ಮೈಸೂರು: ಕರುನಾಡ ದೀಪ ಸೇವಾ ಟ್ರಸ್ಟ್ ವತಿಯಿಂದ ಮೈಸೂರು ನಗರದ ರೋಟರಿ ಭವನದಲ್ಲಿ ಆಯೋಜಿಸಿದ್ದ ವಿವಿಧ ಕ್ಷೇತ್ರಗಳ ನಾಡಿನ ಸಾಧಕರುಗಳಿಗೆ ಅಭಿನಂದನಾ ಸಮಾರಂಭದಲ್ಲಿ ಪಾಂಡವಪುರ ಉಪವಲಯ ಅರಣ್ಯಾಧಿಕಾರಿ ಎಸ್.ಸೋಮು ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಉಕ್ಕಿನ ಕಂತೆ ಮಠದ ಶ್ರೀ ಸಾಂಬ ಸದಾಶಿವ ಸ್ವಾಮೀಜಿ, ಚಲನಚಿತ್ರ ನಟ ಶಂಕರ್ ಅಶ್ವಥ್, ಚಿತ್ರನಟಿ ಕಾವ್ಯ, ಕರುನಾಡ ದೀಪ ಸೇವಾ ಟ್ರಸ್ಟ್ ಅಧ್ಯಕ್ಷ ಕೆ.ಟಿ.ಮೋಹನ್ ಕುಮಾರ್, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಸೋಮಶೇಖರ್, ನಂಜನಗೂಡು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಕರಳಾಪುರ ನಾಗರಾಜು, ಗ್ರಾಮೀಣ ನಿಧಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಕೆ.ಆರ್.ಶ್ಯಾಮಸುಂದರ್, ನಿರ್ದೇಶಕ ಎಂ.ಎಸ್.ನರಸಿಂಹ ಇದ್ದರು.
