ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಪ್ರಗತಿ : ರಾಜ್ಯದಲ್ಲಿಯೇ ಚಾಮರಾಜನಗರ ಜಿಲ್ಲೆ ಮೊದಲು

ಚಾಮರಾಜನಗರ: ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಯುತ್ತಿರುವ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯಲ್ಲಿ ಚಾಮರಾಜನಗರ ಜಿಲ್ಲೆಯು ಶೇಕಡ 98.21 ರಷ್ಟು ಪ್ರಗತಿ ಸಾಧಿಸುವ ಮೂಲಕ ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿರುತ್ತದೆ.

ರಾಜ್ಯಾದ್ಯಾಂತ ನಾಗರಿಕರ ಸಾಮಾಜಿಕ ಶೈಕ್ಷಣಿಕ ಸಮೀಕ್ಷಾ ಕಾರ್ಯವು ಸೆಪ್ಟೆಂಬರ್ 22ರಿಂದ ಪ್ರಾರಂಭವಾಗಿದೆ. ಈ  ಸಮೀಕ್ಷೆಯಲ್ಲಿ ಚಾಮರಾಜನಗರ ತಾಲ್ಲೂಕು ಶೇ. 99.15, ಗುಂಡ್ಲುಪೇಟೆ ತಾಲ್ಲೂಕು ಶೇ.97.41, ಕೊಳ್ಳೇಗಾಲ ತಾಲ್ಲೂಕು ಶೇ. 94.66, ಯಳಂದೂರು ಹಾಗೂ ಹನೂರು ತಾಲ್ಲೂಕಿನಲ್ಲಿ ಶೇ. 100ರಷ್ಟು  ಸಮೀಕ್ಷಾ ಕಾರ್ಯ ಪೂರ್ಣಗೊಳಿಸಲಾಗಿದ್ದು, ಒಟ್ಟಾರೆ ಚಾಮರಾಜನಗರ ಜಿಲ್ಲೆತು ಶೇ. 98.21ರಷ್ಟು ಪ್ರಗತಿ ಸಾಧಿಸಿದೆ. 

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ನಾಗರಿಕರ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಕಾರ್ಯವನ್ನು ನಡೆಸಲು ಸರ್ಕಾರದ ಮಾರ್ಗಸೂಚಿಯಂತೆ ಗಣತಿದಾರರು, ಮೇಲ್ವಿಚಾರಕರನ್ನು ನೇಮಕ ಮಾಡಲಾಗಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಸಮೀಕ್ಷಾ ಕಾರ್ಯವನ್ನು ಅನುμÁ್ಠನಗೊಳಿಸುವ ಸಂಬಂಧ ಜಿಲ್ಲಾಧಿಕಾರಿಯವರು ಜಿಲ್ಲೆಯ ಎಲ್ಲಾ ಹೋಬಳಿಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿ ಪ್ರತಿದಿನ ವಿಡಿಯೋ ಸಂವಾದ ನಡೆಸಿ ಗಣತಿದಾರರಿಗೆ ಗುರಿಯನ್ನು ನಿಗದಿಪಡಿಸಿ ಆಯಾ ದಿನ ಪ್ರಗತಿಯನ್ನು ಪರಿಶೀಲಿಸಿ, ಉತ್ಸುಕತೆಯಿಂದ ಕಾರ್ಯನಿರ್ವಹಿಸಲು ಪೆÇ್ರೀತ್ಸಾಹಿಸಿದ್ದಾರೆ. ಇದರಿಂದ ಕ್ಷೇತ್ರ ಮಟ್ಟದಲ್ಲಿ ಸಮೀಕ್ಷೆ ಕಾರ್ಯನಿರ್ವಹಿಸುತ್ತಿದ್ದ ಎಲ್ಲಾ ಅಧಿಕಾರಿ, ಸಿಬ್ಬಂದಿ ಹಾಗೂ ಗಣತಿದಾರರು ಸಂಪೂರ್ಣವಾಗಿ ತಮ್ಮನ್ನು ಸಮೀಕ್ಷೆ ಕಾರ್ಯದಲ್ಲಿ ತೊಡಗಿಸಿಕೊಂಡು ಕಾರ್ಯನಿರ್ವಹಿಸಿರುವುದರಿಂದ ಅಕ್ಟೋಬರ್ 7ರ ವರದಿಯಂತೆ ಜಿಲ್ಲೆಯು ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ.

