ಕೇಂದ್ರ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಧೆಓಲೆ ಹಚ್ಚಿ ಅಕ್ರೋಶ

ಚಾಮರಾಜನಗರ:  ಕೇಂದ್ರ ಬಿಜೆಪಿ ಸರ್ಕಾರ ಪೆಟ್ರೋಲ್, ಡಿಸೇಲ್, ಎಲ್.ಪಿ.ಜಿ.ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಯೋಗೇಂದ್ರ ಅವರ ನೇತೃತ್ವದಲ್ಲಿ ನಗರದಲ್ಲಿ  ಪ್ರತಿಭಟನೆ ನಡೆಸಲಾಯಿತು.

ನಗರದ ಚಾಮರಾಜೇಶ್ವರ ದೇವಾಲಯದ ಆವರಣದಲ್ಲಿ ಸಮಾವೇಶ ಗೊಂಡ ಪ್ರತಿಭಟನಾನಿರತರು ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ,ಖಾಲಿ ಸಿಲಿಂಡರ್, ಸೈಕಲ್ ಪ್ರದರ್ಶಿಸಿ ನಡುರಸ್ತೆಯಲ್ಲಿ ಸೌದೆ ಒಲೆ ಹೊತ್ತಿಸಿ ಪ್ರತಿಭಟನೆ ನಡೆಸಿದರು
ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ನಗರದ ಭುವನೇಶ್ವರಿ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟನೆ, ಖಾಲಿ ಸಿಲಿಂಡರ್ ಹಿಡಿದು ಸೌದೆ ಒಲೆ ಹೊತ್ತಿಸಿ, ಪ್ರಧಾನಿ ಮೋದಿ ವಿರುದ್ಧ ಪ್ಲೆಕಾರ್ಡ್ ಹಿಡಿದು ಸಿಲಿಂಡರ್, ಇಂಧನ ಬೆಲೆ ಏರಿಕೆಗೆ ಖಂಡಿಸಿ ಕೇಂದ್ರ ಬಿಜೆಪಿ ಸರ್ಕಾರ ದೇಶದ  ಜನರ ಹೊಟ್ಟೆಯ ಮೇಲೆ ಬರೆ ಎಳೆದಿದ್ದಾರೆ, ಪೆಟ್ರೋಲ್, ಡಿಸೇಲ್ ಮತ್ತು ಎಲ್‌ಪಿಜಿ ಗ್ಯಾಸ್ ಬೆಲೆ ಏರಿಕೆಯಿಂದ ಬಡ ಮತ್ತು ಮಧ್ಯಮ ವರ್ಗದವರ ಜೀವನವನ್ನು ಸಂಕಷ್ಟಕ್ಕೆ ತಳ್ಳಿದ್ದಾರೆ. ಉದ್ಯೋಗವಿಲ್ಲ, ನಿರುದ್ಯೋಗ ಸಮಸ್ಯೆ ತಲೆದೋರಿದೆ, ಬೆಲೆ ಏರಿಕೆಯಿಂದ ಜನರು ಜೀವನ ನಡೆಸುವುದಾದರೂ ಹೇಗೆ ಎಂದು ನರೇಂದ್ರ ಮೋದಿ ವಿರುದ್ಧ ಹರಿಹಾಯ್ದರು.

ಪ್ರಧಾನಿ ನರೇಂದ್ರಮೋದಿರವರ  ದುರಾಡಳಿತದಿಂದ ದೇಶದ ಆರ್ಥಿಕ ಪರಿಸ್ಥಿತಿ ಕುಸಿದಿದೆ, ಅಚ್ಚೇದಿನ್ ಎಂದರೆ ಇದೇನಾ? ಜನಸಾಮಾನ್ಯರ ನೋವಿಗೆ, ಸ್ಪಂದಿಸುವ ಕಾರ್ಯ ಯುವ ಕಾಂಗ್ರೆಸ್ ಮಾಡುತ್ತಿದೆ, ಕೇಂದ್ರ ಬಿಜೆಪಿ ಸರ್ಕಾರ ಬೆಲೆ ಏರಿಕೆ ಖಂಡಿಸಿ ರಾಜ್ಯಾದ್ಯಂತ ಯುವ ಕಾಂಗ್ರೆಸ್ ಹೋರಾಟ ನಡೆಯುತ್ತಿದ್ದು ಅದರ ಜಿಲ್ಲೆಯಲ್ಲೂ ಪ್ರತಿಭಟನೆ ಮಾಡಲಾಗಿದೆ. ಕೂಡಲೇ ಬೆಲೆ ಏರಿಕೆ ಹಿಂಪಡೆಯಬೇಕು ಎಂದು ಆಗ್ರಹಿಸಿದರು

ಪ್ರತಿಭಟನೆಯಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಸೈಯದ್ ಮುಸಾಯಿಬ್, ಫರ್ದನ್, ಗೀತಾ ಸಿದ್ದರಾಜು, ಚಂದನ್, ಪ್ರಧಾನ ಕಾರ್ಯದರ್ಶಿ ನಂಜುಂಡಶೆಟ್ಟಿ, ವಿಶ್ವ, ಮುಖಂಡ ನಾಗೇಂದರ, ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಅಕ್ಷಯ್ ಕುಮಾರ್, ಉಸ್ಮಾನ್, ಸಚಿನ್, ಎನ್ ಎಸ್ ಯುಐ ಜಿಲ್ಲಾಧ್ಯಕ್ಷ ಮೋಹನ್  ನಗು, ಶಶಾಂಕ್, ಮುತ್ತು, ರಾಜ್ಯ ಕಾರ್ಯದರ್ಶಿ ಸ್ವಾಮಿ, ಗೌಡಹಳ್ಳಿ ರಾಜೇಶ್, ಆನಂತ್, ಸೈಯದ್ ತೋಸಿಫ್, ಲೋಹಿತ್, ವಿಜಯ್, ಅಜಯ್, ವಿಶ್ವ, ವಿಶ್ವಾಸ್, ಮಾದೇಶ್ , ನವೀನ್ ಇತರರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *