ಆ.9ರಂದು ಯಳಂದೂರಿಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ : ಸಾರ್ವಜನಿಕರಿಂದ ದೂರು ಸ್ವೀಕಾರ

ಚಾಮರಾಜನಗರ: ಜಿಲ್ಲೆಯ ಲೋಕಾಯುಕ್ತ ಅಧಿಕಾರಿಗಳು ಆಗಸ್ಟ್ ೯ರಂದು ಯಳಂದೂರಿಗೆ ಭೇಟಿ ನೀಡಿ ಅಲ್ಲಿನ ತಾಲೂಕು ಪ್ರವಾಸಿಮಂದಿರದಲ್ಲಿ (ಐ.ಬಿ) ಸಾರ್ವಜನಿಕರಿಂದ ದೂರು ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ.

ಆಗಸ್ಟ್ ೯ರಂದು ಬೆಳಿಗ್ಗೆ ೧೧ ರಿಂದ ಮಧ್ಯಾಹ್ನ ೧ ಗಂಟೆಯವರೆಗೆ ಯಳಂದೂರಿನ ಪ್ರವಾಸಿಮಂದಿರದಲ್ಲಿ ಸಾರ್ವಜನಿಕರಿಂದ ದೂರು ಅರ್ಜಿಗಳನ್ನು ಸ್ವೀಕರಿಸುವರು. ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಕೆಲಸ ಮಾಡಿಕೊಡಲು ಅಧಿಕಾರಿ, ಸಿಬ್ಬಂದಿಯಿಂದ ಲಂಚದ ಬೇಡಿಕೆ, ಕಚೇರಿ ಕೆಲಸದಲ್ಲಿ ಅನಗತ್ಯ ವಿಳಂಬ, ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ಹಾಗೂ ನೌಕರರ ವಿರುದ್ದ ಸಾರ್ವಜನಿಕರು ಲೋಕಾಯುಕ್ತ ಕಾಯ್ದೆಯಡಿ ದೂರುಗಳನ್ನು ನಿಗದಿತ ನಮೂನೆ-೧ ಮತ್ತು ೨ರಲ್ಲಿ ಭರ್ತಿ ಮಾಡಿ ನೀಡಬಹುದು.

ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಚಾಮರಾಜನಗರದ ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *