವಿದ್ಯಾರ್ಥಿನಿ ಶ್ರೀಲಕ್ಷ್ಮೀ 625 ಕ್ಕೆ 598 (ಶೇ.95.68) ಅಂಕ ಪಡೆದು ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಪದ್ಮಾವತಿ 573 (ಶೇ.91.68) ಹಾಗೂ ಕೀರ್ತನ.ಆರ್ 570 (ಶೇ.91.02) ಅಂಕಗಳನ್ನು ಪಡೆದಿದ್ದಾರೆ.
ಆರ್.ಕೀರ್ತನ ಎಂಬ ವಿದ್ಯಾರ್ಥಿನಿಯು ಕನ್ನಡದಲ್ಲಿ 125 ಕ್ಕೆ 125 ಅಂಕಗಳನ್ನು ಹಾಗೂ ಶ್ರೀಲಕ್ಷ್ಮೀ ಹಿಂದಿಯಲ್ಲಿ 100ಕ್ಕೆ 100 ಅಂಕಗಳನ್ನು ಪಡೆಯುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ತೇರ್ಗಡೆಯಾದ ಎಲ್ಲ ವಿದ್ಯಾರ್ಥಿಗಳನ್ನು ಸಂಸ್ಥೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಅಭಿನಂದಿಸಿದ್ದಾರೆ.