ಜಿಲ್ಲಾಮಟ್ಟಕ್ಕೆ ಆಯ್ಕೆಯಾದ ಅನ್ವೇಷಣಾ ಶಾಲೆಯ ವಿದ್ಯಾರ್ಥಿಗಳು

ಬಿಳಿಗೆರೆ : ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಿಜೇತರಾಗಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಅನ್ವೇಷಣಾ ಸಂಸ್ಥೆಯ ಕಾರ್ಯದರ್ಶಿ ಪ್ರಶಾಂತ್ ಹೆಚ್.ಸಿ ಅಭಿನಂದಿಸಿ, ಮುಂದಿನ ಸ್ಪರ್ಧೆಗೆ ಶುಭಕೋರಿದರು.

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಿಜೇತರಾಗಿದ್ದ ಹುಣಸೂರು ತಾಲ್ಲೂಕಿನ ಬಿಳಿಗೆರೆ ಗ್ರಾಮದಲ್ಲಿರುವ ಅನ್ವೇಷಣಾ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಇದರಲ್ಲಿ ಮನೋಜ್ ಕುಮಾರ್ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಇಂಚರ ಭರತನಾಟ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸುವ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವುದು ಸಂಸ್ಥೆಗೆ ಹೆಮ್ಮೆಯ ವಿಷಯ ಎಂದು ಸಂಸ್ಥೆಯ ಪ್ರಾಂಶುಪಾಲ ಗಿರೀಶ್ ಹೆಚ್,ಎನ್ ಹರ್ಷ ವ್ಯಕ್ತಪಡಿಸಿದರು.

ಮುಭಾಷಿರ್ ಉರ್ದು ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ, ಚೇತೇಶ್, ಲೋಹಿತ್, ಮೊಹಮ್ಮದ್ ಮುಯೀನ್, ಜೈನ್ ಉಲ್ಲಾಷರೀಫ್, ಮೊಹಮ್ಮದ್ ಉಜೈಫಾ, ಮುಭಾಷಿರ್ ವಿದ್ಯಾರ್ಥಿಗಳ ತಂಡ ಕವ್ವಾಲಿ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

ವಿಜೇತರಾದ ಮಕ್ಕಳಿಗೆ ಸಂಸ್ಥೆಯ ಮುಖ್ಯಸ್ಥರಾದ ಹೆಚ್.ಕೆ.ಚಂದ್ರಮೋಹನ್ ಅಭಿನಂದಿಸಿದ್ದು, ಜಿಲ್ಲಾಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶುಭಕೋರಿದ್ದಾರೆ.

ಈ ಸಂದರ್ಭದಲ್ಲಿ ಉಪ ಪ್ರಾಂಶುಪಾಲೆ ಆಶಾನಂದೀಶ್, ಶಿಕ್ಷಕರುಗಳಾದ ರವಿಚಂದ್ರ, ಕಾವ್ಯ, ಶ್ವೇತಾ, ಖುತೇಜಾ, ಸೌಂದರ್ಯ ಇದ್ದರು.

Leave a Reply

Your email address will not be published. Required fields are marked *