

ಸೇವಾ ಭಾರತಿ ಕನ್ನಡ ಮಾಧ್ಯಮ ಶಾಲೆ ಚಾಮರಾಜನಗರದ ಶಂಕರಪುರ ಬಡಾವಣೆಯಲ್ಲಿರುವ ಸೇವಾ ಭಾರತಿ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳನ್ನು ವಿಶೇಷ ರೀತಿಯಾಗಿ ಸ್ವಾಗತಿಸಲಾಯಿತು.
ಶಾಲೆಯ ಮುಂಭಾಗ ಸರಸ್ವತಿ ಪೂಜೆಯನ್ನು ನೆರವೇರಿಸಿ. ವಿದ್ಯಾರ್ಥಿಗಳಿಗೆ ಅಕ್ಷತೆಯನ್ನು ನೀಡಿ ಸರಸ್ವತಿ ದೇವರಿಗೆ
ನಮಸ್ಕರಿಸಿ ಆಶೀರ್ವಾದ ಪಡೆದು ಮಕ್ಕಳನ್ನು ಶಾಲೆಗೆ ವಿಶೇಷ ರೀತಿಯಾಗಿ ಬರಮಾಡಿಕೊಂಡರು.
ಸೇವಾ ಭಾರತಿ ಸಂಸ್ಥೆಯ ಸದಸ್ಯರಾದ ಬಾಲಸುಬ್ರಹ್ಮಣ್ಯ ರವರು ಮಕ್ಕಳನ್ನು ಸ್ವಾಗತಿಸಿದರು, ಸೇವಾ ಭಾರತಿ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀನಿವಾಸ್, ಸೇವಾ ಭಾರತಿ ಕನ್ನಡ ಮಾಧ್ಯಮ ಪ್ರೌಢಶಾಲೆಯ ಶಿಕ್ಷಕವೃಂದ
ವಿದ್ಯಾರ್ಥಿಗಳನ್ನು ಸ್ವಾಗತಿಸಿದರು.