ಚಾಮರಾಜನಗರ: ಪ್ರತಿಯೊಬ್ಬ ವಿದ್ಯಾರ್ಥಿಗಳು ಕನ್ನಡ ಭಾಷೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಯಳಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇತಿಹಾಸ ವಿಭಾಗ ಮುಖ್ಯಸ್ಥ ಮಾಂತೇಶ್ ಟಿ ತಿಳಿಸಿದರು.
ನಗರದ ಜೋಡಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಇತಿಹಾಸ ವಿಭಾಗ. ಹಾಗೂ ಐ ಕ್ಯೂ ಎಸಿ. ಸಂಯುಕ್ತ ಆಶ್ರಯದಲ್ಲಿ ನಡೆದ ಕರ್ನಾಟಕದಲ್ಲಿ ಏಕೀಕರಣ ಚಳುವಳಿ ಮಹತ್ವ. ಕಾರ್ಯಕ್ರಮವನ್ನು ಗಿಡಕ್ಕೆ ನೀರು ಹಾಕು ಮೂಲಕ ಚಲನೆ ನೀಡಿ ಮಾತನಾಡಿ, ಕರ್ನಾಟಕ ಏಕೀಕರಣ ಸಮಯದಲ್ಲಿ ಕನ್ನಡ ಭಾಷೆ ಸಾಹಿತ್ಯ ಸಂಸ್ಕೃತಿ ಹಲವಾರು ಸೇವೆ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದರು.
ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಪ್ರಥಮ ಆದ್ಯತೆ ನೀಡಿದಾಗ ಮಾತ್ರ ಕನ್ನಡ ಭಾಷೆ ಉಳಿಯುವುದು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಇತಿಹಾಸ ವಿಭಾಗ ಮುಖ್ಯಸ್ಥ ಡಾ ಜಯಣ್ಣ ಬಿ ಆರ್ ಮಾತನಾಡಿ. ನಮ್ಮ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿಗೆ ನ್ಯಾಕ್ ನಿಂದ ಬೀ ಗ್ರೇಡ್ ಮಾನ್ಯತೆ ಪಡೆದಿದೆ. ಆದ್ದರಿಂದ ವಿದ್ಯಾರ್ಥಿಗಳ ಪ್ರತಿಭಾ ಹೊರ ಚಲ್ಲಲು. ಹಾಗೂ ಪರೀಕ್ಷೆಗೆ ಅನುಕೂಲವಾಗಲು ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ ಎಂದು ತಿಳಿಸಿದರು
ಅಧ್ಯಕ್ಷತೆಯನ್ನು ಕಾಲೇಜಿನ ಉಪನ್ಯಾಸಕಿ ಪ್ರಭಾವತಿ ವಹಿಸಿದರು.
ವೇದಿಕೆಯಲ್ಲಿ ಐ ಕ್ಯೂ ಎಸಿ ಸಂಚಾಲಕ ಪಿ ಬಾಲಸುಬ್ರಮಣ್ಯಂ, ಉಪನ್ಯಾಸಕ ಎಮ್ ರೋಹಿತ್, ನಂಜನಗೂಡು ತಾಲೂಕು ಉಳ್ಳಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ಚಂದ್ರಶೇಖರ್ ಸೇರಿದಂತೆ ಇತರರು ಹಾಜರಿದ್ದರು.