ಚಾಮರಾಜನಗರ ಜಿಲ್ಲೆಯ ಹೆಚ್ಚಿನ ಭಾಗವು ಅರಣ್ಯ ಪ್ರದೇಶದಿಂದ ಕೂಡಿದ್ದು, ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿರುವ ಗ್ರಾಮ/ಪೆÇೀಡು/ಹಾಡಿಗಳಲ್ಲಿ (ಟೆಲಿಕಾಂ ಶ್ಯಾಡೋ ಏರಿಯಾ) ಮೊಬೈಲ್ ನೆಟ್ ವರ್ಕ್ ಲಭ್ಯವಿಲ್ಲದಿರುವುದನ್ನು ಜಿಲ್ಲಾಡಳಿತವು ಪರಿಗಣಿಸಿ ಕಾಡಂಚಿನ ಗ್ರಾಮ/ಪೆÇೀಡು/ಹಾಡಿಗಳನ್ನು ಗುರುತಿಸಿ ಅವುಗಳನ್ನು ಕ್ಯಾಂಪ್ ಮೋಡ್ ಎಂದು ಪರಿಗಣಿಸಿ ನೆಟ್ ವರ್ಕ್ ದೊರಕುವ ಪ್ರದೇಶಗಳಲ್ಲಿ ಕ್ಯಾಂಪ್‍ಗಳನ್ನು ಸ್ಥಾಪಿಸಿ ವಿವಿಧ ಇಲಾಖೆಯ ಸರ್ಕಾರಿ ವಾಹನಗಳಲ್ಲಿ ಗ್ರಾಮಸ್ಥರನ್ನು ಕ್ಯಾಂಪ್‍ಗಳಿಗೆ ಕರೆದುಕೊಂಡು ಬಂದು ಸಮೀಕ್ಷೆ ನಡೆಸಲಾಗಿದೆ. ಯಾವುದೇ ಮನೆಯು ಸಮೀಕ್ಷೆಯಿಂದ ಬಿಟ್ಟು ಹೋಗದಂತೆ ಕೂಂಬಿಂಗ್ ನಡೆಸಿ ಪರಿಶೀಲಿಸಲಾಗಿದೆ.

ಸಮೀಕ್ಷೆಯಿಂದ ಯಾವುದಾದರು ಕುಟುಂಬಗಳು ಕೈಬಿಟ್ಟು ಹೋಗಿದ್ದಲ್ಲಿ ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗದೆ ಜಿಲ್ಲಾಧಿಕಾರಿಗಳ ಕಚೇರಿಯ ಕಂಟ್ರೋಲ್ ರೂಂ ಸಹಾಯವಾಣಿ ಸಂಖ್ಯೆ 08226-223160/161/163 ಮತ್ತು ಮೊಬೈಲ್ ಸಂಖ್ಯೆ 9740942901 ಸಂಪರ್ಕಿಸಿ ಮಾಹಿತಿ ನೀಡಿದಲ್ಲಿ ಗಣತಿದಾರರನ್ನು ನಿಯೋಜಿಸಿ ಗಣತಿ ಕಾರ್ಯವನ್ನು ಪೂರ್ಣಗೊಳಿಸಲಾಗುವುದು. ಈ ಸಂಬಂಧ ಸಾರ್ವಜನಿಕರಲ್ಲಿ ಯಾವುದೇ ಗೊಂದಲ ಮತ್ತು ದೂರು ಇದ್ದಲ್ಲಿ ಕಂಟ್ರೋಲ್ ರೂಂ ಸಹಾಯವಾಣಿಯನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *