ಮೇ 9 ರಿಂದ 10 ರವರೆಗೆ ಬಿಳಿಗಿರಿರಂಗನ ಬೆಟ್ಟಕ್ಕೆ ದ್ವಿಚಕ್ರ ವಾಹನಗಳ ನಿಷೇಧ: ಜಿಲ್ಲಾಧಿಕಾರಿ‌ ಆದೇಶ

ಚಾಮರಾಜನಗರ: ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದ ಬಿಳಿಗಿರಿರಂಗನಾಥ ಸ್ವಾಮಿಯ ಬ್ರಹ್ಮ ರಥೋತ್ಸವ ಹಾಗೂ ದೊಡ್ಡ ಜಾತ್ರೆಗಾಗಿ ಮೇ 9 ಹಾಗೂ 10 ರಂದು ಬಿಳಿಗಿರಿರಂಗನ ಬೆಟ್ಟಕ್ಕೆ ದ್ವಿಚಕ್ರ ವಾಹನಗಳಲ್ಲಿ ತೆರಳುವುದನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಆದೇಶ ಹೊರಡಿಸಿದ್ದಾರೆ.

ಬಿಳಿಗಿರಿರಂಗನ ಬೆಟ್ಟದಲ್ಲಿ ಮೇ 10 ರಂದು ಬಿಳಿಗಿರಿರಂಗನಾಥಸ್ವಾಮಿಯವರ ಬ್ರಹ್ಮ ರಥೋತ್ಸವ ಹಾಗೂ ದೊಡ್ಡಜಾತ್ರೆ ನಡೆಯಲಿದ್ದು,ಬೆಟ್ಟಕ್ಕೆ ಜಿಲ್ಲೆ,ಹೊರ ಜಿಲ್ಲೆಗಳಿಂದ ಲಕ್ಷಕ್ಕೂ ಹೆಚ್ಚು ಭಕ್ತರು ಸೇರುವ ಸಂಭವವಿದ್ದು ವಾಹನ ದಟ್ಟಣೆ ಹೆಚ್ಚಾಗಲಿದೆ.ಸದರಿ ರಸ್ತೆಯು ಅರಣ್ಮ ಪ್ರದೇಶ ಹಾಗೂ ಕಡಿದಾದ ತಿರುವುಗಳಿಂದ ಕೂಡಿದ್ದು ವಾಹನ ಸಂಚಾರದಲ್ಲಿ ದಟ್ಟಣೆ ಉಂಟಾಗಿ ಅಪಘಾತಗಳು ಸಂಭವಿಸುವ ಸಾಧ್ಯತೆ ಇರುವ ಕಾರಣ ಬಿಳಿಗಿರಿರಂಗನ ಬೆಟ್ಟಕ್ಕೆ ಚಾಮರಾಜನಗರ ತಾಲೂಕಿನ ಹೊಂಡರಬಾಳು ಅರಣ್ಯ ಚೆಕ್ ಪೋಸ್ಟ್ ಹಾಗೂ ಯಳಂದೂರು ತಾಲೂಕಿನ ಗುಂಬಳ್ಳಿ ಅರಣ್ಯ ಚೆಕ್ ಪೋಸ್ಟ್ ಮೂಲಕ ಮೇ 9 ರಿಂದ 10 ರವರೆಗೆ ದ್ವಿಚಕ್ರ ವಾಹನಗಳಲ್ಲಿ ತೆರಳುವುದನ್ನು ತಾತ್ಕಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *