ಚಾಮರಾಜನಗರ: ತಾಲೂಕಿನ ಚಂದಕವಾಡಿ ಗ್ರಾಮದ ಸರಕಾರಿ ಪಬ್ಲಿಕ್ ಶಾಲೆಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಭೇಟಿ ನೀಡಿ, ಕೊಠಡಿಗಳನ್ನು ಪರಿಶೀಲಿಸಿದರು.
ಶಾಲೆಯ ೭, ೮, ೯ ಮತ್ತು ೧೦ ನೇ ತರಗತಿ ಕೊಠಡಿಗಳಲ್ಲಿ ಮಳೆ ನೀರು ಸೋರಿಕೆಯಾಗುತ್ತಿದ್ದು, ಶಾಲಾಮಕ್ಕಳ ಕಲಿಕೆಗೆ ತೊಂದರೆಯಾಗುತ್ತಿದೆ ಎಂದು ಶಾಲಾ ಶಿಕ್ಷಕರು ಶಾಸಕರ ಗಮನಕ್ಕೆ ತಂದಿದ್ದರು. ಅದರಂತೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಶಾಲೆಗೆ ಭೇಟಿನೀಡಿ, ಸೋರುತ್ತಿರುವ ಕೊಠಡಿಗಳು ಹಾಗೂ ಕಟ್ಟಡದ ಮೇಲ್ಛಾವಣಿಯನ್ನು ಪರಿಶೀಲಿಸಿದರು. ಇದೇವೇಳೆ ಅವರು ಮಾತನಾಡಿ,” ಗ್ರಾಮದ ಪಬ್ಲಿಕ್ ಶಾಲೆಯಲ್ಲಿ ಹಿಂದುಳಿದ ವರ್ಗಗಳ ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಅವರ ಓದಿಗೆ ಸಮಸ್ಯೆಯಾಗದಂತೆ ಕಟ್ಟಡದ ದುರಸ್ತಿಗೆ ಸಂಬಂಧಪಟ್ಟ ಇಲಾಖಾಧಿಕಾರಿಗಳ ಜತೆಚರ್ಚಿಸಿ ಕ್ರಮವಹಿಸಲಾಗುವುದು, ತಮ್ಮ ಕ್ಷೇತ್ರ ವ್ಯಾಪ್ತಿಯ ಶಾಲೆಗಳಲ್ಲಿ ಮೂಲಸೌಕರ್ಯಗಳು ಕೊರತೆಯಾದರೆ ಕೂಡಲೇ ಸ್ಪಂದಿಸುವ ಕಾರ್ಯ ಮಾಡಲಾಗುತ್ತಿದೆ ಎಂದರು.