ಚಾಮರಾಜನಗರ: ತಾಲೂಕಿನ ಕೆಲ್ಲಂಬಳ್ಳಿ ಗ್ರಾಮದ ಚಾವಡಿಯಲ್ಲಿ ನಡೆದ ೭೭ನೇ ವರ್ಷದ ಸ್ವಾತಂತ್ರೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಲಾಯಿತು.
ಗ್ರಾಮದ ಪರಿಶಿಷ್ಟ ಸಮುದಾಯದ ಚಾವಡಿ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಗ್ರಾ.ಪಂ. ಸದಸ್ಯ ರಾಜೇಶ್ ಧ್ವಜಾರೋಹಣ ನೆರವೇರಿಸಿದರು. ಮಕ್ಕಳು ಭಾರತಾಂಭೆ, ಅಂಬೇಡ್ಕರ್, ಗಾಂಧೀಜಿ, ನೆಹರು, ಸುಭಾಶ್ ಚಂದ್ರ ಭೋಷ್ ವೇಷಧಾರಿಗಳಾಗಿ ಗ್ರಾಮದಲ್ಲಿ ಮೆರವಣಿಗೆ ಮಾಡಿದರು. ಮಕ್ಕಳಿಗೆ ಸಿಹಿ ಹಂಚಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಗ್ರಾ.ಪಂ. ಸದಸ್ಯ ರಾಜೇಶ್, ಅನೇಕ ಮಹನೀಹರ ತ್ಯಾಗ ಬಲಿದಾನದಿಂದಾಗಿ ಸ್ವಾತಂತ್ರ್ಯ ದೊರೆತಿದೆ. ನಾವೆಲ್ಲರು ಒಗ್ಗಟ್ಟಿನಿಂದ ಸಹಬಾಳ್ವೆಯ ನಡೆಸುವ ಮೂಲಕ ಡಾ.ಬಿ.ಆರ್. ಅಂಬೇಡ್ಕರ್ ಅವರು ನೀಡಿರುವ ಸಂವಿಧಾನದ ಆಶಯಗಳನ್ನು ಈಡೇರಿಸೋಣ. ಎಲ್ಲರಿಗೂ ೭೭ನೇ ವರ್ಷದ ಸ್ವಾತಂತ್ತ್ಯೋತ್ಸವದ ಶುಭಾಶಯಗಳನ್ನು ಕೋರಿದರು.
ಈ ಸಂದರ್ಭದಲ್ಲಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಕೆಲ್ಲಂಬಳ್ಳಿ ನಾಗರಾಜು, ಅಂಬೇಡ್ಕರ್ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಗ್ರಾಮದ ಯಜಮಾನರು. ಮುಖಂಡರು. ಶಾಲೆಯ ಮುಖ್ಯ ಶಿಕ್ಷಕರು, ಸಹ ಶಿಕ್ಷಕ ವೃಂದವರು , ವಿದ್ಯಾರ್ಥಿಗಳು ಭಾಗವಹಿಸಿದ್ದರು.